23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಧರ್ಮಸ್ಥಳ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು.

ಕಾರ್ಯಕ್ರಮಕ್ಕೆ ಅತಿಥಿಗಳಾಗಿ ಧರ್ಮಸ್ಥಳ ಶ್ರೀ ಧ. ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ಪದ್ಮರಾಜ್ ಎನ್. ಜೈನ್ ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿ ರಾಷ್ಟ್ರೀಯ ಹಬ್ಬಗಳನ್ನು ಅತ್ಯಂತ ಸಂಭ್ರಮದಿಂದ ನಾವು ಆಚರಿಸಬೇಕು. ಭಾರತದ ಇತಿಹಾಸ ,ಭಾರತದ ಪರಂಪರೆ, ಸ್ವರಾಜ್ಯದ ಮಹತ್ವ, ಒಗ್ಗಟ್ಟಿನ ಬಲ, ವಿದ್ಯಾರ್ಥಿಗಳ ಕರ್ತವ್ಯ ಹಾಗೂ ತನ್ನ ಗುಣದಲ್ಲಿ ಮಾಡಬೇಕಾದ ಉತ್ತಮ ಮಾರ್ಪಾಡುಗಳನ್ನು, ಸಂವಿಧಾನದ ರಚನೆ ಹಾಗೂ ಮಹತ್ವ ಜೊತೆಗೆ ವಿದ್ಯಾರ್ಥಿಗಳು ರೂಢಿಸಿಕೊಳ್ಳಬೇಕಾದ ಉತ್ತಮ ಹವ್ಯಾಸ ಇತ್ಯಾದಿಗಳನ್ನು ಹಲವು ಉದಾಹರಣೆ ಹಾಗೂ ಕಥೆಗಳ ಮೂಲಕ ವಿದ್ಯಾರ್ಥಿಗಳ ಮನ ಮುಟ್ಟುವಂತೆ ವಿವರಿಸಿದರು.

ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪರಿಮಳ ಎಂ.ವಿ ಪ್ರಾಸ್ತಾವಿಸಿ, ಸ್ವಾಗತಿಸಿದರು.

ಬಳಿಕ ವಿದ್ಯಾರ್ಥಿಗಳು ದೇಶಭಕ್ತಿಯನ್ನು ಬಿಂಬಿಸುವ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಶಾಲಾ ಶಿಕ್ಷಕರು, ಶಿಕ್ಷಕೇತರ ಸಿಬ್ಬಂದಿಗಳ ಹಾಗೂ ವಿದ್ಯಾರ್ಥಿಗಳ ಭಾಗವಹಿಸಿದ್ದರು.

ವಿದ್ಯಾರ್ಥಿಗಳಾದ ಕು. ಪೂರ್ವಿ ಭಟ್ ಕಾರ್ಯಕ್ರಮ ನಿರೂಪಿಸಿದರು. ಕು. ಶ್ರೇಯಾ ಅತಿಥಿಗಳನ್ನು ಪರಿಚಯಿಸಿದರು. ಕು. ಧನ್ಯಶ್ರಿ ವಂದಿಸಿದರು.

Related posts

ನಡ ಸರಕಾರಿ ಪ್ರೌಢಶಾಲೆಗೆ ಶೇ. 97.82 ಫಲಿತಾಂಶ

Suddi Udaya

ಉಜಿರೆ ಕಕ್ಕರೆಬೆಟ್ಟು ಮನೆ ಕೆಡವಿ, ಸೊತ್ತುಗಳನ್ನು ಹೊರಗೆ ಎಸೆದ ಪ್ರಕರಣ: ಆರೋಪಿ ವಿರುದ್ಧ ಕೇಸು ದಾಖಲು

Suddi Udaya

ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನಾ ಸಂಚಾಲಕ ಚಂದು ಎಲ್ ರವರ ಆರೋಗ್ಯ ವಿಚಾರಿಸಿದ ರಾಜ್ಯ ಪ್ರಧಾನ ಸಂಚಾಲಕ ಮಾವಳ್ಳಿ ಶಂಕರ್

Suddi Udaya

ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಜಯಂತ್ ಟಿ ಹಾಜರು: ಒಳದಾರಿಯಲ್ಲಿ ಓಡಿ ಹೋಗಿ ಕಚೇರಿ ಪ್ರವೇಶ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವಾರ್ಷಿಕ ಮೇಷ ಜಾತ್ರಾ ಮಹೋತ್ಸವ

Suddi Udaya

ಬೆಳ್ತಂಗಡಿ ಗ್ರಾಹಕರ ವಿವಿದೋದ್ದೇಶ ಸಹಕಾರ ಸಂಘದ ನಿರ್ದೇಶಕರುಗಳ ಅವಿರೋಧ ಆಯ್ಕೆ

Suddi Udaya
error: Content is protected !!