27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಪೆರ್ಲ-ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಬ್ರಹ್ಮಕಲಶೋತ್ಸವದ ಯಶಸ್ಸಿಗೆ ಸಹಕರಿಸಿದವರಿಗೆ ಅಭಿನಂದನಾ ಸಭೆ

ಬಂದಾರು: ಬಂದಾರು ಗ್ರಾಮ ಪೆರ್ಲ-ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಪುನರ್ ಪ್ರತಿಷ್ಠಾಬಂಧ ಬ್ರಹ್ಮಕಲಶೋತ್ಸವ ಕಾರ್ಯಕ್ರಮದ ಯಶಸ್ಸಿಗೆ ಕಾರಣಿಕರ್ತರಾದ ಸಮಸ್ತರಿಗೆ ಅಭಿನಂದನಾ ಸಭೆ ಸಿದ್ಧಿಶ್ರೀ ಕಲಾವೇದಿಕೆಯಲ್ಲಿ ಜ.೨೬ರಂದು ನಡೆಯಿತು.

ಬ್ರಹ್ಮಕಲಶೋತ್ಸವ ಯಶಸ್ಸಿಗೆ ಕಾರಣಿಭೂತರಾದ ವಿವಿಧ ಸಮಿತಿಗಳಿಗೆ, ದಾನಿಗಳಿಗೆ, ಭಕ್ತವೃಂದಕ್ಕೆ ಅಭಿನಂದನೆ ಸಲ್ಲಿಸಿ ಯುವ ಉದ್ಯಮಿ ಕಿರಣ್‌ಚಂದ್ರ ಡಿ ಪುಷ್ಪಗಿರಿಯವರು ಶುಭನುಡಿ ಸಲ್ಲಿಸಿದರು.

ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಮಹಾಬಲ ಗೌಡ ಅಧ್ಯಕ್ಷತೆಯನ್ನು ವಹಿಸಿದ್ದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಕೃಷಿ ವಿಭಾಗ ಮುಖ್ಯಸ್ಥ ಬಜೆಗುತ್ತು ಬಾಲಕೃಷ್ಣ ಪೂಜಾರಿ ಯವರು ಅಭಿನಂದನಾ ಮಾತುಗಳನ್ನಾಡಿದರು.

ಮುಖ್ಯ ಅತಿಥಿಗಳಾಗಿ ಉಜಿರೆ ಎಸ್‌ಡಿಎಂ ಕಾಲೇಜು ಉಪನ್ಯಾಸಕ ಡಾ. ದಿವಾ ಕೊಕ್ಕಡ ಸಂದರ್ಭಯೋಚಿತವಾಗಿ ಮಾತುಗಳನ್ನಾಡಿದರು.

ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬೆಳ್ತಂಗಡಿ ವಿಭಾಗ ಯೋಜನಾಧಿಕಾರಿ ಸುರೇಂದ್ರ, ಅನುವಂಶೀಯ ಆಡಳಿತ ಮೊಕ್ತೇಸರ ಕುಕ್ಕಪ್ಪ ಗೌಡ, ಆಡಳಿತ ಮಂಡಳಿ ಅಧ್ಯಕ್ಷರಾದ ರಮೇಶ್ ಗೌಡ ಅಡ್ಡಾರು, ಕಾರ್ಯದರ್ಶಿ ಉಮೇಶ್ ಗೌಡ, ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ ಪರಪ್ಪಾಜೆ, ಕೋಶಾಧಿಕಾರಿ ಕೇಶವ ಗೌಡ ಕೊಂಗುಜೆ, ದೇವಳದ ಅರ್ಚಕರಾದ ಅನಂತರಾಮ ಶಬರಾಯ, ಭಜನಾ ಮಂಡಳಿ ಅಧ್ಯಕ್ಷರಾದ ಲಕ್ಷ್ಮಣ ಗೌಡ ಫಲಸದಕೋಡಿ, ಮಹಿಳಾ ಸಮಿತಿ ಅಧ್ಯಕ್ಷರಾದ ಶ್ವೇತಾ ಹಾರ್ತ್ಯಾರು ಉಪಸ್ಥಿತರಿದ್ದರು.

ದೇವಳಕ್ಕೆ ವಸ್ತು ರೂಪದಲ್ಲಿ ಕೊಡುಗೆ ನೀಡಿದ ದಾನಿಗಳನ್ನು ಗೌರವಿಸಲಾಯಿತು. ವಿವಿಧ ಸಮಿತಿ ಪದಾಧಿಕಾರಿಗಳು, ಭಕ್ತವೃಂದವರು ಉಪಸ್ಥಿತರಿದ್ದರು.

ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯದರ್ಶಿ ಸತೀಶ್ ಬಾಲಂಪಾಡಿ ಕಾರ್ಯಕ್ರಮ ನಿರೂಪಿಸಿದರು.

Related posts

ಉಜಿರೆ ಬಸ್ ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿ ಶವ ಪತ್ತೆ

Suddi Udaya

ಬಡವರ ಅಭಿವೃದ್ಧಿಗಾಗಿ ರೂಪಿಸಿದ ಗ್ರಾಮಾಭಿವೃದ್ಧಿ ಯೋಜನೆಯ ವ್ಯವಸ್ಥೆಯನ್ನು ಹಾಳು ಮಾಡುವ ಹುನ್ನಾರ: ಸೂಕ್ತ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ

Suddi Udaya

ಸುದೇಮುಗೇರು ಜೀವನ್ ರವರ ಮನೆಗೆ ಮಂಗಳೂರು ಕಥೋಲಿಕ್ ಸಭಾ ಪ್ರದೇಶ್ ಅಧ್ಯಕ್ಷ ಸಂತೋಷ್ ಡಿಸೋಜ ಹಾಗೂ ಇತರರು ಭೇಟಿ

Suddi Udaya

ಸಿನಿಮಾರಂಗದ ಸೇವೆ : ಜಿ. ಕೃಷ್ಣ ಬೆಳ್ತಂಗಡಿ ಇವರಿಗೆ “ಡಾ. ಲೀಲಾವತಿ ಪ್ರಶಸ್ತಿ”

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ನಡೆದ ಮಚ್ಚಿನ ಶಕ್ತಿ ಕೇಂದ್ರ ಪಂಚಾಯತ್ ಮಟ್ಟದ ಅಭ್ಯಾಸ ವರ್ಗ

Suddi Udaya

ಅಖಿಲ ಕರ್ನಾಟಕ ಶ್ರೀ ಮಂಜುನಾಥ ಸ್ವಾಮಿ ಭಕ್ತವೃಂದದ ಸಮಾವೇಶ: ಬೃಹತ್ ಸಾರ್ವಜನಿಕ ಸಭೆ – ಜಾಥಾ ಮತ್ತು ಹಕ್ಕೊತ್ತಾಯ ಮಂಡನೆ

Suddi Udaya
error: Content is protected !!