July 23, 2026
ಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿರಾಜ್ಯ ಸುದ್ದಿವರದಿ

ಬಿಗ್‌ಬಾಸ್ ಕನ್ನಡ ಸೀಸನ್ 11 ರ ಟ್ರೋಫಿ ಮುಡಿಗೇರಿಸಿಕೊಂಡ ಹಾವೇರಿಯ ಹಳ್ಳಿ ಹೈದ ಹನುಮಂತು

ಬಿಗ್ ಬಾಸ್ ಕನ್ನಡ ಸೀಸನ್ 11ರ ವಿನ್ನರ್ ಯಾರು ಅನ್ನೋ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ. ಹಳ್ಳಿ ಹೈದ ಹಾವೇರಿಯ ಕುವರ ಹನುಮಂತು ಬಿಗ್‌ಬಾಸ್ ಸೀಸನ್ 11ರ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದ್ದಾರೆ.

ತ್ರಿವಿಕ್ರಮ್ ಮತ್ತು ರಜತ್ ಅವರನ್ನು ಹಿಂದಿಕ್ಕೆ ಹಳ್ಳಿ ಹೈದ ಕಪ್ ಗೆ ಮುತ್ತಿಟ್ಟಿದ್ದಾರೆ. ಹನುಮಂತು ಕಪ್ ಜೊತೆಗೆ 50 ಲಕ್ಷ ರೂ ನಗದು ಬಹುಮಾನ ಕೂಡ ಗೆದ್ದಿದ್ದಾರೆ. ಇನ್ನು ತ್ರಿವಿಕ್ರಮ್ ಅವರು ಫಸ್ಟ್ ರನ್ನರ್ ಅಪ್ ಆಗಿ ಒಟ್ಟು 15 ಲಕ್ಷ ರೂ ನಗದು ಬಹುಮಾನ ಗೆದ್ದಿದ್ದಾರೆ.

ಹನುಮಂತ ಅವರಿಗೆ 5 ಕೋಟಿ 23 ಲಕ್ಷಕ್ಕೂ ಅಧಿಕ ವೋಟ್ ಬಂದಿತ್ತು. ರನ್ನರ್ ಅಪ್ ತ್ರಿವಿಕ್ರಮ್ ಗೆ 2 ಕೋಟಿ ಗೂ ಅಧಿಕ ವೋಟ್ ಬಂದಿತ್ತು. ಇದು ಸೀಸನ್ 10ರಲ್ಲಿ ಸ್ಪರ್ಧಿಗಳಿಗೆ ಸಿಕ್ಕ ವೋಟಿಂಗ್‌ಗಿಂತ ಎರಡು ಪಟ್ಟು ಹೆಚ್ಚು. ರಜತ್ ಕಿಶನ್ ಅವರು ಎರಡನೇ ರನ್ನರ್ ಅಪ್ ಆದರು. ಜೊತೆಗೆ 10 ಲಕ್ಷ ರೂ ನಗದು ಬಹುಮಾನ ಗೆದ್ದಿದ್ದಾರೆ.

Related posts

ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆಯ ಪ್ರಯುಕ್ತ ಬಳಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ರಾಮ ತಾರಕ ಮಂತ್ರ ಜಪಯಜ್ಞ ಹಾಗೂ ದೀಪೋತ್ಸವ

Suddi Udaya

ಬೆಳಾಲು ನಿವೃತ್ತ ಮುಖ್ಯೋಪಾಧ್ಯಾಯ ಎಸ್ ಪಿ ಬಾಲಕೃಷ್ಣ ಬಡೆಕ್ಕಿಲಾಯ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

Suddi Udaya

ಚಾರ್ಮಾಡಿ : ಎಸ್ಐಟಿ ತಂಡದ ಎಸ್ಪಿ ಮತ್ತು ಇತರ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಇನೋವಾ ಕಾರು ಪಲ್ಟಿ

Suddi Udaya

ಆ.19: ಧರ್ಮಸ್ಥಳದಲ್ಲಿ ನೈತಿಕ ಮೌಲ್ಯಾಧಾರಿತ ಪುಸ್ತಕಗಳ ಲೋಕಾರ್ಪಣೆ, ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧಾ ವಿಜೇತರಿಗೆ ಪುರಸ್ಕಾರ ಸಮಾರಂಭ

Suddi Udaya

ಶಿಶಿಲ: ನಾಗನಡ್ಕದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಯುವಕ: ಆಸ್ಪತ್ರೆಗೆ ದಾಖಲಿಸಿದ ಶೌರ್ಯ ವಿಪತ್ತು ನಿರ್ವಹಣಾ ತಂಡ

Suddi Udaya

ಸ್ಫೋಟ ಪ್ರಕರಣ: ಧರ್ಮಸ್ಥಳ ಪೊಲೀಸರು ಮತ್ತು ಸೋಕೋ ತಂಡದಿಂದ ಸ್ಥಳ ಮಹಜರು

Suddi Udaya
error: Content is protected !!