22.5 C
ಪುತ್ತೂರು, ಬೆಳ್ತಂಗಡಿ
June 5, 2025
Uncategorized

ಮಂಜುಶ್ರೀ ಮುದ್ರಣಾಲಯದ ಮೇಲ್ವಿಚಾರಕ ವಿಶ್ವನಾಥ ಶೆಟ್ಟಿಯವರಿಗೆ ಬೀಳ್ಕೊಡುಗೆ

ಉಜಿರೆಯ ಮಂಜುಶ್ರೀ ಮುದ್ರಣಾಲಯದಲ್ಲಿ ಸುದೀರ್ಘ 42 ವರ್ಷ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿ ಪ್ರೊಡಕ್ಷನ್ ವಿಭಾಗದ ಮೇಲ್ವಿಚಾರಕರಾಗಿ, ಎಲ್ಲರ ಪ್ರೀತಿ ವಿಶ್ವಾಸಕ್ಕೆ ಪಾತ್ರರಾಗಿ ನಿವೃತ್ತರಾದ ವಿಶ್ವನಾಥ ಶೆಟ್ಟಿಯವರಿಗೆ ಇತ್ತೀಚೆಗೆ ಬೀಳ್ಕೊಡುಗೆ ಸಮಾರಂಭವನ್ನು ಎಸ್.ಡಿ.ಎಂ. ಮಹಿಳಾ ಐ.ಟಿ.ಐ ತರಬೇತಿ ಕೇಂದ್ರದ ಸಭಾಂಗಣದಲ್ಲಿ ನಡೆಯಿತು.

ಮುಖ್ಯ ಅತಿಥಿಯಾಗಿ ಆಗಮಿಸಿ ಉಜಿರೆ ಎಸ್.ಡಿಎಂ, ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳಾದ ಪ್ರೊ. ಎಸ್. ಸತೀಶ್ಚಂದ್ರರವರು ವಿಶ್ವನಾಥ ಶೆಟ್ಟಿ ಮತ್ತು ಶ್ರೀಮತಿ ವನಿತಾ ವಿಶ್ವನಾಥ್ ಶೆಟ್ಟಿ ದಂಪತಿಯನ್ನು ಸನ್ಮಾನಿಸಿದರು.

ಬಳಿಕ ಮಾತನಾಡಿ, ಅವರು ಸಂಸ್ಥೆಗೆ ಸುದೀರ್ಘ ಎರಡು ದಶಕಗಳ ಕಾಲ ಸೇವೆ ಸಲ್ಲಿಸಿದ ವಿಶ್ವನಾಥ ಶೆಟ್ಟರ ಸೇವೆಯನ್ನು ಪ್ರಶಂಸಿಸಿದರು.

ಸಹೋದ್ಯೋಗಿ ಮೋನಪ್ಪ ಟಿ. ಹಾಗೂ ಚಿತ್ತರಂಜನ್ ವಿಶ್ವನಾಥ ಶೆಟ್ಟರ ಕಾರ್ಯವೈಖರಿ ಕುರಿತು ಅನುಭವ ಹಂಚಿಕೊಂಡರು.

ಮಂಜುಶ್ರೀ ಮುದ್ರಣಾಲಯದ ವ್ಯವಸ್ಥಾಪಕರಾದ ಶೇಖರ್ ಟಿ. ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸಹಾಯಕ ವ್ಯವಸ್ಥಾಪಕರಾದ ವೆಂಕಪ್ಪ ವಂದಿಸಿದರು, ರವಿ ಪರಕ್ಕಜೆ ನಿರೂಪಿಸಿದರು.

ಮುದ್ರಣಾಲಯದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ಶ್ರೀ ಸ್ಟಾರ್ ಯುವಕ ಮಂಡಲ & ಶ್ರೀ ಸ್ಟಾರ್ ಮಹಿಳಾ ಮಂಡಲ ಮತ್ತು ಊರ ಸಮಸ್ತ ಭಕ್ತ ಭಾಂದವರಿಂದನಾಗಚಾವಡಿ ಸಾನಿಧ್ಯ ಗುಂಪಲಾಜೆಯಲ್ಲಿ1001 ಹಣತೆ ಹಚ್ಚುವುದರ ಮೂಲಕ ಶ್ರದ್ಧಾ ಭಕ್ತಿಯಿಂದ ಸಾಮೂಹಿಕವಾಗಿ ದೀಪಾವಳಿ ಹಬ್ಬವನ್ನು ಆಚರಣೆ

Suddi Udaya

ವಿಧಾನ ಪರಿಷತ್‌ನ ಉಪಚುನಾವಣೆ: ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಭಾರಿ ಮತಗಳ ಅಂತರದಿಂದ ಗೆಲುವು

Suddi Udaya

ಅಳದಂಗಡಿ ಕೃಷಿಕ ಜಿನ್ನಪ್ಪ ಪೂಜಾರಿ ನಿಧನ

Suddi Udaya

ಬಳಂಜ ಕೃಷಿಕ ಅಣ್ಣಿ ಪೂಜಾರಿ ನಿಧನ

Suddi Udaya

ಶಾಸಕ ಹರೀಶ್ ಪೂಂಜ ಪ್ರಕರಣ: ವಿಚಾರಣೆಗೆ ವಿನಾಯಿತಿ ನೀಡಿದ ನ್ಯಾಯಾಲಯ

Suddi Udaya

ಗೇರುಕಟ್ಟೆಯಲ್ಲಿ ಸಾರ್ವಜನಿಕ ಶ್ರೀ ಮಾರಿಪೂಜೆ

Suddi Udaya
error: Content is protected !!