24 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಮಂಜುಶ್ರೀ ಮುದ್ರಣಾಲಯದ ಮೇಲ್ವಿಚಾರಕ ವಿಶ್ವನಾಥ ಶೆಟ್ಟಿಯವರಿಗೆ ಬೀಳ್ಕೊಡುಗೆ

ಉಜಿರೆಯ ಮಂಜುಶ್ರೀ ಮುದ್ರಣಾಲಯದಲ್ಲಿ ಸುದೀರ್ಘ 42 ವರ್ಷ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿ ಪ್ರೊಡಕ್ಷನ್ ವಿಭಾಗದ ಮೇಲ್ವಿಚಾರಕರಾಗಿ, ಎಲ್ಲರ ಪ್ರೀತಿ ವಿಶ್ವಾಸಕ್ಕೆ ಪಾತ್ರರಾಗಿ ನಿವೃತ್ತರಾದ ವಿಶ್ವನಾಥ ಶೆಟ್ಟಿಯವರಿಗೆ ಇತ್ತೀಚೆಗೆ ಬೀಳ್ಕೊಡುಗೆ ಸಮಾರಂಭವನ್ನು ಎಸ್.ಡಿ.ಎಂ. ಮಹಿಳಾ ಐ.ಟಿ.ಐ ತರಬೇತಿ ಕೇಂದ್ರದ ಸಭಾಂಗಣದಲ್ಲಿ ನಡೆಯಿತು.

ಮುಖ್ಯ ಅತಿಥಿಯಾಗಿ ಆಗಮಿಸಿ ಉಜಿರೆ ಎಸ್.ಡಿಎಂ, ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳಾದ ಪ್ರೊ. ಎಸ್. ಸತೀಶ್ಚಂದ್ರರವರು ವಿಶ್ವನಾಥ ಶೆಟ್ಟಿ ಮತ್ತು ಶ್ರೀಮತಿ ವನಿತಾ ವಿಶ್ವನಾಥ್ ಶೆಟ್ಟಿ ದಂಪತಿಯನ್ನು ಸನ್ಮಾನಿಸಿದರು.

ಬಳಿಕ ಮಾತನಾಡಿ, ಅವರು ಸಂಸ್ಥೆಗೆ ಸುದೀರ್ಘ ಎರಡು ದಶಕಗಳ ಕಾಲ ಸೇವೆ ಸಲ್ಲಿಸಿದ ವಿಶ್ವನಾಥ ಶೆಟ್ಟರ ಸೇವೆಯನ್ನು ಪ್ರಶಂಸಿಸಿದರು.

ಸಹೋದ್ಯೋಗಿ ಮೋನಪ್ಪ ಟಿ. ಹಾಗೂ ಚಿತ್ತರಂಜನ್ ವಿಶ್ವನಾಥ ಶೆಟ್ಟರ ಕಾರ್ಯವೈಖರಿ ಕುರಿತು ಅನುಭವ ಹಂಚಿಕೊಂಡರು.

ಮಂಜುಶ್ರೀ ಮುದ್ರಣಾಲಯದ ವ್ಯವಸ್ಥಾಪಕರಾದ ಶೇಖರ್ ಟಿ. ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸಹಾಯಕ ವ್ಯವಸ್ಥಾಪಕರಾದ ವೆಂಕಪ್ಪ ವಂದಿಸಿದರು, ರವಿ ಪರಕ್ಕಜೆ ನಿರೂಪಿಸಿದರು.

ಮುದ್ರಣಾಲಯದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ಸವಣಾಲು ಉದ್ಯಮಿ ಅರುಣ್ ಕುಮಾರ್ ನಿಧನ

Suddi Udaya

ಕನ್ಯಾಡಿ ಬ್ರಹ್ಮಾನಂದ ಸ್ವಾಮೀಜಿಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ

Suddi Udaya

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಅಳದಂಗಡಿ ಶಾಖೆಯಲ್ಲಿ ಉಚಿತ ನೇತ್ರ ತಪಾಸಣೆ, ದಂತ ಚಿಕಿತ್ಸೆ, ಕ್ಯಾನ್ಸರ್ ತಪಾಸಣೆ ಮತ್ತು ಸಾಮಾನ್ಯ ವೈದ್ಯಕೀಯ ತಪಾಸಣಾ ಹಾಗೂ ಆಧಾರ್ ಕಾರ್ಡ್ ನೋಂದಣಿ , ತಿದ್ದುಪಡಿ ಶಿಬಿರ

Suddi Udaya

ಅರಿಕೆಗುಡ್ಡೆ ಸಭಾಭವನಕ್ಕೆ ಸಂಸದರ ಪ್ರದೇಶಾಭಿವೃದ್ಧಿ ನಿಧಿಯಿಂದ ರೂ. 5 ಲಕ್ಷ ಅನುದಾನ ಮಂಜೂರು

Suddi Udaya

ಧರ್ಮಸ್ಥಳ ಲಕ್ಷದೀಪೋತ್ಞವಸರ್ವಧರ್ಮ ಸಮ್ಮೇಳನದ 92ನೇ ಅಧಿವೇಶನ ಉದ್ಘಾಟನೆ

Suddi Udaya

ಉಜಿರೆ: ವಿಲ್ಸನ್ ಸಂತೋಷ್ ರೊಡ್ರಿಗಸ್ ಹೃದಯಾಘಾತದಿಂದ ನಿಧನ

Suddi Udaya
error: Content is protected !!