September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಿಕ್ಷಣ ಸಂಸ್ಥೆ

ಲಾಯಿಲ ದಯಾ ವಿಶೇಷ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

ಲಾಯಿಲ ದಯಾ ವಿಶೇಷ ಶಾಲೆಯಲ್ಲಿ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು.

ಶಾಲಾ ಸಂಚಾಲಕ ವಂ. ಫಾ. ವಿನೋದ್ ಮಸ್ಕರೇನ್ಹಸ್ ಮಾತನಾಡಿ ಜಾತಿ, ಧರ್ಮ ಭೇದಭಾವವಿಲ್ಲದೇ ರಾಷ್ಟ್ರೀಯ ಹಬ್ಬಗಳನ್ನು ಆಚರಿಸಬೇಕು. ನಮ್ಮ ಭಾರತ ಸಂವಿಧಾನದಲ್ಲಿ ಹಕ್ಕುಗಳ ಬಗ್ಗೆ ಸವಿಸ್ತಾರವಾಗಿ ನಮಗೆ ತಿಳಿಸಲ್ಪಟ್ಟಿದೆ, ಯಾವ ರೀತಿಯಲ್ಲಿ ನಾವು ಹಕ್ಕುಗಳನ್ನು ಪಡೆಯಬಹುದು ಮತ್ತು ಸಂವಿಧಾನವನ್ನು ಪಾಲಿಸಬಹುದು ಎಂದು ತಿಳಿಸಿದರು. ಎಲ್ಲಾ ರಾಜ್ಯಗಳಲ್ಲಿ ಗಣರಾಜ್ಯೋತ್ಸವನ್ನು ಆಚರಿಸಿ ಸಂಭ್ರಮಿಸುತ್ತೇವೆ. ಬೇರೆ ಬೇರೆ ರಾಜ್ಯಗಳಲ್ಲಿ ಭಾಷೆ, ಆಚರಣೆ, ಊಟದ ಪದ್ದತಿ ಬೇರೆ ಬೇರೆ ಇದ್ದರೂ ನಾವು ಒಂದೇ ಎಂಬುದನ್ನು ಕಾಣಬಹುದು. ಅದೇ ರೀತಿ ಮೂಲಭೂತ ಹಕ್ಕು ಹಾಗೂ ಕರ್ತವ್ಯಗಳನ್ನು ಒಳ್ಳೆ ರೀತಿಯಲ್ಲಿ ನಿಭಾಯಿಸಿ, ನಾವೆಲ್ಲಾ ಒಂದೇ ತಾಯಿಯ ಮಕ್ಕಳು, ನಾವೆಲ್ಲ ಒಟ್ಟಿಗೆ ಬೆರೆತು ಉತ್ತಮ ನಾಗರಿಕರಾಗೋಣ ಎಂದು ಆಶಿಸಿದರು.

ಈ ಸಂದರ್ಭದಲ್ಲಿ ಶಿಕ್ಷಕಿಯರು, ಸಿಬ್ಬಂದಿ ವರ್ಗದವರು ಮತ್ತು ಮಕ್ಕಳು ಉಪಸ್ಥಿತರಿದ್ದರು.

ಗಣರಾಜ್ಯೋತ್ಸವದ ಪ್ರಯುಕ್ತ ಶಾಲಾ ಮಕ್ಕಳಿಗೆ ಸಂವಿಧಾನದ ಪೀಠಿಕೆಯ ಕಂಠಪಾಠ ಸ್ಪರ್ಧೆಯನ್ನು ಏರ್ಪಡಿಸಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ದಿವ್ಯ ಕಾರ್ಯಕ್ರಮ ನಿರೂಪಿಸಿ ಧನ್ಯವಾದವಿತ್ತರು.

Related posts

ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಶಾಖೆ ಕಕ್ಕಿಂಜೆ ವತಿಯಿಂದ ಆರ್ಥಿಕ ಅರಿವು ಜಾಗೃತಿ ಕಾರ್ಯಕ್ರಮ

Suddi Udaya

“ಬೆಸ್ಟ್ ಎಂಎಲ್ಎ” ಅವಾರ್ಡ್ ಪಡೆದ ಶಾಸಕ ಹರೀಶ್ ಪೂಂಜರಿಗೆ ಬಿಜೆಪಿ ಹಿಂದುಳಿದ ವರ್ಗಗಳ‌ ಮೋರ್ಚಾ ಹಾಗೂ ಅಲ್ಪಸಂಖ್ಯಾತ ಮೋರ್ಚಾದ ವತಿಯಿಂದ ಅಭಿನಂದನೆ

Suddi Udaya

ಸರಕಾರಿ ಪ್ರೌಢಶಾಲೆ ನಡ: “ರಾಜ್ಯ ಮಟ್ಟದ ಹಸಿರು ನೈರ್ಮಲ್ಯ ಅಭ್ಯುದಯ ಉತ್ತಮ ಶಾಲೆ – 2024” ಪ್ರಶಸ್ತಿಗೆ ಆಯ್ಕೆ.

Suddi Udaya

ಕಿರಿಯರ ಅಥ್ಲೆಟಿಕ್ ಕ್ರೀಡಾಕೂಟ: ಅದ್ವಿಕ ಕೆ.ಪಿ. ರವರಿಗೆ ಚಿನ್ನದ ಪದಕ

Suddi Udaya

ಬೆಳ್ತಂಗಡಿ ವರ್ತಕರ ಸಂಘದಿಂದ ವೃದ್ದಾಶ್ರಮಕ್ಕೆ ಭೇಟಿ,ಗೃಹೋಪಯೋಗಿ ವಸ್ತುಗಳ ಹಸ್ತಾಂತರ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ನೇತೃತ್ವದಲ್ಲಿ ಉಚಿತ ಆರೋಗ್ಯ ತಪಾಸಣೆ ಮತ್ತು ಉಚಿತ ದಂತ ಚಿಕಿತ್ಸಾ ಶಿಬಿರ

Suddi Udaya
error: Content is protected !!