23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಿಕ್ಷಣ ಸಂಸ್ಥೆ

ಲಾಯಿಲ ದಯಾ ವಿಶೇಷ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

ಲಾಯಿಲ ದಯಾ ವಿಶೇಷ ಶಾಲೆಯಲ್ಲಿ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು.

ಶಾಲಾ ಸಂಚಾಲಕ ವಂ. ಫಾ. ವಿನೋದ್ ಮಸ್ಕರೇನ್ಹಸ್ ಮಾತನಾಡಿ ಜಾತಿ, ಧರ್ಮ ಭೇದಭಾವವಿಲ್ಲದೇ ರಾಷ್ಟ್ರೀಯ ಹಬ್ಬಗಳನ್ನು ಆಚರಿಸಬೇಕು. ನಮ್ಮ ಭಾರತ ಸಂವಿಧಾನದಲ್ಲಿ ಹಕ್ಕುಗಳ ಬಗ್ಗೆ ಸವಿಸ್ತಾರವಾಗಿ ನಮಗೆ ತಿಳಿಸಲ್ಪಟ್ಟಿದೆ, ಯಾವ ರೀತಿಯಲ್ಲಿ ನಾವು ಹಕ್ಕುಗಳನ್ನು ಪಡೆಯಬಹುದು ಮತ್ತು ಸಂವಿಧಾನವನ್ನು ಪಾಲಿಸಬಹುದು ಎಂದು ತಿಳಿಸಿದರು. ಎಲ್ಲಾ ರಾಜ್ಯಗಳಲ್ಲಿ ಗಣರಾಜ್ಯೋತ್ಸವನ್ನು ಆಚರಿಸಿ ಸಂಭ್ರಮಿಸುತ್ತೇವೆ. ಬೇರೆ ಬೇರೆ ರಾಜ್ಯಗಳಲ್ಲಿ ಭಾಷೆ, ಆಚರಣೆ, ಊಟದ ಪದ್ದತಿ ಬೇರೆ ಬೇರೆ ಇದ್ದರೂ ನಾವು ಒಂದೇ ಎಂಬುದನ್ನು ಕಾಣಬಹುದು. ಅದೇ ರೀತಿ ಮೂಲಭೂತ ಹಕ್ಕು ಹಾಗೂ ಕರ್ತವ್ಯಗಳನ್ನು ಒಳ್ಳೆ ರೀತಿಯಲ್ಲಿ ನಿಭಾಯಿಸಿ, ನಾವೆಲ್ಲಾ ಒಂದೇ ತಾಯಿಯ ಮಕ್ಕಳು, ನಾವೆಲ್ಲ ಒಟ್ಟಿಗೆ ಬೆರೆತು ಉತ್ತಮ ನಾಗರಿಕರಾಗೋಣ ಎಂದು ಆಶಿಸಿದರು.

ಈ ಸಂದರ್ಭದಲ್ಲಿ ಶಿಕ್ಷಕಿಯರು, ಸಿಬ್ಬಂದಿ ವರ್ಗದವರು ಮತ್ತು ಮಕ್ಕಳು ಉಪಸ್ಥಿತರಿದ್ದರು.

ಗಣರಾಜ್ಯೋತ್ಸವದ ಪ್ರಯುಕ್ತ ಶಾಲಾ ಮಕ್ಕಳಿಗೆ ಸಂವಿಧಾನದ ಪೀಠಿಕೆಯ ಕಂಠಪಾಠ ಸ್ಪರ್ಧೆಯನ್ನು ಏರ್ಪಡಿಸಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ದಿವ್ಯ ಕಾರ್ಯಕ್ರಮ ನಿರೂಪಿಸಿ ಧನ್ಯವಾದವಿತ್ತರು.

Related posts

ಬೆಳ್ತಂಗಡಿ ವಾಣಿ ಪ.ಪೂ. ಕಾಲೇಜಿನ ಪ್ರಾಂಶುಪಾಲರಾದ ಯದುಪತಿ ಗೌಡರಿಗೆ ಗಡಿನಾಡ ಕನ್ನಡ ಸೇವಾ ರತ್ನ ಪ್ರಶಸ್ತಿ

Suddi Udaya

ಹೊಸಪಟ್ಣ ಹಾಲು ಉತ್ಪಾದಕರ ಸಹಕಾರಿ ಸಂಘ: ಅಧ್ಯಕ್ಷರಾಗಿ ಅಶೋಕ್ ಪೂಜಾರಿ, ಉಪಾಧ್ಯಕ್ಷರಾಗಿ ಮೋಹನಂದ ಪೂಜಾರಿ

Suddi Udaya

ಬ್ರಹ್ಮಶ್ರೀ ನಾರಾಯಣ ಗುರು ಬಿಲ್ಲವ ಸಮಾಜ ಸೇವಾ ಸಂಘದ ಆರಂಬೋಡಿ ಗ್ರಾಮ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಕೊಕ್ಕಡ: ಹೊಸೊಕ್ಲುವಿನಲ್ಲಿ ಬೃಹತ್ ಗಾತ್ರದ ಶಂಖಪಾಲ ಹಾವು ಪತ್ತೆ

Suddi Udaya

KCET, NEET ಹಾಗೂ JEE (Mains) ಪರೀಕ್ಷೆಗಳಿಗಾಗಿ ಮಾ.18ರಿಂದ ವಿದ್ವತ್‌ ಕಾಲೇಜಿನಲ್ಲಿ ಕ್ರ್ಯಾಶ್ ಕೋರ್ಸ್ ಆರಂಭ

Suddi Udaya

ಅಳದಂಗಡಿಯ ವಿದುಷಿ ವಿದ್ಯಾಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್‌ನ ವತಿಯಿಂದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

Suddi Udaya
error: Content is protected !!