July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಿಕ್ಷಣ ಸಂಸ್ಥೆ

ಲಾಯಿಲ ದಯಾ ವಿಶೇಷ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

ಲಾಯಿಲ ದಯಾ ವಿಶೇಷ ಶಾಲೆಯಲ್ಲಿ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು.

ಶಾಲಾ ಸಂಚಾಲಕ ವಂ. ಫಾ. ವಿನೋದ್ ಮಸ್ಕರೇನ್ಹಸ್ ಮಾತನಾಡಿ ಜಾತಿ, ಧರ್ಮ ಭೇದಭಾವವಿಲ್ಲದೇ ರಾಷ್ಟ್ರೀಯ ಹಬ್ಬಗಳನ್ನು ಆಚರಿಸಬೇಕು. ನಮ್ಮ ಭಾರತ ಸಂವಿಧಾನದಲ್ಲಿ ಹಕ್ಕುಗಳ ಬಗ್ಗೆ ಸವಿಸ್ತಾರವಾಗಿ ನಮಗೆ ತಿಳಿಸಲ್ಪಟ್ಟಿದೆ, ಯಾವ ರೀತಿಯಲ್ಲಿ ನಾವು ಹಕ್ಕುಗಳನ್ನು ಪಡೆಯಬಹುದು ಮತ್ತು ಸಂವಿಧಾನವನ್ನು ಪಾಲಿಸಬಹುದು ಎಂದು ತಿಳಿಸಿದರು. ಎಲ್ಲಾ ರಾಜ್ಯಗಳಲ್ಲಿ ಗಣರಾಜ್ಯೋತ್ಸವನ್ನು ಆಚರಿಸಿ ಸಂಭ್ರಮಿಸುತ್ತೇವೆ. ಬೇರೆ ಬೇರೆ ರಾಜ್ಯಗಳಲ್ಲಿ ಭಾಷೆ, ಆಚರಣೆ, ಊಟದ ಪದ್ದತಿ ಬೇರೆ ಬೇರೆ ಇದ್ದರೂ ನಾವು ಒಂದೇ ಎಂಬುದನ್ನು ಕಾಣಬಹುದು. ಅದೇ ರೀತಿ ಮೂಲಭೂತ ಹಕ್ಕು ಹಾಗೂ ಕರ್ತವ್ಯಗಳನ್ನು ಒಳ್ಳೆ ರೀತಿಯಲ್ಲಿ ನಿಭಾಯಿಸಿ, ನಾವೆಲ್ಲಾ ಒಂದೇ ತಾಯಿಯ ಮಕ್ಕಳು, ನಾವೆಲ್ಲ ಒಟ್ಟಿಗೆ ಬೆರೆತು ಉತ್ತಮ ನಾಗರಿಕರಾಗೋಣ ಎಂದು ಆಶಿಸಿದರು.

ಈ ಸಂದರ್ಭದಲ್ಲಿ ಶಿಕ್ಷಕಿಯರು, ಸಿಬ್ಬಂದಿ ವರ್ಗದವರು ಮತ್ತು ಮಕ್ಕಳು ಉಪಸ್ಥಿತರಿದ್ದರು.

ಗಣರಾಜ್ಯೋತ್ಸವದ ಪ್ರಯುಕ್ತ ಶಾಲಾ ಮಕ್ಕಳಿಗೆ ಸಂವಿಧಾನದ ಪೀಠಿಕೆಯ ಕಂಠಪಾಠ ಸ್ಪರ್ಧೆಯನ್ನು ಏರ್ಪಡಿಸಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ದಿವ್ಯ ಕಾರ್ಯಕ್ರಮ ನಿರೂಪಿಸಿ ಧನ್ಯವಾದವಿತ್ತರು.

Related posts

ಬಜಿರೆ: ಕೊರಗಕಲ್ಲು ಶ್ರೀ ಸ್ವಾಮಿ ಕೊರಗಜ್ಜ ಸೇವಾ ಟ್ರಸ್ಟ್ ಬಾಡಾರು ಶ್ರೀರಾಜ ಗುಳಿಗ ದೈವದ ಪುನರ್‌ಪ್ರತಿಷ್ಠೆ, ಕೊರಗಜ್ಜ, ರಾಜಗುಳಿಗ ಕ್ಷೇತ್ರದ ಮೇಲ್ಛಾವಣಿ ಲೋಕಾರ್ಪಣೆ

Suddi Udaya

ನಾವೂರುನಲ್ಲಿ ಬೃಹತ್ ಉಚಿತ ಕಣ್ಣಿನ ಹಾಗೂ ಹೃದಯ ತಪಾಸಣಾ ಶಿಬಿರ

Suddi Udaya

ಅಳದಂಗಡಿ: ಬಡಗಕಾರಂದೂರು ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ಬಿಜೆಪಿ ಯುವ ಮೋರ್ಚಾ ಜಿಲ್ಲಾ ಉಪಾಧ್ಯಕ್ಷರಾಗಿ ಪ್ರಮೋದ್ ಗೌಡ ದಿಡುಪೆ ಆಯ್ಕೆ

Suddi Udaya

ಜೀವ ಬೆದರಿಕೆ ಆರೋಪ : ಕೆ.ಎನ್ ಗೌಡರಿಂದ ಠಾಣೆಗೆ ದೂರು

Suddi Udaya

ಸಂತ ತೆರೇಸಾ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಸಿಎ ಫೌಂಡೇಶನ್ ಹಾಗೂ ಸಿಪಿಟಿ ವಿಷಯದ ಕುರಿತು ಪುನಶ್ಚೇತನ ಕಾರ್ಯಾಗಾರ

Suddi Udaya
error: Content is protected !!