24 C
ಪುತ್ತೂರು, ಬೆಳ್ತಂಗಡಿ
July 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಸಿದ್ಧಿಶ್ರೀ ಸಭಾಭವನಕ್ಕೆ ಸಹಾಯಧನ ಚೆಕ್ ಹಸ್ತಾಂತರ

ಬಂದಾರು: ಬಂದಾರು ಗ್ರಾಮ ಪೆರ್ಲ ಬೈಪಾಡಿಯ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಕಾರ್ಯಕ್ರಮದ ಯಶಸ್ಸಿಗೆ ಕಾರಣಿಕರ್ತರಾದ ಸಮಸ್ತರಿಗೆ ಅಭಿನಂದನಾ ಸಭೆ ಸಿದ್ಧಿಶ್ರೀ ಕಲಾವೇದಿಕೆಯಲ್ಲಿ ಜ.26ರಂದು ನಡೆಯಿತು.

ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಇದರ ಸಮುದಾಯ ಅಭಿವೃದ್ಧಿ ಕಾರ್ಯಕ್ರಮದಡಿಯಲ್ಲಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ನೂತನವಾಗಿ ನಿರ್ಮಾಣಗೊಂಡ ಸಿದ್ಧಿಶ್ರೀ ಸಭಾಭವನಕ್ಕೆ ಶ್ರೀ ಕ್ಷೇತ್ರದಿಂದ ರೂ ೨ಲಕ್ಷ ಸಹಾಯಧನ ಚೆಕ್ ಬೆಳ್ತಂಗಡಿ ತಾಲೂಕಿನ ಯೋಜನಾಧಿಕಾರಿ ಸುರೇಂದ್ರ ಕುಮಾರ್ ರವರು ಬ್ರಹ್ಮಕಲಶೋತ್ಸವ ಸಮಿತಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಉಜಿರೆ ವಲಯದ ಮೇಲ್ವಿಚಾರಕಿ ವನಿತಾ, ಬೈಪಾಡಿ ಕಾರ್ಯಕ್ಷೇತ್ರದ ಸೇವಾಪ್ರತಿನಿದಿ ಪ್ರಮೀಳಾ, ಒಕ್ಕೂಟದ ಪದಾಧಿಕಾರಿಗಳಾದ ದಿನೇಶ್ ಅಡ್ಡಾರು, ಅನಿತಾ ಕುರುಡಂಗೆ ಉಪಸ್ಥಿತರಿದ್ದರು.

ವೇದಿಕೆಯಲ್ಲಿ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಮಹಾಬಲ ಗೌಡ ನಾಗಂದೋಡಿ, ಶ್ರೀ ಕ್ಷೇತ್ರ ಧರ್ಮಸ್ಥಳದ ಕೃಷಿ ವಿಭಾಗದ ಮುಖ್ಯಸ್ಥ ಬಾಲಕೃಷ್ಣ ಪೂಜಾರಿ ಬಜಗುತ್ತು, ಆಡಳಿತ ಮಂಡಳಿಯ ಅಧ್ಯಕ್ಷ ರಮೇಶ ಗೌಡ ಅಡ್ಡಾರು, ಅನುವಂಶೀಯ ಆಡಳಿತ ಮೊಕ್ತೇಸರ ಕುಕ್ಕಪ್ಪ ಗೌಡ, ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ ಪರಪ್ಪಾಜೆ, ಕೋಶಾಧಿಕಾರಿ ಕೇಶವ ಗೌಡ ಕೊಂಗುಜೆ, ದೇವಳದ ಅರ್ಚಕ ಅನಂತರಾಮ ಶಬರಾಯ, ಭಜನಾ ಮಂಡಳಿ ಅಧ್ಯಕ್ಷ ಲಕ್ಷ್ಮಣ ಗೌಡ ಫಲಸದಕೋಡಿ, ಮಹಿಳಾ ಸಮಿತಿ ಅಧ್ಯಕ್ಷೆ ಶ್ವೇತಾ ಹಾರ್ತ್ಯಾರು ಉಪಸ್ಥಿರಿದ್ದರು.

Related posts

ಉಜಿರೆ ಡಿ. ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಕಳೆಂಜ: ಆರ್ವಿ ಶೆಟ್ಟಿ ಹುಟ್ಟುಹಬ್ಬದ ಪ್ರಯುಕ್ತ ಶಿಬರಾಜೆ ಅಂಗನವಾಡಿ ಮಕ್ಕಳಿಗೆ ಕುರ್ಚಿ ಕೊಡುಗೆ

Suddi Udaya

ಸ್ಟಾರ್ ಲೈನ್ ಶಾಲೆ: ಎಸ್.ಜೆ.ಎಮ್ ರಾಜ್ಯ ಅಧ್ಯಕ್ಷ ಜೆಪ್ಪು ಉಸ್ತಾದ್ ಭೇಟಿ

Suddi Udaya

ಮಲೆಂಗಲ್ಲು ನಿವಾಸಿ, ನಿವೃತ್ತ ಟೆಲಿಫೋನ್ ಎಕ್ಸ್‌ಚೆಂಜರ್‌ ವೈ ಹಾಲೊಜಿ ರಾವ್ ನಿಧನ

Suddi Udaya

ಬಟ್ಲಡ್ಕ ಜುಮಾ ಮಸೀದಿ ಉರೂಸ್ ಕಾರ್ಯಕ್ರಮದ 2ನೇ ದಿನ

Suddi Udaya

ಬೆಳ್ತಂಗಡಿ: ಬದುಕು ಕಟ್ಟೋಣ ಬನ್ನಿ ತಂಡದಿಂದ ಪಿಲಿಗೂಡು ಸ.ಹಿ.ಪ್ರಾ.ಶಾಲೆಗೆ ಮಿಕ್ಸಿ, ಗ್ಯಾಸ್ ಸಿಲಿಂಡ‌ರ್ ಹಸ್ತಾಂತರ

Suddi Udaya
error: Content is protected !!