37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ನೇತೃತ್ವದಲ್ಲಿ “ಕೊಳಂಬೆ” ಕಿರುಚಿತ್ರ ನಿರ್ಮಾಣ: ವಿಕೆ ಸ್ಟುಡಿಯೋಸ್ ಕನ್ನಡ ಕಿರುಚಿತ್ರೋತ್ಸವ 2025, ‘ಕೊಳಂಬೆ’ ಬೆಸ್ಟ್ ಕಿರುಚಿತ್ರ ಡಬಲ್ ಪ್ರಶಸ್ತಿ,ಅನೀಶ್ ಅಮೀನ್ ಗೆ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿ

ಬೆಳ್ತಂಗಡಿ: ಬೆಂಗಳೂರಿನ ವಿಕೆ ಸ್ಟುಡಿಯೋಸ್ ವತಿಯಿಂದ ಆಯೋಜನೆಗೊಂಡ ವಿಕೆ ಸ್ಟುಡಿಯೋಸ್ ಕನ್ನಡ ಕಿರುಚಿತ್ರೋತ್ಸವ 2025ರ ಬೆಸ್ಟ್ ಕಿರು ಚಿತ್ರ ಪ್ರಶಸ್ತಿಗೆ “ಕೊಳಂಬೆ” ಬದುಕು ಕಟ್ಟಿದ ಕಥೆ ಎಂಬ ಕಿರುಚಿತ್ರ ಭಾಜನವಾಗಿದೆ. ಜೊತೆಗೆ ಉತ್ತಮ ನಿರ್ದೇಶಕ ಪ್ರಶಸ್ತಿಗೆ ಕೊಳಂಬೆ ಕಿರು ಚಿತ್ರವನ್ನು ನಿರ್ದೇಶಿಸಿದ ಅನೀಶ್ ವೇಣೂರು ಅವರ ಪಾಲಾಗಿದೆ. ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ,ಉದ್ಯಮಿ ಮೋಹನ್ ಕುಮಾರ್ ನೇತೃತ್ವದಲ್ಲಿ ನಿರ್ಮಾಣಗೊಂಡ ಕೊಳಂಬೆ ಕಿರುಚಿತ್ರಕ್ಕೆ ಎರೆಡೆರಡು ಪ್ರಶಸ್ತಿ ಲಭಿಸಿದೆ.

ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೊಳಂಬೆ ಚಿತ್ರ ತಂಡ ಈ ಪ್ರಶಸ್ತಿಯನ್ನು ಸ್ವೀಕರಿಸಿದೆ.

ಬೆಳ್ತಂಗಡಿಯ ಚಾರ್ಮಾಡಿ ಸಮೀಪದ ಕೊಳಂಬೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದ ಕುರಿತಾದ ದುರಂತವನ್ನು ನೆನಪಿಸುವ ಮತ್ತು ಅಲ್ಲಿಯ ಜನತೆ ಮತ್ತೆ ಹೇಗೆ ಬದುಕು ಕಟ್ಟಿಕೊಂಡರು ಎಂಬುವುದರ ಕುರಿತಾದ ಕಿರುಚಿತ್ರ ಇದಾಗಿದೆ.

Related posts

ಕಾಯರ್ತಡ್ಕ: ಗಾಳಿ ಮಳೆಗೆ ಸೋಲಾರ್ ಮೇಲೆ ಮರಬಿದ್ದು ನಷ್ಟ

Suddi Udaya

ಅಳದಂಗಡಿ: ಸತ್ಯದೇವತಾ ದೈವಸ್ಥಾನದ ಆಡಳಿತದಾರ ಶಿವಪ್ರಸಾದ್ ಅಜಿಲರ ನಿವಾಸಕ್ಕೆ ಭೇಟಿ ನೀಡಿದ ಲಾವಣ್ಯ ಬಳ್ಳಾಲ್

Suddi Udaya

ಇಂದಬೆಟ್ಟು ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಡಾ. ಡಿ. ವೀರೇಂದ್ರ ಹೆಗ್ಗಡೆಯವರ 75ನೇ ವರ್ಷದ ಹುಟ್ಟುಹಬ್ಬ ಪ್ರಯುಕ್ತ ಸಿರಿ ಸಿಬ್ಬಂದಿಗಳಿಂದ ಶುಭಾಶಯ

Suddi Udaya

ಮಿತ್ತಬಾಗಿಲು : ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರ

Suddi Udaya

ಎ.20: ಸಿಬಿಕೆ ಕಪ್-2025 ಹೊನಲು ಬೆಳಕಿನ ವಾಲಿಬಾಲ್ ಹಾಗೂ ಹಗ್ಗಜಗ್ಗಾಟ ಪಂದ್ಯಾಟ

Suddi Udaya
error: Content is protected !!