30.2 C
ಪುತ್ತೂರು, ಬೆಳ್ತಂಗಡಿ
June 7, 2025
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆಸಂಘ-ಸಂಸ್ಥೆಗಳು

ಉಜಿರೆ ಹಳೆಪೇಟೆ ಶಾಲೆಯಲ್ಲಿ ಎಸ್‌ಡಿಎಂ ಆಸ್ಪತ್ರೆ ವತಿಯಿಂದ ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರ

ಉಜಿರೆ: ಎಸ್‌ಡಿಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ, ಉಜಿರೆ ಹಾಗೂ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಳೆಪೇಟೆ, ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕುಂಟಿನಿ ಇವರ ಸಹಯೋಗದಲ್ಲಿ ಉಚಿತ ಬೃಹತ್ ಆರೋಗ್ಯ ತಪಾಸಣೆ ಶಿಬಿರ ಹಳೆಪೇಟೆಯ ಶಾಲೆಯಲ್ಲಿ ಜ.26ರಂದು ನಡೆಯಿತು.

ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಮಾಲಕ ಹಾಗೂ ಬದುಕು ಕಟ್ಟೋಣ ಬನ್ನಿ ಸಂಚಾಲಕ ಕೆ. ಮೋಹನ್ ಕುಮಾರ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಎಸ್‌ಡಿಎಂ ಆಸ್ಪತ್ರೆ ಈ ಭಾಗದಲ್ಲಿ ಉತ್ತಮ ರೀತಿಯಲ್ಲಿ ಜನರ ಸೇವೆ ಮಾಡುತ್ತಿದೆ. ಖಾವಂದರು ಜನವರಿ ೧ ರಿಂದ ಉಚಿತ ಡಯಾಲಿಸಿಸ್ ಘೋಷಣೆ ಮಾಡಿದ್ದಾರೆ. ಎಸ್.ಡಿ.ಎಂ ಆಸ್ಪತ್ರೆಯಿಂದ ಮಾತ್ರ ಇಂತಹ ಸೇವೆ ಮಾಡಲು ಸಾಧ್ಯ ಎಂದು ಹೇಳಿದರು. ಜನಾರ್ಧನ್ ಅವರು ಎಸ್‌ಡಿಎಂ ಆಸ್ಪತ್ರೆಯ ಮುಖ್ಯಸ್ಥರಾಗಿ ಬಂದ ಮೇಲೆ ಆಸ್ಪತ್ರೆಯಲ್ಲಿ ಅನೇಕ ಬದಲಾವಣೆ ಆಗಿದೆ. ಉತ್ತಮ ಸೇವೆ ಕೂಡ ನೀಡುತ್ತಿದ್ದಾರೆ ಅಂದರು. ಈಗೀನ ಕಾಲದಲ್ಲಿ ಆರೋಗ್ಯ ಏನಾಗುತ್ತೆ ಅನ್ನೋದು ಗೊತ್ತಾಗಲ್ಲ, ಹೀಗಾಗಿ ಆರೋಗ್ಯ ತಪಾಸಣೆ ಅತೀ ಮುಖ್ಯ, ಹಳ್ಳಿ ಹಳ್ಳಿಗಳಿಗೆ ತೆರಳಿ ಎಸ್.ಡಿ.ಎಂ ಆಸ್ಪತ್ರೆ ಉಚಿತವಾಗಿ ಆರೋಗ್ಯ ತಪಾಸಣೆ ನಡೆಸುತ್ತಿದೆ, ಇದೊಂದು ಉತ್ತಮ ಕಾರ್ಯ ಎಂದರು.

ಬೆಳ್ತಂಗಡಿ ರೋಟರಿ ಕ್ಲಬ್ ಮಾಜಿ ಅಧ್ಯಕ್ಷ ಅನಂತ್ ಭಟ್ ಮಚ್ಚಿಮಲೆ ಮಾತನಾಡಿ ಮಂಗಳೂರಿನ ಯಾವುದೇ ಆಸ್ಪತ್ರೆಗೆ ಹೋಲಿಕೆ ಮಾಡಿದರೆ ಇಲ್ಲಿನ ಎಲ್ಲಾ ಸೇವೆಗಳಿಗೆ ದುಡ್ಡು ಕಡಿಮೆ, ನನ್ನ ಸಂಬಂಧಿಕರ ಶಸ್ತ್ರ ಚಿಕಿತ್ಸೆ ಮಂಗಳೂರಿಗೆ ಹೋಲಿಸಿದರೆ ಅರ್ಧಕರ್ಧ ಕಡಿಮೆ ಬೆಲೆಗೆ ಆಗಿದೆ ಎಂದರು. ಜನಾರ್ದನ್ ಅವರು ಅಧಿಕಾರ ಪಡೆದುಕೊಂಡ ಬಳಿಕ ಆಸ್ಪತ್ರೆ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದೆ. ಇತ್ತೀಚಿಗೆ ನಾನು ಒಂದು ರೋಗಿಯನ್ನು ರಾತ್ರಿ 10 ಗಂಟೆಗೆ ಕರೆದುಕೊಂಡು ಹೋಗಿದ್ದೆ, ಆಗ ಅಲ್ಲಿನ ಸಿಬ್ಬಂದಿ ಪ್ರೀತಿಯಿಂದಲೇ ನಮ್ಮನ್ನು ಸ್ವಾಗತಿಸಿದರು, ತಕ್ಷಣ ಪ್ರತಿಕ್ರಿಯೆ ನೀಡಿದರು. ಇದು ಶ್ಲಾಘನೀಯ ಎಂದರು. ಅನೇಕ ಆಸ್ಪತ್ರೆಗಳು ದುಡ್ಡಿನ ಮುಖ ನೋಡುತ್ತವೆ ಆದರೆ ಎಸ್.ಡಿ.ಎಂ ಆಸ್ಪತ್ರೆ ಸೇವೆಯ ಜನಮನ್ನಣೆಗೆ ಪಾತ್ರವಾಗಿದೆ ಎಂದರು.

ಎಸ್.ಡಿ.ಎಂ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಡಾ| ಎಂ. ಜನಾರ್ದನ್ ಮಾತನಾಡಿ ಸಾಮಾನ್ಯವಾಗಿ ಏನಾದರೂ ಕೆಲಸ ಮಾಡುವಾಗ ಲಾಭದ ಉದ್ದೇಶದಿಂದ ಮಾಡುತ್ತಾರೆ ಆದರೆ ಖಾವಂದರು ಹಾಗಲ್ಲ, ಸೇವಾ ಮನೋಭಾವ ಇಟ್ಟುಕೊಂಡು ಈ ಆಸ್ಪತ್ರೆ ಸ್ಥಾಪಿಸಿ ಈಗ ಸೇವೆ ಮಾಡುತ್ತಿದ್ದಾರೆ. ಬಡವರಿಗೆ ಏನಾದರೂ ಲಾಭ ಆಗಬೇಕು ಅನ್ನುವ ದೃಷ್ಟಿಯಿಂದ ಮಾಡುತ್ತಾರೆ. ಉಚಿತ ಡಯಾಲಿಸಿಸ್ ನೀಡುವ ಮೂಲಕ ದೊಡ್ಡ ಸೇವೆಯನ್ನು ರೋಗಿಗಳಿಗೆ ನೀಡಿದ್ದಾರೆ, ಇಂತಹ ಸೇವೆ ಖಂಡಿತಾ ಖಾವಂದರಿಂದ ಮಾತ್ರ ಸಾಧ್ಯ ಎಂದರು. ನಮ್ಮ ಎಲ್ಲ ಸಿಬ್ಬಂದಿಗಳು ಒಳ್ಳೆ ಕೆಲಸ ಮಾಡುತ್ತಿದ್ದಾರೆ ನಿಮ್ಮ ಸೇವೆಗೆ ಸದಾ ಸಿದ್ದರಿರುತ್ತಾರೆ ಎಂದರು. ಇವತ್ತಿನ ಉಚಿತ ತಪಾಸಣಾ ಶಿಬಿರಕ್ಕೆ ನಮ್ಮ ಆಸ್ಪತ್ರೆಯ ಎಲ್ಲ ಪ್ರಮುಖ ವೈದ್ಯರುಗಳು ಬಂದಿದ್ದಾರೆ ಇಲ್ಲಿಗೆ ಇದರ ಸದುಪಯೋಗ ಪಡೆದುಕೊಳ್ಳಿ ಎಂದರು.

ಈ ಸಂದರ್ಭದಲ್ಲಿ ಹಳೆಪೇಟೆ ಶಾಲೆ ಮುಖ್ಯೋಪಾಧ್ಯಾಯಿನಿ ಸಾವಿತ್ರಿ, ಹಳೆಪೇಟೆ ಜುಮ್ಮ ಮಸೀದಿ ಜೊತೆ ಕಾರ್ಯದರ್ಶಿ ಯು.ಕೆ. ಹನೀಫ್, ಕುಂಟಿನಿ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಮೊಹಮ್ಮದ್ ಇರ್ಫಾನ್, ಹಳೆಪೇಟೆ ಶಾಲೆ ಎಸ್‌ಡಿಎಂಸಿ ಶಿಕ್ಷಕ ರಕ್ಷಕ ಸಂಘದ ಉಪಾಧ್ಯಕ್ಷ ಅಬ್ದುಲ್ ಖಾದರ್, ಅಲ್-ಅಮೀನ್ ಯಂಗ್‌ಮೆನ್ಸ್ ಹಳೆಪೇಟೆ ಇದರ ಕಾರ್ಯದರ್ಶಿ ಫಝಲ್ ರಹ್‌ಮಾನ್, ಲಾಲ ಗ್ರಾ.ಪಂ. ಸದಸ್ಯರಾದ ಸಲೀಂ ಮತ್ತು ರೇವತಿ ಮತ್ತಿತರು ಉಪಸ್ಥಿತರಿದ್ದರು

Related posts

ಎಕ್ಸೆಲ್ ಕಾಲೇಜಿನಲ್ಲಿ 78ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ

Suddi Udaya

ಕಡಿರುದ್ಯಾವರ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಚೇತರಿಸಿಕೊಳ್ಳುತ್ತಿರುವ ಹೂವಿನ ವ್ಯಾಪಾರಿ ಶಿವರಾಮ್: ಕೆಇಬಿ ಭಾಸ್ಕರ್ ಗುರುಸ್ವಾಮಿ ಇವರ ನೇತೃತ್ವದಲ್ಲಿ ಸಂಗ್ರಹಿಸಿದ ರೂ. 53,011 ವೈದ್ಯಕೀಯ ನೆರವು ಹಸ್ತಾಂತರ

Suddi Udaya

ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರೆ ಹಾಗೂ ಪರಿವಾರ ದೈವಗಳ ನರ್ತನ ಸೇವೆ: ಹಸಿರು ವಾಣಿ ಮತ್ತು ಪುಷ್ಪಗನ್ನಡಿ ಸಮರ್ಪಣೆ

Suddi Udaya

ಶಿಬಾಜೆ ದಲಿತ ಯುವಕ ಶ್ರೀಧರನ ಹತ್ಯೆ ಪ್ರಕರಣ: ಸಮಗ್ರ ತನಿಖೆಗೆ ಒತ್ತಾಯಿಸಿ ದಲಿತ ಸಂಘಟನೆಗಳ ನಿರಂತರ ಹೋರಾಟ: ಸಿ.ಐ.ಡಿ ತನಿಖೆಗೆ ಒಪ್ಪಿಸಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಆದೇಶ: ಡಿಎಸ್‌ಎಸ್ ಸಮನ್ವಯ ಸಮಿತಿ ಪ್ರಧಾನ ಕಾರ್ಯದರ್ಶಿ ಅಶೋಕ್ ಕೊಂಚಾಡಿ ಪತ್ರಿಕಾಗೋಷ್ಠಿಯಲ್ಲಿ ಪ್ರಕಟಣೆ

Suddi Udaya

ಮರೋಡಿ: ಏ.22ರಂದು ಸಾರ್ವಜನಿಕ ಶ್ರೀ ಶನೈಶ್ವರ ಪೂಜೆ

Suddi Udaya
error: Content is protected !!