September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಡಿರುದ್ಯಾವರ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

ಕಡಿರುದ್ಯಾವರ: ಕಡಿರುದ್ಯಾವರ ಗ್ರಾಮ ಪಂಚಾಯತ್ ನ 2024-25 ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮಸಭೆಯು ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ರತ್ನಾವತಿ ರವರ ಅಧ್ಯಕ್ಷತೆಯಲ್ಲಿ ಜ.27 ರಂದು ಸ್ವಾಮಿ ವಿವೇಕಾನಂದ ಸಭಾಭವನದಲ್ಲಿ ಜರುಗಿತು.

ಮಾರ್ಗದರ್ಶಕ ಅಧಿಕಾರಿಯಾಗಿ ಸರಕಾರಿ ಪ್ರೌಢ ಶಾಲೆ ಕಕ್ಕಿಂಜೆಯ ಮುಖ್ಯೋಪಾಧ್ಯಾಯ ಶಂಭು ಶಂಕರ್ ಭಾಗವಹಿಸಿ ಗ್ರಾಮಸಭೆಯನ್ನು ಮುನ್ನಡೆಸಿದರು.

ಸಭೆಯಲ್ಲಿ ಇಲಾಖಾ ಅಧಿಕಾರಿಗಳಿಂದ ವಿವಿಧ ಇಲಾಖೆಯಿಂದ ಸಿಗುವ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿ ಹಾಗೂ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಸಾವಿತ್ರಿ, ವಿವಿಧ ಇಲಾಖೆಯ ಅಧಿಕಾರಿಗಳು, ಪಂಚಾಯತ್‌ ಸದಸ್ಯರಾದ ಅಶೋಕ್ ಕುಮಾರ್, ಶ್ರೀಮತಿ ಬೇಬಿ, ಸೂರಜ್ ಗೌಡ ವಳಂಬ್ರ, ರಾಜೇಶ್ ಗೌಡ, ಗುರುಪ್ರಸಾದ್, ಶ್ರೀಮತಿ ಲಾವಣ್ಯ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಸದಸ್ಯರು, ಸಿಬ್ಬಂದಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವಿ ಬನಪ್ಪ ಗೌಡ್ರ ಸ್ವಾಗತಿಸಿ, ವಂದಿಸಿದರು. ಕಾರ್ಯದರ್ಶಿ ಜನಾರ್ದನ ಗೌಡ ಅನುಪಾಲನ ವರದಿ ವಾಚಿಸಿದರು. ವಿತೇಶ್ ಕೋಟ್ಯಾನ್ ಜಮಾ ಖರ್ಚುಗಳ ವಿವರವನ್ನು ಮಂಡಿಸಿದರು.

Related posts

ಮೂಡುಬಿದಿರೆ ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲಾ ಸಂಸತ್ತು ಉದ್ಘಾಟನೆ

Suddi Udaya

ಉಜಿರೆ: ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಮಾಶಾಸನ ಮಂಜೂರಾತಿ ಪತ್ರ ವಿತರಣೆ

Suddi Udaya

ಜ.28: ಇಂದಬೆಟ್ಟುವಿನಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಶಿಬಿರ

Suddi Udaya

ಕನ್ಯಾಡಿ ಶ್ರೀ ರಾಮಕ್ಷೇತ್ರದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಅಯೋಧ್ಯೆಯ ಸಂಸದರು, ಮೇಯರ್ ಹಾಗೂ ಶಾಸಕರಿಗೆ ಅಯೋಧ್ಯೆ ಶಾಖಾ ಮಠದ ಶಿಲಾನ್ಯಾಸಕ್ಕೆ ಆಹ್ವಾನ

Suddi Udaya

ರಾಜ್ಯ ಸರ್ಕಾರದ ವಿದ್ಯುತ್ ಬೆಲೆ ಏರಿಕೆ ವಿರೋಧಿಸಿ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪ್ರತಿಭಟನೆ

Suddi Udaya

ಆ.30: ತಾಲೂಕು ವೀರಶೈವ ಲಿಂಗಾಯತ ಸಂಘದ ವಾರ್ಷಿಕೋತ್ಸವ-ನೂತನ ಪದಾಧಿಕಾರಿಗಳ ಪದಗ್ರಹಣ

Suddi Udaya
error: Content is protected !!