37.2 C
ಪುತ್ತೂರು, ಬೆಳ್ತಂಗಡಿ
April 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಗಣರಾಜ್ಯೋತ್ಸವ ಆಚರಣೆ

ಗಂಡಿಬಾಗಿಲು ಸಿಯೋನ್ ಆಶ್ರಮ ಟ್ರಸ್ಟ್‌ನಲ್ಲಿ 76ನೇ ಗಣರಾಜ್ಯೋತ್ಸವವನ್ನು ಜ.೨೬ರಂದು ಅಚರಿಸಲಾಯಿತು.
ಆಶ್ರಮ ನಿವಾಸಿ ಸಿಪ್ರಿಯನ್ ಮೊಂತೆರೋ ಧ್ವಜಾರೋಹಣ ನೆರವೇರಿಸಿದರು.

ಸಂಸ್ಥೆಯ ಆಡಳಿತ ನಿರ್ದೇಶಕ ಡಾ. ಯು.ಸಿ.ಪೌಲೋಸ್ ಗಣರಾಜ್ಯೋತ್ಸವ ಆಚರಣೆಯ ಮಹತ್ವದ ಬಗ್ಗೆ ವಿವರಿಸಿದರು. ಭಾರತ ಸಂವಿಧಾನ ರಚನೆಗೆ ಕಾರಣೀಕರ್ತರಾದ ಡಾ. ಬಿ.ಆರ್. ಅಂಬೇಡ್ಕರ್ ರವರ ಬಗ್ಗೆ ವಿವರಿಸುತ್ತಾ, ಭಾರತ ದೇಶದ ಸಂವಿಧಾನ ಅತ್ಯಂತ ಶ್ರೇಷ್ಠವಾದದು, ಎಲ್ಲಾ ಧರ್ಮಿಯರ ಆಚಾರ-ವಿಚಾರಗಳಿಗೆ ಸಮಾನ ಗೌರವವಿದೆ. ಬದುಕಿಗೆ ಮಾರ್ಗದರ್ಶನ ನೀಡುವ ಹಿರಿಯರನ್ನು ಗೌರವಿಸುವ ಜತೆಗೆ ದೇಶ ನನ್ನದೆನ್ನುವ ಭಾವನೆ ಜಾಗೃತವಾಗಬೇಕು. ಪರಸ್ಪರ ಪ್ರೀತಿ, ನಂಬಿಕೆಯಿಂದ ಒಗ್ಗಟ್ಟಿನಿಂದ ಬಾಳಬೇಕು ಎಂದರು.

ಆಶ್ರಮ ನಿವಾಸಿಗಳಿಂದ ಮತ್ತು ಸಿಬ್ಬಂದಿ ವರ್ಗದವರಿಂದ ವಿವಿಧ ಮನೋರಂಜನಾ ಕಾರ್ಯಕ್ರಮಗಳು ಜರುಗಿತು.

ಸಿಯೋನ್ ಆಶ್ರಮದ ಟ್ರಸ್ಟೀ ಸದಸ್ಯರುಗಳು, ಆಡಳಿತ ಮಂಡಳಿಯವರು, ಟ್ರಸ್ಟೀ ಕುಟುಂಬಸ್ಥರು, ಸಿಬ್ಬಂದಿ ವರ್ಗದವರು ಹಾಗೂ ಆಶ್ರಮ ನಿವಾಸಿಗಳೆಲ್ಲರೂ ಉಪಸ್ಥಿತರಿದ್ದರು.

ಸಂಸ್ಥೆಯ ಸಿಬ್ಬಂದಿ ಕು. ಯಶಸ್ವಿನಿ ಸ್ವಾಗತಿಸಿ, ಶ್ರೀಮತಿ ದಿನವತಿ ಕಾರ್ಯಕ್ರಮ ನಿರೂಪಿಸಿದರು.

Related posts

ಮುಂಡ್ರುಪಾಡಿ ವಸಂತಿರವರ ಮನೆಯ ಮೇಲೆ ಬಿದ್ದ ಮರ: ಧರ್ಮಸ್ಥಳ ಘಟಕದ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ತೆರವು ಕಾರ್ಯ

Suddi Udaya

ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಕರಾಟೆ ಪಂದ್ಯಾಟ: ಸ್ಟಾರ್ ಲೈನ್ ಆಂ. ಮಾ. ಶಾಲೆ ರಝಾ ಇಲ್ಲಿಯ ವಿದ್ಯಾರ್ಥಿ ಮೊಹಮ್ಮದ್ ಶಮ್ಮಾಜ್ ಶರೀಫ್ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘದ ನೂತನ ಅಧ್ಯಕ್ಷರಾಗಿ ಬಾಲಕೃಷ್ಣ ಗೌಡ ಕೇರಿಮಾರು ಪ್ರ. ಕಾರ್ಯದರ್ಶಿಯಾಗಿ ಕೆ. ಬಾಲಕೃಷ್ಣ ಗೌಡ ಕಲ್ಲಾಜೆ ಆಯ್ಕೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಗೆ ವಲಯದ ಮಧ್ಯಂತರ ಸಮ್ಮೇಳನದಲ್ಲಿ ಸಮಗ್ರ ಪ್ರಶಸ್ತಿ

Suddi Udaya

ಕೊಕ್ಕಡ ಗ್ರಾ.ಪಂ. ನಲ್ಲಿ ಸಂಭ್ರಮದ ಸ್ವಾತಂತ್ರೋತ್ಸವ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್‌ನ ಆಶ್ರಯ ಸಮಿತಿಗೆ ಸದಸ್ಯರ ನೇಮಕ

Suddi Udaya
error: Content is protected !!