25.8 C
ಪುತ್ತೂರು, ಬೆಳ್ತಂಗಡಿ
February 22, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಗಣರಾಜ್ಯೋತ್ಸವ ಆಚರಣೆ

ಗಂಡಿಬಾಗಿಲು ಸಿಯೋನ್ ಆಶ್ರಮ ಟ್ರಸ್ಟ್‌ನಲ್ಲಿ 76ನೇ ಗಣರಾಜ್ಯೋತ್ಸವವನ್ನು ಜ.೨೬ರಂದು ಅಚರಿಸಲಾಯಿತು.
ಆಶ್ರಮ ನಿವಾಸಿ ಸಿಪ್ರಿಯನ್ ಮೊಂತೆರೋ ಧ್ವಜಾರೋಹಣ ನೆರವೇರಿಸಿದರು.

ಸಂಸ್ಥೆಯ ಆಡಳಿತ ನಿರ್ದೇಶಕ ಡಾ. ಯು.ಸಿ.ಪೌಲೋಸ್ ಗಣರಾಜ್ಯೋತ್ಸವ ಆಚರಣೆಯ ಮಹತ್ವದ ಬಗ್ಗೆ ವಿವರಿಸಿದರು. ಭಾರತ ಸಂವಿಧಾನ ರಚನೆಗೆ ಕಾರಣೀಕರ್ತರಾದ ಡಾ. ಬಿ.ಆರ್. ಅಂಬೇಡ್ಕರ್ ರವರ ಬಗ್ಗೆ ವಿವರಿಸುತ್ತಾ, ಭಾರತ ದೇಶದ ಸಂವಿಧಾನ ಅತ್ಯಂತ ಶ್ರೇಷ್ಠವಾದದು, ಎಲ್ಲಾ ಧರ್ಮಿಯರ ಆಚಾರ-ವಿಚಾರಗಳಿಗೆ ಸಮಾನ ಗೌರವವಿದೆ. ಬದುಕಿಗೆ ಮಾರ್ಗದರ್ಶನ ನೀಡುವ ಹಿರಿಯರನ್ನು ಗೌರವಿಸುವ ಜತೆಗೆ ದೇಶ ನನ್ನದೆನ್ನುವ ಭಾವನೆ ಜಾಗೃತವಾಗಬೇಕು. ಪರಸ್ಪರ ಪ್ರೀತಿ, ನಂಬಿಕೆಯಿಂದ ಒಗ್ಗಟ್ಟಿನಿಂದ ಬಾಳಬೇಕು ಎಂದರು.

ಆಶ್ರಮ ನಿವಾಸಿಗಳಿಂದ ಮತ್ತು ಸಿಬ್ಬಂದಿ ವರ್ಗದವರಿಂದ ವಿವಿಧ ಮನೋರಂಜನಾ ಕಾರ್ಯಕ್ರಮಗಳು ಜರುಗಿತು.

ಸಿಯೋನ್ ಆಶ್ರಮದ ಟ್ರಸ್ಟೀ ಸದಸ್ಯರುಗಳು, ಆಡಳಿತ ಮಂಡಳಿಯವರು, ಟ್ರಸ್ಟೀ ಕುಟುಂಬಸ್ಥರು, ಸಿಬ್ಬಂದಿ ವರ್ಗದವರು ಹಾಗೂ ಆಶ್ರಮ ನಿವಾಸಿಗಳೆಲ್ಲರೂ ಉಪಸ್ಥಿತರಿದ್ದರು.

ಸಂಸ್ಥೆಯ ಸಿಬ್ಬಂದಿ ಕು. ಯಶಸ್ವಿನಿ ಸ್ವಾಗತಿಸಿ, ಶ್ರೀಮತಿ ದಿನವತಿ ಕಾರ್ಯಕ್ರಮ ನಿರೂಪಿಸಿದರು.

Related posts

ಶಿಬಾಜೆ : ಬೂಡುದಮಕ್ಕಿ ನಿವಾಸಿ ಯಶೋಧರ ಶೆಟ್ಟಿ ನಿಧನ

Suddi Udaya

2023-24ನೇ ಸಾಲಿನಲ್ಲಿ ಶೇ.60ಕ್ಕಿಂತ ಹೆಚ್ಚು ಅಂಕ ಗಳಿಸಿದ ಪ.ಜಾತಿ/ಪ.ಪಂಗಡದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

Suddi Udaya

ಬ್ರಹ್ಮಶ್ರೀ ನಾರಾಯಣಗುರುಗಳ ಜನ್ಮ ದಿನಾಚರಣೆ ಪ್ರಯುಕ್ತ ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆ: ಶ್ರೀ ಗುರುದೇವ ಪ್ರ.ದ. ಕಾಲೇಜಿನ ವಿದ್ಯಾರ್ಥಿನಿ ಹಸ್ತವಿ ಪ್ರಥಮ ಸ್ಥಾನ

Suddi Udaya

ಬೆಳ್ತಂಗಡಿ: ವಾಣಿ ಕಾಲೇಜು ಎದುರು ಸ್ಕೂಟಿ ಮತ್ತು ಗೂಡ್ಸ್ ಲಾರಿ ಡಿಕ್ಕಿ

Suddi Udaya

ಕಾಂಗ್ರೇಸ್ ಸರ್ಕಾರದಿಂದ ಕಾನೂನುವ್ಯವಸ್ಥೆಯ ಅಪಹಾಸ್ಯ :ಬೆಳ್ತಂಗಡಿ ಬಿಜೆಪಿ ಮಂಡಲ ಆಕ್ರೋಶ

Suddi Udaya

ಉಜಿರೆ: ಧ.ಮಂ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
error: Content is protected !!