25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಗಣರಾಜ್ಯೋತ್ಸವ ಆಚರಣೆ

ಗಂಡಿಬಾಗಿಲು ಸಿಯೋನ್ ಆಶ್ರಮ ಟ್ರಸ್ಟ್‌ನಲ್ಲಿ 76ನೇ ಗಣರಾಜ್ಯೋತ್ಸವವನ್ನು ಜ.೨೬ರಂದು ಅಚರಿಸಲಾಯಿತು.
ಆಶ್ರಮ ನಿವಾಸಿ ಸಿಪ್ರಿಯನ್ ಮೊಂತೆರೋ ಧ್ವಜಾರೋಹಣ ನೆರವೇರಿಸಿದರು.

ಸಂಸ್ಥೆಯ ಆಡಳಿತ ನಿರ್ದೇಶಕ ಡಾ. ಯು.ಸಿ.ಪೌಲೋಸ್ ಗಣರಾಜ್ಯೋತ್ಸವ ಆಚರಣೆಯ ಮಹತ್ವದ ಬಗ್ಗೆ ವಿವರಿಸಿದರು. ಭಾರತ ಸಂವಿಧಾನ ರಚನೆಗೆ ಕಾರಣೀಕರ್ತರಾದ ಡಾ. ಬಿ.ಆರ್. ಅಂಬೇಡ್ಕರ್ ರವರ ಬಗ್ಗೆ ವಿವರಿಸುತ್ತಾ, ಭಾರತ ದೇಶದ ಸಂವಿಧಾನ ಅತ್ಯಂತ ಶ್ರೇಷ್ಠವಾದದು, ಎಲ್ಲಾ ಧರ್ಮಿಯರ ಆಚಾರ-ವಿಚಾರಗಳಿಗೆ ಸಮಾನ ಗೌರವವಿದೆ. ಬದುಕಿಗೆ ಮಾರ್ಗದರ್ಶನ ನೀಡುವ ಹಿರಿಯರನ್ನು ಗೌರವಿಸುವ ಜತೆಗೆ ದೇಶ ನನ್ನದೆನ್ನುವ ಭಾವನೆ ಜಾಗೃತವಾಗಬೇಕು. ಪರಸ್ಪರ ಪ್ರೀತಿ, ನಂಬಿಕೆಯಿಂದ ಒಗ್ಗಟ್ಟಿನಿಂದ ಬಾಳಬೇಕು ಎಂದರು.

ಆಶ್ರಮ ನಿವಾಸಿಗಳಿಂದ ಮತ್ತು ಸಿಬ್ಬಂದಿ ವರ್ಗದವರಿಂದ ವಿವಿಧ ಮನೋರಂಜನಾ ಕಾರ್ಯಕ್ರಮಗಳು ಜರುಗಿತು.

ಸಿಯೋನ್ ಆಶ್ರಮದ ಟ್ರಸ್ಟೀ ಸದಸ್ಯರುಗಳು, ಆಡಳಿತ ಮಂಡಳಿಯವರು, ಟ್ರಸ್ಟೀ ಕುಟುಂಬಸ್ಥರು, ಸಿಬ್ಬಂದಿ ವರ್ಗದವರು ಹಾಗೂ ಆಶ್ರಮ ನಿವಾಸಿಗಳೆಲ್ಲರೂ ಉಪಸ್ಥಿತರಿದ್ದರು.

ಸಂಸ್ಥೆಯ ಸಿಬ್ಬಂದಿ ಕು. ಯಶಸ್ವಿನಿ ಸ್ವಾಗತಿಸಿ, ಶ್ರೀಮತಿ ದಿನವತಿ ಕಾರ್ಯಕ್ರಮ ನಿರೂಪಿಸಿದರು.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ರೈತಮೋರ್ಚಾದ ಸಭೆ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ವೀಲ್ ಚೇರ್ ವಿತರಣೆ 

Suddi Udaya

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಪಟ್ರಮೆ ಗ್ರಾಮ ಪಂಚಾಯತ್ ಬಳಿ ಬಿಜೆಪಿ ಪ್ರತಿಭಟನೆ

Suddi Udaya

ಹಳೆಪೇಟೆ ಮುಹಿಯುದ್ದಿನ್ ಜುಮ್ಮಾ ಮಸ್ಜಿದ್ ಈದ್-ಉಲ್-ಫಿತರ್ ಆಚರಣೆ

Suddi Udaya

ಉಜಿರೆ: ಎಸ್.ಡಿ.ಎಂ.(ಸಿದ್ದವನ ಗುರುಕುಲ) ಡೈರಿಂಗ್ ಡಿಪ್ಲೋಮಾ ಹಿರಿಯ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಕಾರ್ಯಕ್ರಮ

Suddi Udaya
error: Content is protected !!