July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ಜೇಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಯುವ ದಿನಾಚರಣೆ ಪ್ರಯುಕ್ತ ತರಬೇತಿ

ಬೆಳ್ತಂಗಡಿ: ಜೇಸಿಐ ಬೆಳ್ತಂಗಡಿ ಮಂಜುಶ್ರೀಯ ಮೊದಲ ಕಾರ್ಯಕ್ರಮವಾದ ರಾಷ್ಟ್ರೀಯ ಯುವ ದಿನಾಚರಣೆಯ ಪ್ರಯುಕ್ತ ತರಬೇತಿ ಕಾರ್ಯಕ್ರಮವನ್ನು ಲಾಯಿಲ ವಿಘ್ನೇಶ್ವರ ಕಲಾಮಂದಿರದಲ್ಲಿ ಜ.24ರಂದು ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಘಟಕದ ಪೂರ್ವ ಅಧ್ಯಕ್ಷರು, ರಮ್ಯ 1 ಗ್ರಾಂ ಗೋಲ್ಡ್ ಉಜಿರೆಯ ಇದರ ಮಾಲಕ ಜೆಸಿ ಪ್ರಸಾದ್ ಬಿ.ಎಸ್ ಪಾಲ್ಗೊಂಡು ಕಾರ್ಯಕ್ರಮಕ್ಕೆ ಶುಭಹಾರೈಸಿದರು.

ತರಬೇತುದಾರರಾಗಿ ಜೆಸಿಐ ವಲಯ 15ರ ಪೂರ್ವ ವಲಯ ಉಪಾಧ್ಯಕ್ಷರು, ವಲಯ ತರಬೇತುದಾರರಾದ ಜೆಸಿ ಶಂಕರ್ ರಾವ್ ಸುಸ್ಥಿರ ಭವಿಷ್ಯಕ್ಕಾಗಿ ಯುವ ಜನತೆ ಎನ್ನುವ ವಿಷಯದ ಬಗ್ಗೆ ತರಬೇತಿಯನ್ನು ನೀಡಿದರು.

ತರಬೇತಿ ಕಾರ್ಯಕ್ರಮದಲ್ಲಿ ಶ್ರೀ ಬಲಮುರಿ ಭಜನಾ ಮಂಡಳಿ, ಲಾಯಿಲ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ಲಾಯಿಲ, ಶ್ರೀ ಗಣೇಶೋತ್ಸವ ಸಮಿತಿ ಲಾಯಿಲ ಇದರ ಸದಸ್ಯರು ಹಾಗೂ ಬಜಕರು, ಜೇಸಿಐ ಬೆಳ್ತಂಗಡಿಯ ಸದಸ್ಯರು ಜೂನಿಯರ್ ಜೇಸಿ ವಿಭಾಗದ ಸದಸ್ಯರು ಉಪಸ್ಥಿತರಿದ್ದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಅಧ್ಯಕ್ಷೆ ಜೆಸಿ ಆಶಾಲತಾ ಪ್ರಶಾಂತ್ ವಹಿಸಿ ಸ್ವಾಗತಿಸಿದರು. ಜೆಸಿ ವಾಣಿಯನ್ನು ಜೂನಿಯರ್ ಜೆಸಿ ಸದಸ್ಯರಾದ ಜೆಸಿ ತ್ರಿಷಾ ಉದ್ಘೋಷಿಸಿ, ತರಬೇತುದಾರರ ಪರಿಚಯಯನ್ನು ಜೂನಿಯರ್ ಜೆಸಿ ಸದಸ್ಯರಾದ ಜೆಜೆಸಿ ನೇವಿಲ್ ನವೀನ್ ಮೋರಸ್ ತಿಳಿಸಿದರು, ಘಟಕದ ಕಾರ್ಯದರ್ಶಿ ಜೆಸಿ ಶೈಲೇಶ್ ವಂದಿಸಿದರು.

Related posts

ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಜನ ಸಹಭಾಗಿತ್ವದಲ್ಲಿ 8ನೇ ವರ್ಷದ ಮಕರ ಸಂಕ್ರಾಂತಿ ಸಂದರ್ಭ ರಾಜ್ಯಾದ್ಯಂತ 16529 ಶ್ರದ್ದಾ ಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮ

Suddi Udaya

ರೂ.2.50 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಕೊಕ್ರಾಡಿ ಪ್ರೌಢಶಾಲೆ- ಕಾಲೇಜಿನ ನೂತನ ಕೊಠಡಿಗಳ ಉದ್ಘಾಟನೆ

Suddi Udaya

ಪುತ್ತೂರು ಪೊಲೀಸರಿಂದ ಸಾವಿರಾರು ರೂ.ಮೌಲ್ಯದ ಅಕ್ರಮ ಗಾಂಜಾ ಸಾಗಾಟ ಪತ್ತೆ: 106 ಕಿ.ಗ್ರಾಂ ಗಾಂಜಾ ಸಹಿತ ಚಾಮಾ೯ಡಿಯ ಅಬ್ದುಲ್ ಸಾದಿಕ್ ಹಾಗೂ ರಫೀಕ್ ಬಂಧನ

Suddi Udaya

ಸೌತಡ್ಕ ದೇವಸ್ಥಾನದ ವತಿಯಿಂದ ಶ್ರೀಮತಿ ಶುಭ ಮರಾಟೆ ರವರಿಗೆ ರೂ 40ಸಾವಿರ ಚೆಕ್ ಹಸ್ತಾಂತರ

Suddi Udaya

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ ಸ್ಪೂರ್ತಿ 2K25 ಕಾಮರ್ಸ್ ಫೆಸ್ಟ್

Suddi Udaya

ಕುಕ್ಕೇಡಿ: ಸುಡುಮದ್ದು ತಯಾರಿಕ ಘಟಕದಲ್ಲಿ ಸ್ಪೋಟ ಪ್ರಕರಣ: ಇಬ್ಬರಿಗೆ ನ್ಯಾಯಾಂಗ ಬಂಧನ

Suddi Udaya
error: Content is protected !!