25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ಜೇಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಯುವ ದಿನಾಚರಣೆ ಪ್ರಯುಕ್ತ ತರಬೇತಿ

ಬೆಳ್ತಂಗಡಿ: ಜೇಸಿಐ ಬೆಳ್ತಂಗಡಿ ಮಂಜುಶ್ರೀಯ ಮೊದಲ ಕಾರ್ಯಕ್ರಮವಾದ ರಾಷ್ಟ್ರೀಯ ಯುವ ದಿನಾಚರಣೆಯ ಪ್ರಯುಕ್ತ ತರಬೇತಿ ಕಾರ್ಯಕ್ರಮವನ್ನು ಲಾಯಿಲ ವಿಘ್ನೇಶ್ವರ ಕಲಾಮಂದಿರದಲ್ಲಿ ಜ.24ರಂದು ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಘಟಕದ ಪೂರ್ವ ಅಧ್ಯಕ್ಷರು, ರಮ್ಯ 1 ಗ್ರಾಂ ಗೋಲ್ಡ್ ಉಜಿರೆಯ ಇದರ ಮಾಲಕ ಜೆಸಿ ಪ್ರಸಾದ್ ಬಿ.ಎಸ್ ಪಾಲ್ಗೊಂಡು ಕಾರ್ಯಕ್ರಮಕ್ಕೆ ಶುಭಹಾರೈಸಿದರು.

ತರಬೇತುದಾರರಾಗಿ ಜೆಸಿಐ ವಲಯ 15ರ ಪೂರ್ವ ವಲಯ ಉಪಾಧ್ಯಕ್ಷರು, ವಲಯ ತರಬೇತುದಾರರಾದ ಜೆಸಿ ಶಂಕರ್ ರಾವ್ ಸುಸ್ಥಿರ ಭವಿಷ್ಯಕ್ಕಾಗಿ ಯುವ ಜನತೆ ಎನ್ನುವ ವಿಷಯದ ಬಗ್ಗೆ ತರಬೇತಿಯನ್ನು ನೀಡಿದರು.

ತರಬೇತಿ ಕಾರ್ಯಕ್ರಮದಲ್ಲಿ ಶ್ರೀ ಬಲಮುರಿ ಭಜನಾ ಮಂಡಳಿ, ಲಾಯಿಲ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ಲಾಯಿಲ, ಶ್ರೀ ಗಣೇಶೋತ್ಸವ ಸಮಿತಿ ಲಾಯಿಲ ಇದರ ಸದಸ್ಯರು ಹಾಗೂ ಬಜಕರು, ಜೇಸಿಐ ಬೆಳ್ತಂಗಡಿಯ ಸದಸ್ಯರು ಜೂನಿಯರ್ ಜೇಸಿ ವಿಭಾಗದ ಸದಸ್ಯರು ಉಪಸ್ಥಿತರಿದ್ದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಅಧ್ಯಕ್ಷೆ ಜೆಸಿ ಆಶಾಲತಾ ಪ್ರಶಾಂತ್ ವಹಿಸಿ ಸ್ವಾಗತಿಸಿದರು. ಜೆಸಿ ವಾಣಿಯನ್ನು ಜೂನಿಯರ್ ಜೆಸಿ ಸದಸ್ಯರಾದ ಜೆಸಿ ತ್ರಿಷಾ ಉದ್ಘೋಷಿಸಿ, ತರಬೇತುದಾರರ ಪರಿಚಯಯನ್ನು ಜೂನಿಯರ್ ಜೆಸಿ ಸದಸ್ಯರಾದ ಜೆಜೆಸಿ ನೇವಿಲ್ ನವೀನ್ ಮೋರಸ್ ತಿಳಿಸಿದರು, ಘಟಕದ ಕಾರ್ಯದರ್ಶಿ ಜೆಸಿ ಶೈಲೇಶ್ ವಂದಿಸಿದರು.

Related posts

ಸಿಎ ಅಂತಿಮ ಪರೀಕ್ಷೆ: ಆರಂಬೋಡಿಯ ಸುರಕ್ಷಾ ಶೆಟ್ಟಿ ಉತ್ತೀರ್ಣ

Suddi Udaya

ಸರಳಿಕಟ್ಟೆ ಪ್ರೌಢಶಾಲೆಯಲ್ಲಿ ಯುವ ಸಂಸತ್ತು ಚುನಾವಣೆ

Suddi Udaya

ಪುಂಜಾಲಕಟ್ಟೆ: ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಲಯನ್ಸ್ ಕ್ಲಬ್ ನ ಸುವರ್ಣ ಸೇವಾ ಸಂಭ್ರಮ

Suddi Udaya

ಬಂದಾರು : ಹಲವು ಮಂದಿ ಕಾಂಗ್ರೆಸ್‌ ಪ್ರಮುಖರು ಬಿಜೆಪಿ ‌ಸೇರ್ಪಡೆ

Suddi Udaya

ಕಾಶಿಪಟ್ಣ ಸ.ಪ್ರೌ. ಶಾಲೆಯಲ್ಲಿ ಸ್ಥಳೀಯ ಗ್ರಾ.ಪಂ. ವತಿಯಿಂದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇಕಡಾ 100 ಫಲಿತಾಂಶ ದಾಖಲಿಸಿದ ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ಗೌರವಾರ್ಪಣೆ

Suddi Udaya

ಉಜಿರೆ: ಎಸ್.ಡಿ.ಎಂ ಇಂಜಿನಿಯರಿಂಗ್ ಕಾಲೇಜಿನ ಮೊದಲ ವರ್ಷದ ಬಿಇ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ

Suddi Udaya
error: Content is protected !!