37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರಿ ಭಾರತಿಗೆ 11 ಸ್ಥಾನ, ಕಾಂಗ್ರೆಸ್ ಬೆಂಬಲಿತ 1 ಸ್ಥಾನ

ಕಲ್ಲೇರಿ : ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಂದಿನ ಐದು ವರ್ಷದ ಅವಧಿಯ ಆಡಳಿತ ಮಂಡಳಿಯ 12 ನಿರ್ದೇಶಕರ ಸ್ಥಾನಕ್ಕೆ 27 ಮಂದಿ ಅಭ್ಯರ್ಥಿಗಳು ಕಣದಲ್ಲಿದು ಚುನಾವಣೆಯು ಜ.27ರಂದು ಸಂಘದ ಕಚೇರಿ ಆವರಣದಲ್ಲಿ ನಡೆಯಿತು.

ಬಿಜೆಪಿ ಬೆಂಬಲಿತ ಸಹಕಾರಿ ಭಾರತೀಯ ಅಭ್ಯರ್ಥಿಗಳಾದ ಸಾಲಗಾರ ಸಾಮಾನ್ಯ ಕ್ಷೇತ್ರದಲ್ಲಿ ಮಾಜಿ ಅಧ್ಯಕ್ಷರಾದ ಜಗದೀಶ್ ಶೆಟ್ಟಿ ಮೈರ, ಸಾಮ್ರಾಟ್ ಕಲ್ಲೇರಿ, ಸುನಿಲ್ ಅಣವು, ಜಯಾನಂದ ಕಲ್ಲಾಪು, ಸಾಲಗಾರ ಮಹಿಳಾ ಕ್ಷೇತ್ರದಿಂದ ಜಯಂತಿ ಪಾಲೇದು ಸರೋಜಿನಿ ವಿಜಯ ಕುಮಾರ್ ಕಲ್ಲಳಿಕೆ, ಸಾಲಗಾರರ ಹಿಂದುಳಿದ ವರ್ಗ ಎ ಸ್ಥಾನದಿಂದ ರಜನಿನಾಥ್ ಮುಂದಿಲ, ಸಾಲಗಾರರ ಹಿಂದುಳಿದ ವರ್ಗ ಬಿ ಸ್ಥಾನದಿಂದ ಕೃಷ್ಣಪ್ಪ ಗೌಡ, ಪ. ಜಾತಿ ಕ್ಷೇತ್ರದಿಂದ ಸುರೇಶ್ ಎಚ್ ಎಲ್., ಪ.ಪಂಗಡ ಕ್ಷೇತ್ರದಿಂದ ಶ್ರೀನಿವಾಸ್ ಜಯ ಗಳಿಸಿದ್ದಾರೆ.

ಸಾಲಗಾರರ ಕೇತ್ರದಿಂದ ಪ್ರಭಾಕರ ಗೌಡ ಪೋಸೋಂದೊಡಿ ಮತ್ತು ರೋಹಿತ್ ಕುಪ್ಪೆಟಿ 512 ಮತಗಳನ್ನು ಪಡೆದು ಟೈಯಾಗಿದ್ದು, ಚುನಾವಣಾಧಿಕಾರಿ ಯವರ ತೀರ್ಮಾನದ ಮೇರೆಗೆ ಮೊದಲ ಎರಡುವರೆ ವರ್ಷಗಳ ಅವಧಿಗೆ ರೋಹಿತ್ ಕುಪ್ಪೆಟ್ಟಿ, ನಂತರದ ಎರಡುವರೆ ವರ್ಷಗಳ ಅವಧಿಗೆ ಪ್ರಭಾಕರ ಗೌಡ ಪೋಸೋಂದೊಡಿ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಾರೆ.

ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾದ ಸಾಮಾನ್ಯ ಕ್ಷೇತ್ರದಿಂದ ಪಂಚಾಯತ್ ಮಾಜಿ ಅಧ್ಯಕ್ಷ, ಹಾಲಿ ಸದಸ್ಯ ಮಾಜಿ ನಿರ್ದೇಶಕರಾದ ಜಯ ವಿಕ್ರಂ ಕಲ್ಲಾಪು ಜಯ ಗಳಿಸಿದ್ದಾರೆ.

Related posts

ಶಿಬಾಜೆಯಲ್ಲಿ ಸಿಮೆಂಟ್ ಶೀಟ್ ಕಟ್ಟಡ ಕೆಡವಿದ ಪ್ರಕರಣ: ಎಂಟು ಮಂದಿಯ ಮೇಲೆ ಧರ್ಮಸ್ಥಳ ಠಾಣೆಯಲ್ಲಿ ಕೇಸು ದಾಖಲು

Suddi Udaya

ವಾಣಿ ಕಾಲೇಜಿನ ಉಪನ್ಯಾಸಕ ಶಂಕರ್ ರಾವ್ ಅವರಿಗೆ ಸನ್ಮಾನ

Suddi Udaya

ಜ. 19: ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವಸ್ಥಾನ ಜಾತ್ರೋತ್ಸವದ ಪ್ರಯುಕ್ತ ಕುಲದೈವೋ ಬ್ರಹ್ಮ ಯಕ್ಷಗಾನ ಬಯಲಾಟ

Suddi Udaya

ಮಲವಂತಿಗೆ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಕೊಯ್ಯೂರು ಸ.ಹಿ.ಪ್ರಾ. ಶಾಲಾ ವಾರ್ಷಿಕೋತ್ಸವ ಹಾಗೂ ಸುಜ್ಞಾನ ಬಯಲು ರಂಗಮಂದಿರ ಉದ್ಘಾಟನೆ

Suddi Udaya

ಶಿಬಾಜೆ ಶ್ರೀ ಕ್ಷೇತ್ರ ಮೊಂಟೆತ್ತಡ್ಕ ದುರ್ಗಾಪರಮೇಶ್ವರೀ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ: ಹೊರೆಕಾಣಿಕೆ ಸಮರ್ಪಣೆ, ನೂತನ ಪಲ್ಲಕ್ಕಿ ಮೆರವಣಿಗೆ,

Suddi Udaya
error: Content is protected !!