22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರಿ ಭಾರತಿಗೆ 11 ಸ್ಥಾನ, ಕಾಂಗ್ರೆಸ್ ಬೆಂಬಲಿತ 1 ಸ್ಥಾನ

ಕಲ್ಲೇರಿ : ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಂದಿನ ಐದು ವರ್ಷದ ಅವಧಿಯ ಆಡಳಿತ ಮಂಡಳಿಯ 12 ನಿರ್ದೇಶಕರ ಸ್ಥಾನಕ್ಕೆ 27 ಮಂದಿ ಅಭ್ಯರ್ಥಿಗಳು ಕಣದಲ್ಲಿದು ಚುನಾವಣೆಯು ಜ.27ರಂದು ಸಂಘದ ಕಚೇರಿ ಆವರಣದಲ್ಲಿ ನಡೆಯಿತು.

ಬಿಜೆಪಿ ಬೆಂಬಲಿತ ಸಹಕಾರಿ ಭಾರತೀಯ ಅಭ್ಯರ್ಥಿಗಳಾದ ಸಾಲಗಾರ ಸಾಮಾನ್ಯ ಕ್ಷೇತ್ರದಲ್ಲಿ ಮಾಜಿ ಅಧ್ಯಕ್ಷರಾದ ಜಗದೀಶ್ ಶೆಟ್ಟಿ ಮೈರ, ಸಾಮ್ರಾಟ್ ಕಲ್ಲೇರಿ, ಸುನಿಲ್ ಅಣವು, ಜಯಾನಂದ ಕಲ್ಲಾಪು, ಸಾಲಗಾರ ಮಹಿಳಾ ಕ್ಷೇತ್ರದಿಂದ ಜಯಂತಿ ಪಾಲೇದು ಸರೋಜಿನಿ ವಿಜಯ ಕುಮಾರ್ ಕಲ್ಲಳಿಕೆ, ಸಾಲಗಾರರ ಹಿಂದುಳಿದ ವರ್ಗ ಎ ಸ್ಥಾನದಿಂದ ರಜನಿನಾಥ್ ಮುಂದಿಲ, ಸಾಲಗಾರರ ಹಿಂದುಳಿದ ವರ್ಗ ಬಿ ಸ್ಥಾನದಿಂದ ಕೃಷ್ಣಪ್ಪ ಗೌಡ, ಪ. ಜಾತಿ ಕ್ಷೇತ್ರದಿಂದ ಸುರೇಶ್ ಎಚ್ ಎಲ್., ಪ.ಪಂಗಡ ಕ್ಷೇತ್ರದಿಂದ ಶ್ರೀನಿವಾಸ್ ಜಯ ಗಳಿಸಿದ್ದಾರೆ.

ಸಾಲಗಾರರ ಕೇತ್ರದಿಂದ ಪ್ರಭಾಕರ ಗೌಡ ಪೋಸೋಂದೊಡಿ ಮತ್ತು ರೋಹಿತ್ ಕುಪ್ಪೆಟಿ 512 ಮತಗಳನ್ನು ಪಡೆದು ಟೈಯಾಗಿದ್ದು, ಚುನಾವಣಾಧಿಕಾರಿ ಯವರ ತೀರ್ಮಾನದ ಮೇರೆಗೆ ಮೊದಲ ಎರಡುವರೆ ವರ್ಷಗಳ ಅವಧಿಗೆ ರೋಹಿತ್ ಕುಪ್ಪೆಟ್ಟಿ, ನಂತರದ ಎರಡುವರೆ ವರ್ಷಗಳ ಅವಧಿಗೆ ಪ್ರಭಾಕರ ಗೌಡ ಪೋಸೋಂದೊಡಿ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಾರೆ.

ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾದ ಸಾಮಾನ್ಯ ಕ್ಷೇತ್ರದಿಂದ ಪಂಚಾಯತ್ ಮಾಜಿ ಅಧ್ಯಕ್ಷ, ಹಾಲಿ ಸದಸ್ಯ ಮಾಜಿ ನಿರ್ದೇಶಕರಾದ ಜಯ ವಿಕ್ರಂ ಕಲ್ಲಾಪು ಜಯ ಗಳಿಸಿದ್ದಾರೆ.

Related posts

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಆರ್ಥಿಕ ಸಾಕ್ಷರತೆ ಕಾರ್ಯಕ್ರಮ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ಮಾಜಿ ಅಧ್ಯಕ್ಷೆ ಶ್ರೀಮತಿ ಜೇಸಿಂತಾ ಮೋನಿಸ್ ನಿಧನ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ಯೋಗ ದಿನಾಚರಣೆ

Suddi Udaya

ಶಿಶಿಲ ಬಿಜೆಪಿ ಗ್ರಾಮ ಸಮಿತಿ ವತಿಯಿಂದ ಬಿಜೆಪಿ ಕಾರ್ಯಕರ್ತರಾದ ಚಂದ್ರಶೇಖರ್ ಗೌಡ ಧರ್ಮದಕಳ ಹಾಗೂ ಚೋಮರಿಗೆ ನುಡಿನಮನ ಕಾರ್ಯಕ್ರಮ

Suddi Udaya

ಕಳೆಂಜ: ನಡುಜಾರು ಸ.ಕಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ನೆರಿಯ ಪೆಟ್ರೋನೆಟ್ ವತಿಯಿಂದ ಸ್ಕೂಲ್ ಬ್ಯಾಗ್ ಹಾಗೂ ಲೇಖನ ಸಾಮಾಗ್ರಿ ವಿತರಣೆ

Suddi Udaya

ವಿದ್ಯಾರ್ಥಿನಿಗೆ ಅವಾಚ್ಯ ಶಬ್ದಗಳಿಂದ ನಿಂದನೆ : ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!