September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರಿ ಭಾರತಿಗೆ 11 ಸ್ಥಾನ, ಕಾಂಗ್ರೆಸ್ ಬೆಂಬಲಿತ 1 ಸ್ಥಾನ

ಕಲ್ಲೇರಿ : ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಂದಿನ ಐದು ವರ್ಷದ ಅವಧಿಯ ಆಡಳಿತ ಮಂಡಳಿಯ 12 ನಿರ್ದೇಶಕರ ಸ್ಥಾನಕ್ಕೆ 27 ಮಂದಿ ಅಭ್ಯರ್ಥಿಗಳು ಕಣದಲ್ಲಿದು ಚುನಾವಣೆಯು ಜ.27ರಂದು ಸಂಘದ ಕಚೇರಿ ಆವರಣದಲ್ಲಿ ನಡೆಯಿತು.

ಬಿಜೆಪಿ ಬೆಂಬಲಿತ ಸಹಕಾರಿ ಭಾರತೀಯ ಅಭ್ಯರ್ಥಿಗಳಾದ ಸಾಲಗಾರ ಸಾಮಾನ್ಯ ಕ್ಷೇತ್ರದಲ್ಲಿ ಮಾಜಿ ಅಧ್ಯಕ್ಷರಾದ ಜಗದೀಶ್ ಶೆಟ್ಟಿ ಮೈರ, ಸಾಮ್ರಾಟ್ ಕಲ್ಲೇರಿ, ಸುನಿಲ್ ಅಣವು, ಜಯಾನಂದ ಕಲ್ಲಾಪು, ಸಾಲಗಾರ ಮಹಿಳಾ ಕ್ಷೇತ್ರದಿಂದ ಜಯಂತಿ ಪಾಲೇದು ಸರೋಜಿನಿ ವಿಜಯ ಕುಮಾರ್ ಕಲ್ಲಳಿಕೆ, ಸಾಲಗಾರರ ಹಿಂದುಳಿದ ವರ್ಗ ಎ ಸ್ಥಾನದಿಂದ ರಜನಿನಾಥ್ ಮುಂದಿಲ, ಸಾಲಗಾರರ ಹಿಂದುಳಿದ ವರ್ಗ ಬಿ ಸ್ಥಾನದಿಂದ ಕೃಷ್ಣಪ್ಪ ಗೌಡ, ಪ. ಜಾತಿ ಕ್ಷೇತ್ರದಿಂದ ಸುರೇಶ್ ಎಚ್ ಎಲ್., ಪ.ಪಂಗಡ ಕ್ಷೇತ್ರದಿಂದ ಶ್ರೀನಿವಾಸ್ ಜಯ ಗಳಿಸಿದ್ದಾರೆ.

ಸಾಲಗಾರರ ಕೇತ್ರದಿಂದ ಪ್ರಭಾಕರ ಗೌಡ ಪೋಸೋಂದೊಡಿ ಮತ್ತು ರೋಹಿತ್ ಕುಪ್ಪೆಟಿ 512 ಮತಗಳನ್ನು ಪಡೆದು ಟೈಯಾಗಿದ್ದು, ಚುನಾವಣಾಧಿಕಾರಿ ಯವರ ತೀರ್ಮಾನದ ಮೇರೆಗೆ ಮೊದಲ ಎರಡುವರೆ ವರ್ಷಗಳ ಅವಧಿಗೆ ರೋಹಿತ್ ಕುಪ್ಪೆಟ್ಟಿ, ನಂತರದ ಎರಡುವರೆ ವರ್ಷಗಳ ಅವಧಿಗೆ ಪ್ರಭಾಕರ ಗೌಡ ಪೋಸೋಂದೊಡಿ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಾರೆ.

ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾದ ಸಾಮಾನ್ಯ ಕ್ಷೇತ್ರದಿಂದ ಪಂಚಾಯತ್ ಮಾಜಿ ಅಧ್ಯಕ್ಷ, ಹಾಲಿ ಸದಸ್ಯ ಮಾಜಿ ನಿರ್ದೇಶಕರಾದ ಜಯ ವಿಕ್ರಂ ಕಲ್ಲಾಪು ಜಯ ಗಳಿಸಿದ್ದಾರೆ.

Related posts

ಕಡಿರುದ್ಯಾವರ: ನಿಯಂತ್ರಣ ತಪ್ಪಿ ಬಿದ್ದ ದ್ವಿಚಕ್ರ ವಾಹನ

Suddi Udaya

ಪಾಂಗಾಳ ಕು. ಸೌಜನ್ಯ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ: ಆ.27 ರಂದು ಹೋರಾಟದಲ್ಲಿ ಭಾಗಿಯಾಗುವಂತೆ ಸೌಜನ್ಯ ತಾಯಿ ಕುಸುಮಾವತಿಯವರಿಗೆ ಆಹ್ವಾನ

Suddi Udaya

ನಾರಾವಿ: ಎನ್ಎಸ್ಎಸ್ ನಿಂದ ಬೃಹತ್ ರಕ್ತದಾನ ಶಿಬಿರ

Suddi Udaya

ಕಲ್ಮಂಜ: ಸಿದ್ದಬೈಲು ಪರಾರಿ ಶಾಲೆಯ ಹಳೆ ವಿದ್ಯಾರ್ಥಿ ಸಂಘ ರಚನೆ

Suddi Udaya

ಬೆಳ್ತಂಗಡಿ ಪ.ಪಂ. ವತಿಯಿಂದ ಸರಕಾರದ ಗೃಹಲಕ್ಷ್ಮಿ ಯೋಜನೆಗೆ ಚಾಲನೆ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ಸಂಸ್ಥಾಪನಾ ದಿನಾಚರಣೆ ಮತ್ತು ನಿಪುಣ್ ಪರೀಕ್ಷೆಯ ಬಗ್ಗೆ ಕಾರ್ಯಾಗಾರ

Suddi Udaya
error: Content is protected !!