30.2 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಧರ್ಮಸ್ಥಳ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು.

ಕಾರ್ಯಕ್ರಮಕ್ಕೆ ಅತಿಥಿಗಳಾಗಿ ಧರ್ಮಸ್ಥಳ ಶ್ರೀ ಧ. ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ಪದ್ಮರಾಜ್ ಎನ್. ಜೈನ್ ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿ ರಾಷ್ಟ್ರೀಯ ಹಬ್ಬಗಳನ್ನು ಅತ್ಯಂತ ಸಂಭ್ರಮದಿಂದ ನಾವು ಆಚರಿಸಬೇಕು. ಭಾರತದ ಇತಿಹಾಸ ,ಭಾರತದ ಪರಂಪರೆ, ಸ್ವರಾಜ್ಯದ ಮಹತ್ವ, ಒಗ್ಗಟ್ಟಿನ ಬಲ, ವಿದ್ಯಾರ್ಥಿಗಳ ಕರ್ತವ್ಯ ಹಾಗೂ ತನ್ನ ಗುಣದಲ್ಲಿ ಮಾಡಬೇಕಾದ ಉತ್ತಮ ಮಾರ್ಪಾಡುಗಳನ್ನು, ಸಂವಿಧಾನದ ರಚನೆ ಹಾಗೂ ಮಹತ್ವ ಜೊತೆಗೆ ವಿದ್ಯಾರ್ಥಿಗಳು ರೂಢಿಸಿಕೊಳ್ಳಬೇಕಾದ ಉತ್ತಮ ಹವ್ಯಾಸ ಇತ್ಯಾದಿಗಳನ್ನು ಹಲವು ಉದಾಹರಣೆ ಹಾಗೂ ಕಥೆಗಳ ಮೂಲಕ ವಿದ್ಯಾರ್ಥಿಗಳ ಮನ ಮುಟ್ಟುವಂತೆ ವಿವರಿಸಿದರು.

ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪರಿಮಳ ಎಂ.ವಿ ಪ್ರಾಸ್ತಾವಿಸಿ, ಸ್ವಾಗತಿಸಿದರು.

ಬಳಿಕ ವಿದ್ಯಾರ್ಥಿಗಳು ದೇಶಭಕ್ತಿಯನ್ನು ಬಿಂಬಿಸುವ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಶಾಲಾ ಶಿಕ್ಷಕರು, ಶಿಕ್ಷಕೇತರ ಸಿಬ್ಬಂದಿಗಳ ಹಾಗೂ ವಿದ್ಯಾರ್ಥಿಗಳ ಭಾಗವಹಿಸಿದ್ದರು.

ವಿದ್ಯಾರ್ಥಿಗಳಾದ ಕು. ಪೂರ್ವಿ ಭಟ್ ಕಾರ್ಯಕ್ರಮ ನಿರೂಪಿಸಿದರು. ಕು. ಶ್ರೇಯಾ ಅತಿಥಿಗಳನ್ನು ಪರಿಚಯಿಸಿದರು. ಕು. ಧನ್ಯಶ್ರಿ ವಂದಿಸಿದರು.

Related posts

ನಡ ಸ.ಪ.ಪೂ. ಕಾಲೇಜಿನಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

Suddi Udaya

ಚುನಾವಣಾ ಕಾನೂನು ಸುವ್ಯವಸ್ಥೆ, ಕಾಪಾಡುವ ಹಿತದೃಷ್ಟಿಯಿಂದ : ಎ.17 ಸೋಮವಾರ ಬೆಳ್ತಂಗಡಿ ಸಂತೆಕಟ್ಟೆ‌ಯಿಂದ ಬಸ್ ನಿಲ್ದಾಣದವರೆಗೆ ರಾಷ್ಟ್ರೀಯ ಹೆದ್ದಾರಿಯ ಇಕ್ಕೆಲಗಳಲ್ಲಿ ವ್ಯಾಪಾರ ನಿಷೇಧ

Suddi Udaya

ಬೆಳ್ತಂಗಡಿ ವಾಣಿ ಆಂ.ಮಾ. ಶಾಲೆಯಲ್ಲಿ ನೂತನ ಮಂತ್ರಿಮಂಡಲ ಪ್ರಮಾಣವಚನ ಸಮಾರಂಭ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ವಿದ್ಯಾ ಸಂಸ್ಥೆಯಲ್ಲಿ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಕಲೋತ್ಸವ

Suddi Udaya

ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಸಿಗೆ ಶಿಬಿರ

Suddi Udaya

ಗುರುವಾಯನಕೆರೆ: ಸೆಲೆಕ್ಷನ್ ವೇರ್ ನಲ್ಲಿ ಮಾನ್ಸೂನ್ ಸ್ಪೆಷಲ್ ಆಫರ್: ಪ್ರತಿ ಖರೀದಿಯ ಮೇಲೆ ಶೇ.50 ರಷ್ಟು ರಿಯಾಯಿತಿ

Suddi Udaya
error: Content is protected !!