22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಧರ್ಮಸ್ಥಳ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು.

ಕಾರ್ಯಕ್ರಮಕ್ಕೆ ಅತಿಥಿಗಳಾಗಿ ಧರ್ಮಸ್ಥಳ ಶ್ರೀ ಧ. ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ಪದ್ಮರಾಜ್ ಎನ್. ಜೈನ್ ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿ ರಾಷ್ಟ್ರೀಯ ಹಬ್ಬಗಳನ್ನು ಅತ್ಯಂತ ಸಂಭ್ರಮದಿಂದ ನಾವು ಆಚರಿಸಬೇಕು. ಭಾರತದ ಇತಿಹಾಸ ,ಭಾರತದ ಪರಂಪರೆ, ಸ್ವರಾಜ್ಯದ ಮಹತ್ವ, ಒಗ್ಗಟ್ಟಿನ ಬಲ, ವಿದ್ಯಾರ್ಥಿಗಳ ಕರ್ತವ್ಯ ಹಾಗೂ ತನ್ನ ಗುಣದಲ್ಲಿ ಮಾಡಬೇಕಾದ ಉತ್ತಮ ಮಾರ್ಪಾಡುಗಳನ್ನು, ಸಂವಿಧಾನದ ರಚನೆ ಹಾಗೂ ಮಹತ್ವ ಜೊತೆಗೆ ವಿದ್ಯಾರ್ಥಿಗಳು ರೂಢಿಸಿಕೊಳ್ಳಬೇಕಾದ ಉತ್ತಮ ಹವ್ಯಾಸ ಇತ್ಯಾದಿಗಳನ್ನು ಹಲವು ಉದಾಹರಣೆ ಹಾಗೂ ಕಥೆಗಳ ಮೂಲಕ ವಿದ್ಯಾರ್ಥಿಗಳ ಮನ ಮುಟ್ಟುವಂತೆ ವಿವರಿಸಿದರು.

ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪರಿಮಳ ಎಂ.ವಿ ಪ್ರಾಸ್ತಾವಿಸಿ, ಸ್ವಾಗತಿಸಿದರು.

ಬಳಿಕ ವಿದ್ಯಾರ್ಥಿಗಳು ದೇಶಭಕ್ತಿಯನ್ನು ಬಿಂಬಿಸುವ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಶಾಲಾ ಶಿಕ್ಷಕರು, ಶಿಕ್ಷಕೇತರ ಸಿಬ್ಬಂದಿಗಳ ಹಾಗೂ ವಿದ್ಯಾರ್ಥಿಗಳ ಭಾಗವಹಿಸಿದ್ದರು.

ವಿದ್ಯಾರ್ಥಿಗಳಾದ ಕು. ಪೂರ್ವಿ ಭಟ್ ಕಾರ್ಯಕ್ರಮ ನಿರೂಪಿಸಿದರು. ಕು. ಶ್ರೇಯಾ ಅತಿಥಿಗಳನ್ನು ಪರಿಚಯಿಸಿದರು. ಕು. ಧನ್ಯಶ್ರಿ ವಂದಿಸಿದರು.

Related posts

ಅನಾರು : ಶ್ರೀ ದುರ್ಗಾಪರಮೇಶ್ವರೀ ದೇವಿಯ ವರ್ಷಾವಧಿ ಜಾತ್ರಾ ಮಹೋತ್ಸವ: “ಅನಾರ್ ಡ್ ಓಂಕಾರ್” ಆಲ್ಬಮ್ ಸಾಂಗ್ ಬಿಡುಗಡೆ

Suddi Udaya

ಶಾಸಕ ಹರೀಶ್ ಪೂಂಜರವರಿಂದ ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕೊಕ್ರಾಡಿ ಶಾಖೆಯ ಕೃಷಿ ಗೊಬ್ಬರ ಮಾರಾಟ ಕೇಂದ್ರ ಹಾಗೂ ಎಟಿಎಂ ಉದ್ಘಾಟನೆ

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವನಮಹೋತ್ಸವ ಆಚರಣೆ.

Suddi Udaya

ಸೋಣಂದೂರು: ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ವಾಹನ ಪಲ್ಟಿ

Suddi Udaya

ಪಾಂಗಳ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷರಾಗಿ ರಾಮಚಂದ್ರ ಭಟ್, ಕಾರ್ಯದರ್ಶಿಯಾಗಿ ಮುಖೇಶ್ ಆಯ್ಕೆ

Suddi Udaya

ಮರೋಡಿ ಗ್ರಾ.ಪಂ ನೂತನ ಅಧ್ಯಕ್ಷರಾಗಿ ಯುವ ನಾಯಕ ರತ್ನಾಕರ ಬುಣ್ಣನ್ , ಉಪಾಧ್ಯಕ್ಷರಾಗಿ ಶುಭರಾಜ್ ಹೆಗ್ಡೆ ಅವಿರೋಧವಾಗಿ ಆಯ್ಕೆ

Suddi Udaya
error: Content is protected !!