23 C
ಪುತ್ತೂರು, ಬೆಳ್ತಂಗಡಿ
February 24, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಪೆರ್ಲ-ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಬ್ರಹ್ಮಕಲಶೋತ್ಸವದ ಯಶಸ್ಸಿಗೆ ಸಹಕರಿಸಿದವರಿಗೆ ಅಭಿನಂದನಾ ಸಭೆ

ಬಂದಾರು: ಬಂದಾರು ಗ್ರಾಮ ಪೆರ್ಲ-ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಪುನರ್ ಪ್ರತಿಷ್ಠಾಬಂಧ ಬ್ರಹ್ಮಕಲಶೋತ್ಸವ ಕಾರ್ಯಕ್ರಮದ ಯಶಸ್ಸಿಗೆ ಕಾರಣಿಕರ್ತರಾದ ಸಮಸ್ತರಿಗೆ ಅಭಿನಂದನಾ ಸಭೆ ಸಿದ್ಧಿಶ್ರೀ ಕಲಾವೇದಿಕೆಯಲ್ಲಿ ಜ.೨೬ರಂದು ನಡೆಯಿತು.

ಬ್ರಹ್ಮಕಲಶೋತ್ಸವ ಯಶಸ್ಸಿಗೆ ಕಾರಣಿಭೂತರಾದ ವಿವಿಧ ಸಮಿತಿಗಳಿಗೆ, ದಾನಿಗಳಿಗೆ, ಭಕ್ತವೃಂದಕ್ಕೆ ಅಭಿನಂದನೆ ಸಲ್ಲಿಸಿ ಯುವ ಉದ್ಯಮಿ ಕಿರಣ್‌ಚಂದ್ರ ಡಿ ಪುಷ್ಪಗಿರಿಯವರು ಶುಭನುಡಿ ಸಲ್ಲಿಸಿದರು.

ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಮಹಾಬಲ ಗೌಡ ಅಧ್ಯಕ್ಷತೆಯನ್ನು ವಹಿಸಿದ್ದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಕೃಷಿ ವಿಭಾಗ ಮುಖ್ಯಸ್ಥ ಬಜೆಗುತ್ತು ಬಾಲಕೃಷ್ಣ ಪೂಜಾರಿ ಯವರು ಅಭಿನಂದನಾ ಮಾತುಗಳನ್ನಾಡಿದರು.

ಮುಖ್ಯ ಅತಿಥಿಗಳಾಗಿ ಉಜಿರೆ ಎಸ್‌ಡಿಎಂ ಕಾಲೇಜು ಉಪನ್ಯಾಸಕ ಡಾ. ದಿವಾ ಕೊಕ್ಕಡ ಸಂದರ್ಭಯೋಚಿತವಾಗಿ ಮಾತುಗಳನ್ನಾಡಿದರು.

ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬೆಳ್ತಂಗಡಿ ವಿಭಾಗ ಯೋಜನಾಧಿಕಾರಿ ಸುರೇಂದ್ರ, ಅನುವಂಶೀಯ ಆಡಳಿತ ಮೊಕ್ತೇಸರ ಕುಕ್ಕಪ್ಪ ಗೌಡ, ಆಡಳಿತ ಮಂಡಳಿ ಅಧ್ಯಕ್ಷರಾದ ರಮೇಶ್ ಗೌಡ ಅಡ್ಡಾರು, ಕಾರ್ಯದರ್ಶಿ ಉಮೇಶ್ ಗೌಡ, ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ ಪರಪ್ಪಾಜೆ, ಕೋಶಾಧಿಕಾರಿ ಕೇಶವ ಗೌಡ ಕೊಂಗುಜೆ, ದೇವಳದ ಅರ್ಚಕರಾದ ಅನಂತರಾಮ ಶಬರಾಯ, ಭಜನಾ ಮಂಡಳಿ ಅಧ್ಯಕ್ಷರಾದ ಲಕ್ಷ್ಮಣ ಗೌಡ ಫಲಸದಕೋಡಿ, ಮಹಿಳಾ ಸಮಿತಿ ಅಧ್ಯಕ್ಷರಾದ ಶ್ವೇತಾ ಹಾರ್ತ್ಯಾರು ಉಪಸ್ಥಿತರಿದ್ದರು.

ದೇವಳಕ್ಕೆ ವಸ್ತು ರೂಪದಲ್ಲಿ ಕೊಡುಗೆ ನೀಡಿದ ದಾನಿಗಳನ್ನು ಗೌರವಿಸಲಾಯಿತು. ವಿವಿಧ ಸಮಿತಿ ಪದಾಧಿಕಾರಿಗಳು, ಭಕ್ತವೃಂದವರು ಉಪಸ್ಥಿತರಿದ್ದರು.

ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯದರ್ಶಿ ಸತೀಶ್ ಬಾಲಂಪಾಡಿ ಕಾರ್ಯಕ್ರಮ ನಿರೂಪಿಸಿದರು.

Related posts

ಉಜಿರೆ ರಾಜಾರಾಂ ಶೋ ರೂಂ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ವಿಶೇಷ ಡಿಸ್ಕೌಂಟ್ ಸೇಲ್

Suddi Udaya

ಗುರುವಾಯನಕೆರೆ: 30ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ರಚನೆ: ಗೌರವಾಧ್ಯಕ್ಷರಾಗಿ ಶಶಿರಾಜ್ ಶೆಟ್ಟಿ, ಅಧ್ಯಕ್ಷರಾಗಿ ರಿಜೇಶ್ ಕುಮಾರ್ ಆಯ್ಕೆ

Suddi Udaya

ನಾವೂರು ಗ್ರಾ.ಪಂ. ನಲ್ಲಿ ಗ್ರಾಮ ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮ

Suddi Udaya

ಪ್ರಧಾನಿ ಮೋದಿಯವರ ಜನ್ಮದಿನದ ಅಂಗವಾಗಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಬಿಜೆಪಿ ಕಾರ್ಯಕರ್ತರಿಂದ ದೇವರಿಗೆ ವಿಶೇಷ ಪೂಜೆ

Suddi Udaya

ಬಿಜೆಪಿ ದ.ಕ. ಜಿಲ್ಲೆಯ ಸಾಮಾಜಿಕ ಮಾಧ್ಯಮ ಪ್ರಕೋಷ್ಠ ಜಿಲ್ಲಾ ಸಮಿತಿಗೆ ಸದಸ್ಯರಾಗಿ ಸುಪ್ರೀತ್ ಜೈನ್ ಅಳದಂಗಡಿ

Suddi Udaya

ಹತ್ಯಡ್ಕ: ನಾವಳೆಯಲ್ಲಿ ಸಂಪನ್ನಗೊಂಡ ಉಚಿತ ಟೈಲರಿಂಗ್ ತರಬೇತಿ ಶಿಬಿರ

Suddi Udaya
error: Content is protected !!