April 21, 2025
Uncategorized

ಮಂಜುಶ್ರೀ ಮುದ್ರಣಾಲಯದ ಮೇಲ್ವಿಚಾರಕ ವಿಶ್ವನಾಥ ಶೆಟ್ಟಿಯವರಿಗೆ ಬೀಳ್ಕೊಡುಗೆ

ಉಜಿರೆಯ ಮಂಜುಶ್ರೀ ಮುದ್ರಣಾಲಯದಲ್ಲಿ ಸುದೀರ್ಘ 42 ವರ್ಷ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿ ಪ್ರೊಡಕ್ಷನ್ ವಿಭಾಗದ ಮೇಲ್ವಿಚಾರಕರಾಗಿ, ಎಲ್ಲರ ಪ್ರೀತಿ ವಿಶ್ವಾಸಕ್ಕೆ ಪಾತ್ರರಾಗಿ ನಿವೃತ್ತರಾದ ವಿಶ್ವನಾಥ ಶೆಟ್ಟಿಯವರಿಗೆ ಇತ್ತೀಚೆಗೆ ಬೀಳ್ಕೊಡುಗೆ ಸಮಾರಂಭವನ್ನು ಎಸ್.ಡಿ.ಎಂ. ಮಹಿಳಾ ಐ.ಟಿ.ಐ ತರಬೇತಿ ಕೇಂದ್ರದ ಸಭಾಂಗಣದಲ್ಲಿ ನಡೆಯಿತು.

ಮುಖ್ಯ ಅತಿಥಿಯಾಗಿ ಆಗಮಿಸಿ ಉಜಿರೆ ಎಸ್.ಡಿಎಂ, ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳಾದ ಪ್ರೊ. ಎಸ್. ಸತೀಶ್ಚಂದ್ರರವರು ವಿಶ್ವನಾಥ ಶೆಟ್ಟಿ ಮತ್ತು ಶ್ರೀಮತಿ ವನಿತಾ ವಿಶ್ವನಾಥ್ ಶೆಟ್ಟಿ ದಂಪತಿಯನ್ನು ಸನ್ಮಾನಿಸಿದರು.

ಬಳಿಕ ಮಾತನಾಡಿ, ಅವರು ಸಂಸ್ಥೆಗೆ ಸುದೀರ್ಘ ಎರಡು ದಶಕಗಳ ಕಾಲ ಸೇವೆ ಸಲ್ಲಿಸಿದ ವಿಶ್ವನಾಥ ಶೆಟ್ಟರ ಸೇವೆಯನ್ನು ಪ್ರಶಂಸಿಸಿದರು.

ಸಹೋದ್ಯೋಗಿ ಮೋನಪ್ಪ ಟಿ. ಹಾಗೂ ಚಿತ್ತರಂಜನ್ ವಿಶ್ವನಾಥ ಶೆಟ್ಟರ ಕಾರ್ಯವೈಖರಿ ಕುರಿತು ಅನುಭವ ಹಂಚಿಕೊಂಡರು.

ಮಂಜುಶ್ರೀ ಮುದ್ರಣಾಲಯದ ವ್ಯವಸ್ಥಾಪಕರಾದ ಶೇಖರ್ ಟಿ. ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸಹಾಯಕ ವ್ಯವಸ್ಥಾಪಕರಾದ ವೆಂಕಪ್ಪ ವಂದಿಸಿದರು, ರವಿ ಪರಕ್ಕಜೆ ನಿರೂಪಿಸಿದರು.

ಮುದ್ರಣಾಲಯದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ಶಿಶಿಲ :ಶ್ರೀ ದುರ್ಗಾಪರಮೇಶ್ವರಿ ಯುವಕ ಮಂಡಲದಿಂದ ಸಹಾಯ

Suddi Udaya

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ಅಧಿಕಾರಿಗಳಿಂದ ನಮಗೆ ಮಾನಸಿಕ ಹಿಂಸೆ : ಗಿರಿಯಪ್ಪ ಗೌಡ ನಾಗನಡ್ಕ ಆರೋಪ

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಪೆರ್ಲ ಬೈಪಾಡಿ ಸರ್ಕಾರಿ ಪ್ರೌಢ ಶಾಲೆಗೆ ಶೇ. 100

Suddi Udaya

ವಾಣಿ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರ

Suddi Udaya

ಉಜಿರೆ ಟೆಕ್ಸ್ ಟೈಲ್ಸ್ ಉದ್ಯಮಿಯಿಂದ ಲೈಂಗಿಕ ದೌರ್ಜನ್ಯ ಆರೋಪ: ಕೆಲಸಕ್ಕೆ ಬಂದ ಮಹಿಳೆಯಿಂದ ಬೆಳ್ತಂಗಡಿ ಠಾಣೆಯಲ್ಲಿ ದೂರು ದಾಖಲು

Suddi Udaya
error: Content is protected !!