Uncategorized

ಮಂಜುಶ್ರೀ ಮುದ್ರಣಾಲಯದ ಮೇಲ್ವಿಚಾರಕ ವಿಶ್ವನಾಥ ಶೆಟ್ಟಿಯವರಿಗೆ ಬೀಳ್ಕೊಡುಗೆ

ಉಜಿರೆಯ ಮಂಜುಶ್ರೀ ಮುದ್ರಣಾಲಯದಲ್ಲಿ ಸುದೀರ್ಘ 42 ವರ್ಷ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿ ಪ್ರೊಡಕ್ಷನ್ ವಿಭಾಗದ ಮೇಲ್ವಿಚಾರಕರಾಗಿ, ಎಲ್ಲರ ಪ್ರೀತಿ ವಿಶ್ವಾಸಕ್ಕೆ ಪಾತ್ರರಾಗಿ ನಿವೃತ್ತರಾದ ವಿಶ್ವನಾಥ ಶೆಟ್ಟಿಯವರಿಗೆ ಇತ್ತೀಚೆಗೆ ಬೀಳ್ಕೊಡುಗೆ ಸಮಾರಂಭವನ್ನು ಎಸ್.ಡಿ.ಎಂ. ಮಹಿಳಾ ಐ.ಟಿ.ಐ ತರಬೇತಿ ಕೇಂದ್ರದ ಸಭಾಂಗಣದಲ್ಲಿ ನಡೆಯಿತು.

ಮುಖ್ಯ ಅತಿಥಿಯಾಗಿ ಆಗಮಿಸಿ ಉಜಿರೆ ಎಸ್.ಡಿಎಂ, ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳಾದ ಪ್ರೊ. ಎಸ್. ಸತೀಶ್ಚಂದ್ರರವರು ವಿಶ್ವನಾಥ ಶೆಟ್ಟಿ ಮತ್ತು ಶ್ರೀಮತಿ ವನಿತಾ ವಿಶ್ವನಾಥ್ ಶೆಟ್ಟಿ ದಂಪತಿಯನ್ನು ಸನ್ಮಾನಿಸಿದರು.

ಬಳಿಕ ಮಾತನಾಡಿ, ಅವರು ಸಂಸ್ಥೆಗೆ ಸುದೀರ್ಘ ಎರಡು ದಶಕಗಳ ಕಾಲ ಸೇವೆ ಸಲ್ಲಿಸಿದ ವಿಶ್ವನಾಥ ಶೆಟ್ಟರ ಸೇವೆಯನ್ನು ಪ್ರಶಂಸಿಸಿದರು.

ಸಹೋದ್ಯೋಗಿ ಮೋನಪ್ಪ ಟಿ. ಹಾಗೂ ಚಿತ್ತರಂಜನ್ ವಿಶ್ವನಾಥ ಶೆಟ್ಟರ ಕಾರ್ಯವೈಖರಿ ಕುರಿತು ಅನುಭವ ಹಂಚಿಕೊಂಡರು.

ಮಂಜುಶ್ರೀ ಮುದ್ರಣಾಲಯದ ವ್ಯವಸ್ಥಾಪಕರಾದ ಶೇಖರ್ ಟಿ. ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸಹಾಯಕ ವ್ಯವಸ್ಥಾಪಕರಾದ ವೆಂಕಪ್ಪ ವಂದಿಸಿದರು, ರವಿ ಪರಕ್ಕಜೆ ನಿರೂಪಿಸಿದರು.

ಮುದ್ರಣಾಲಯದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ಕುಕ್ಕೇಡಿ ಗ್ರಾ.ಪಂ.ನಲ್ಲಿ ಉದ್ಯೋಗ ಖಾತರಿ ಯೋಜನೆಯ ‘ಪಂಚ ಅಭಿಯಾನದಡಿ’ ಕೋಟಿ ವೃಕ್ಷ ಅಭಿಯಾನ

Suddi Udaya

ಕರ್ನಾಟಕ ರಾಜ್ಯ ಟೈಲರ್ ಅಸೋಸಿಯೇಷನ್ ಉಜಿರೆ ವಲಯ ಸಮಿತಿ ಮಹಾಸಭೆ ಹಾಗೂ ಪದಾಧಿಕಾರಿಗಳ ಆಯ್ಕೆ

Suddi Udaya

ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವೈದ್ಯರ ದಿನಾಚರಣೆ

Suddi Udaya

ನಾಳೆ ಬೆಳ್ತಂಗಡಿಗೆ ಜಿಲ್ಲಾಧಿಕಾರಿ ಭೇಟಿ

Suddi Udaya

ಕುವೆಟ್ಟು ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೀಳ್ಕೊಡುಗೆ ಸಮಾರಂಭ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಚುನಾವಣೆ ಶೇ. 73.64 ಮತದಾನ

Suddi Udaya
error: Content is protected !!