July 23, 2026
Uncategorized

ಮಂಜುಶ್ರೀ ಮುದ್ರಣಾಲಯದ ಮೇಲ್ವಿಚಾರಕ ವಿಶ್ವನಾಥ ಶೆಟ್ಟಿಯವರಿಗೆ ಬೀಳ್ಕೊಡುಗೆ

ಉಜಿರೆಯ ಮಂಜುಶ್ರೀ ಮುದ್ರಣಾಲಯದಲ್ಲಿ ಸುದೀರ್ಘ 42 ವರ್ಷ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿ ಪ್ರೊಡಕ್ಷನ್ ವಿಭಾಗದ ಮೇಲ್ವಿಚಾರಕರಾಗಿ, ಎಲ್ಲರ ಪ್ರೀತಿ ವಿಶ್ವಾಸಕ್ಕೆ ಪಾತ್ರರಾಗಿ ನಿವೃತ್ತರಾದ ವಿಶ್ವನಾಥ ಶೆಟ್ಟಿಯವರಿಗೆ ಇತ್ತೀಚೆಗೆ ಬೀಳ್ಕೊಡುಗೆ ಸಮಾರಂಭವನ್ನು ಎಸ್.ಡಿ.ಎಂ. ಮಹಿಳಾ ಐ.ಟಿ.ಐ ತರಬೇತಿ ಕೇಂದ್ರದ ಸಭಾಂಗಣದಲ್ಲಿ ನಡೆಯಿತು.

ಮುಖ್ಯ ಅತಿಥಿಯಾಗಿ ಆಗಮಿಸಿ ಉಜಿರೆ ಎಸ್.ಡಿಎಂ, ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳಾದ ಪ್ರೊ. ಎಸ್. ಸತೀಶ್ಚಂದ್ರರವರು ವಿಶ್ವನಾಥ ಶೆಟ್ಟಿ ಮತ್ತು ಶ್ರೀಮತಿ ವನಿತಾ ವಿಶ್ವನಾಥ್ ಶೆಟ್ಟಿ ದಂಪತಿಯನ್ನು ಸನ್ಮಾನಿಸಿದರು.

ಬಳಿಕ ಮಾತನಾಡಿ, ಅವರು ಸಂಸ್ಥೆಗೆ ಸುದೀರ್ಘ ಎರಡು ದಶಕಗಳ ಕಾಲ ಸೇವೆ ಸಲ್ಲಿಸಿದ ವಿಶ್ವನಾಥ ಶೆಟ್ಟರ ಸೇವೆಯನ್ನು ಪ್ರಶಂಸಿಸಿದರು.

ಸಹೋದ್ಯೋಗಿ ಮೋನಪ್ಪ ಟಿ. ಹಾಗೂ ಚಿತ್ತರಂಜನ್ ವಿಶ್ವನಾಥ ಶೆಟ್ಟರ ಕಾರ್ಯವೈಖರಿ ಕುರಿತು ಅನುಭವ ಹಂಚಿಕೊಂಡರು.

ಮಂಜುಶ್ರೀ ಮುದ್ರಣಾಲಯದ ವ್ಯವಸ್ಥಾಪಕರಾದ ಶೇಖರ್ ಟಿ. ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸಹಾಯಕ ವ್ಯವಸ್ಥಾಪಕರಾದ ವೆಂಕಪ್ಪ ವಂದಿಸಿದರು, ರವಿ ಪರಕ್ಕಜೆ ನಿರೂಪಿಸಿದರು.

ಮುದ್ರಣಾಲಯದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿಯಲ್ಲಿ 500 ಎಕ್ರೆ ಯಾಂತ್ರಿಕೃತ ಯಂತ್ರಶ್ರೀ ನಾಟಿಗೆ ಚಾಲನೆ

Suddi Udaya

ಭಾರೀ ಗಾಳಿ-ಮಳೆ: ನಾವೂರು ನಾಗಜೆ ಯಮನಾ ರವರ ಮನೆಗೆ ಬಿದ್ದ ಬೃಹತ್ ಗಾತ್ರದ ಮರ: ಅಪಾರ ಹಾನಿ

Suddi Udaya

ಸ್ಪೆಕ್ಟ್ರಮ್ ಧರ್ಮಸ್ಥಳ ನೇತೃತ್ವದಲ್ಲಿ ದ.ಕ. ಜಿಲ್ಲೆ ಹಾಗೂ ಬೆಳ್ತಂಗಡಿ ತಾಲೂಕು ವಾಲಿಬಾಲ್ ಅಸೋಸಿಯೇಷನ್ ಸಹಯೋಗದಲ್ಲಿ ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟ

Suddi Udaya

ಡಿ.17: ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ, ಬಿರುಸಿನ ಪೈಪೋಟಿ: ಬಿಜೆಪಿ-ಕಾಂಗ್ರೆಸ್ ಬಿಗ್ ಫೈಟ್, 12 ಸ್ಥಾನಕ್ಕೆ 24 ನಾಮಪತ್ರ ಸಲ್ಲಿಕೆ

Suddi Udaya

ನಿಯಂತ್ರಣ ತಪ್ಪಿ ಆಪೆ ರಿಕ್ಷಾ ಪಲ್ಟಿ: ಪ್ರಯಾಣಿಕರಿಗೆ ಗಾಯ

Suddi Udaya

ಸೌತ್ ಕೆನರಾ ಫೋಟೊಗ್ರಾಫರ್ಸ ಅಸೋಸಿಯೇಸನ್ ದ ಕ ಉಡುಪಿ ಜಿಲ್ಲೆ ಬೆಳ್ತಂಗಡಿ ವಲಯದ ವತಿಯಿಂದ 78 ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ

Suddi Udaya
error: Content is protected !!