September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಿಕ್ಷಣ ಸಂಸ್ಥೆ

ಲಾಯಿಲ ದಯಾ ವಿಶೇಷ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

ಲಾಯಿಲ ದಯಾ ವಿಶೇಷ ಶಾಲೆಯಲ್ಲಿ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು.

ಶಾಲಾ ಸಂಚಾಲಕ ವಂ. ಫಾ. ವಿನೋದ್ ಮಸ್ಕರೇನ್ಹಸ್ ಮಾತನಾಡಿ ಜಾತಿ, ಧರ್ಮ ಭೇದಭಾವವಿಲ್ಲದೇ ರಾಷ್ಟ್ರೀಯ ಹಬ್ಬಗಳನ್ನು ಆಚರಿಸಬೇಕು. ನಮ್ಮ ಭಾರತ ಸಂವಿಧಾನದಲ್ಲಿ ಹಕ್ಕುಗಳ ಬಗ್ಗೆ ಸವಿಸ್ತಾರವಾಗಿ ನಮಗೆ ತಿಳಿಸಲ್ಪಟ್ಟಿದೆ, ಯಾವ ರೀತಿಯಲ್ಲಿ ನಾವು ಹಕ್ಕುಗಳನ್ನು ಪಡೆಯಬಹುದು ಮತ್ತು ಸಂವಿಧಾನವನ್ನು ಪಾಲಿಸಬಹುದು ಎಂದು ತಿಳಿಸಿದರು. ಎಲ್ಲಾ ರಾಜ್ಯಗಳಲ್ಲಿ ಗಣರಾಜ್ಯೋತ್ಸವನ್ನು ಆಚರಿಸಿ ಸಂಭ್ರಮಿಸುತ್ತೇವೆ. ಬೇರೆ ಬೇರೆ ರಾಜ್ಯಗಳಲ್ಲಿ ಭಾಷೆ, ಆಚರಣೆ, ಊಟದ ಪದ್ದತಿ ಬೇರೆ ಬೇರೆ ಇದ್ದರೂ ನಾವು ಒಂದೇ ಎಂಬುದನ್ನು ಕಾಣಬಹುದು. ಅದೇ ರೀತಿ ಮೂಲಭೂತ ಹಕ್ಕು ಹಾಗೂ ಕರ್ತವ್ಯಗಳನ್ನು ಒಳ್ಳೆ ರೀತಿಯಲ್ಲಿ ನಿಭಾಯಿಸಿ, ನಾವೆಲ್ಲಾ ಒಂದೇ ತಾಯಿಯ ಮಕ್ಕಳು, ನಾವೆಲ್ಲ ಒಟ್ಟಿಗೆ ಬೆರೆತು ಉತ್ತಮ ನಾಗರಿಕರಾಗೋಣ ಎಂದು ಆಶಿಸಿದರು.

ಈ ಸಂದರ್ಭದಲ್ಲಿ ಶಿಕ್ಷಕಿಯರು, ಸಿಬ್ಬಂದಿ ವರ್ಗದವರು ಮತ್ತು ಮಕ್ಕಳು ಉಪಸ್ಥಿತರಿದ್ದರು.

ಗಣರಾಜ್ಯೋತ್ಸವದ ಪ್ರಯುಕ್ತ ಶಾಲಾ ಮಕ್ಕಳಿಗೆ ಸಂವಿಧಾನದ ಪೀಠಿಕೆಯ ಕಂಠಪಾಠ ಸ್ಪರ್ಧೆಯನ್ನು ಏರ್ಪಡಿಸಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ದಿವ್ಯ ಕಾರ್ಯಕ್ರಮ ನಿರೂಪಿಸಿ ಧನ್ಯವಾದವಿತ್ತರು.

Related posts

ವೇಣೂರು ಮಹಿಳಾ ಮಂಡಲದ ನೂತನ ಅಧ್ಯಕ್ಷರಾಗಿ ಶ್ರೀಮತಿ ಅಮಿತಾ ಶೇಖರ್ ಆಯ್ಕೆ

Suddi Udaya

ಉಜಿರೆ ನಿನಾದ ಕ್ಲಾಸಿಕಲ್ಸ್ ನಲ್ಲಿ ನೋಂದಾವಣಿ ಆರಂಭ: ಒಂದೇ ಸೂರಿನಡಿಯಲ್ಲಿ ವಿವಿಧ ವಿದ್ಯೆಗಳನ್ನು ಕಲಿಯುವ ಸುವರ್ಣಾವಕಾಶ

Suddi Udaya

ಶ್ರೀರತ್ನಾತ್ರಯ ಜೈನ ಸಂಘ ದಿಂದ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಖಾನ್ ರಿಗೆ ಮನವಿ: ಜೈನ ಧರ್ಮೀಯರಿಗೆ ಪ್ರತ್ಯೇಕ ನಿಗಮ ರಚನೆ ಸಚಿವರ ಭರವಸೆ

Suddi Udaya

ಮಚ್ಚಿನ ಕಾರ್ಯಕ್ಷೇತ್ರದ ಜ್ಞಾನ ವಿಕಾಸ ಕಾರ್ಯಕ್ರಮದ ಅಡಿಯಲ್ಲಿ ಟ್ಯೂಷನ್ ಕ್ಲಾಸ್ ಉದ್ಘಾಟನೆ

Suddi Udaya

ಉಜಿರೆ ಶ್ರೀ ಧ.ಮಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗುರುಪೂರ್ಣಿಮಾ ದಿನಾಚರಣೆ

Suddi Udaya

ಪಡಿತರ ವಿತರಣೆಗೆ ಸರ್ವರ್ ಡೌನ್ : ದಿನವಿಡೀ ನ್ಯಾಯಬೆಲೆ ಅಂಗಡಿ ಮುಂದೆ ಕಾದು ಮರಳಿ ಮನೆಗೆ ಹೋಗುವ ಪರಿಸ್ಥಿತಿ

Suddi Udaya
error: Content is protected !!