24 C
ಪುತ್ತೂರು, ಬೆಳ್ತಂಗಡಿ
June 8, 2025
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ: ಆರೋಪಿ ಕೇಶವ ಪೂಜಾರಿಗೆ ಶಿಕ್ಷೆ ಪ್ರಕಟ

ಬೆಳ್ತಂಗಡಿ : ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಬೆದರಿಕೆ ಹಾಕಿ ಅತ್ಯಾಚಾರ ಮಾಡಿ ಗರ್ಭಿಣಿಯಾಗಲು ಕಾರಣವಾಗಿದ್ದ ಆರೋಪಿ ಧರ್ಮಸ್ಥಳ ಗ್ರಾಮದ ನಾರ್ಯ ನಿವಾಸಿ ಕೇಶವ ಪೂಜಾರಿ(43)ಗೆ ಮಂಗಳೂರು ಪೋಕ್ಸೋ ನ್ಯಾಯಾಲಯ ಆರೋಪ ಸಾಭಿತಾಗಿರುವುದಕ್ಕೆ 20 ವರ್ಷ ಶಿಕ್ಷೆ ಹಾಗೂ ದಂಡ ವಿಧಿಸಿ ಜ.28 ರಂದು ಶಿಕ್ಷೆ ಪ್ರಕಟ ಮಾಡಿದೆ.

ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ 11-11-2023 ರಂದು ಪೋಕ್ಸೋ ಪ್ರಕರಣ ದಾಖಲಾಗಿತ್ತು. ಜ.28 ರಂದು ಆರೋಪಿ ಕೇಶವ ಪೂಜಾರಿ ಎಂಬಾತನಿಗೆ u/s 6 pocso 376(2)(n). 376(3) ನಲ್ಲಿ 20 ವರ್ಷ ಕಾರಗೃಹ ಶಿಕ್ಷೆ 50 ಸಾವಿರ ರೂಪಾಯಿ ದಂಡ ತಪ್ಪಿದ್ದಲ್ಲಿ 4 ತಿಂಗಳ ಸಾದ ಕಾರಾಗೃಹ ಶಿಕ್ಷೆ ಹಾಗೂ u/s 506 ನಲ್ಲಿ 3 ತಿಂಗಳ ಅವಧಿ ಕಾರಾಗೃಹ ಶಿಕ್ಷೆ 5 ಸಾವಿರ ರೂಪಾಯಿ ದಂಡ ತಪ್ಪಿದ್ದಲ್ಲಿ 15 ದಿನ ಕಾರಾವಾಸ ವಿಧಿಸಿ ಮಂಗಳೂರು FT&SC-2 ನ್ಯಾಯಾಲಯದ ನ್ಯಾಯಾಧೀಶರಾದ ಮನು.ಕೆ.ಎಸ್ ಅವರು ತೀರ್ಪು ನೀಡಿದ್ದಾರೆ.

ಈ ಪ್ರಕರಣವನ್ನು ಬೆಳ್ತಂಗಡಿ ಸರ್ಕಲ್ ಇನ್ಸ್ಪೆಕ್ಟರ್ ನಾಗೇಶ್ ಕದ್ರಿ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷರೋಪಪಟ್ಟಿ ಸಲ್ಲಿಸಿದ್ದು.ಇವರಿಗೆ ಬೆಳ್ತಂಗಡಿ ಪೊಲೀಸರಾದ ವಿಜಯ ರೈ , ಸುನಿತಾ ,ಬೆನ್ನಿಚ್ಚನ್ , ಚರಣ್ ರಾಜ್, ಎ.ಎಸ್.ಐ ಕುಲಜ್ಯೋತಿ ತಿಲಕ್ ರಾಜ್, ಸುನಿತಾ ತನಿಖಾ ಸಹಾಯಕರಾಗಿದ್ದು. ನ್ಯಾಯಾಲಯದ ಪೂರಕ ಸಾಕ್ಷಿಗಳನ್ನು ಧರ್ಮಸ್ಥಳ ಕೋರ್ಟ್ ಪಿಸಿ ಮೆಹಬೂಬ್ ಪಾಟೀಲ್‌ ನೋಡಿಕೊಂಡಿದ್ದರು. ಸರಕಾರಿ ಅಭಿಯೋಜರಾಗಿ ಬದ್ರಿನಾಥ್ ನಾಯರಿ ಸಹಕರಿಸಿದರು.

Related posts

ಸುಲ್ಕೇರಿ ಗ್ರಾ. ಪಂ. ವ್ಯಾಪ್ತಿಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ತೀರಾ ಹದಗೆಟ್ಟ ಇಂದಬೆಟ್ಟು ಶ್ರೀ ಅರ್ಧನಾರೀಶ್ವರಿ ದೇವಸ್ಥಾನಕ್ಕೆ ಹೋಗುವ ರಸ್ತೆ: ಗ್ರಾ.ಪಂ. ಮಾಜಿಸದಸ್ಯ, ಸಾಮಾಜಿಕ ಹೋರಾಟಗಾರ ವೆಂಕಪ್ಪ ಕೊಟ್ಯಾನ್ ರಿಂದ ವಿಶಿಷ್ಟವಾಗಿ ಹೋರಾಟ: ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವ ಬ್ಯಾನರ್

Suddi Udaya

ನಿರಂತರ ಮಳೆ: ನಡ ಅಂತ್ರಾಯಪಲ್ಕೆಯ ಗುಡ್ಡ ಕುಸಿತ- ಶ್ಯಾಮ್‌ಸುಂದರ್‌ರ ಮನೆಯ ಕಂಪೌಂಡ್‌ಗೆ ಹಾನಿ

Suddi Udaya

ಮೇಲಂತಬೆಟ್ಟು: ಕೊಡಮಣಿತ್ತಾಯ ಮತ್ತು ಬ್ರಹ್ಮ ಬೈದರ್ಕಳ ವರ್ಷಾವಧಿ ಜಾತ್ರೆ

Suddi Udaya

ಮಡಂತ್ಯಾರು ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿಯ 35ನೇ ವರ್ಷದ ಮೊಸರು ಕುಡಿಕೆ ಉತ್ಸವದ ಗೌರವಾಧ್ಯಕ್ಷರಾಗಿ ಪದ್ಮನಾಭ ಸುವರ್ಣ ಬಳ್ಳಮಂಜ, ಅಧ್ಯಕ್ಷರಾಗಿ ಪ್ರಶಾಂತ್ ಎಂ. ಪಾರೆಂಕಿ ಆಯ್ಕೆ

Suddi Udaya

ಕುವೆಟ್ಟು ಸ.ಉ. ಪ್ರಾ. ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya
error: Content is protected !!