25.7 C
ಪುತ್ತೂರು, ಬೆಳ್ತಂಗಡಿ
April 22, 2025
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ: ಆರೋಪಿ ಕೇಶವ ಪೂಜಾರಿಗೆ ಶಿಕ್ಷೆ ಪ್ರಕಟ

ಬೆಳ್ತಂಗಡಿ : ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಬೆದರಿಕೆ ಹಾಕಿ ಅತ್ಯಾಚಾರ ಮಾಡಿ ಗರ್ಭಿಣಿಯಾಗಲು ಕಾರಣವಾಗಿದ್ದ ಆರೋಪಿ ಧರ್ಮಸ್ಥಳ ಗ್ರಾಮದ ನಾರ್ಯ ನಿವಾಸಿ ಕೇಶವ ಪೂಜಾರಿ(43)ಗೆ ಮಂಗಳೂರು ಪೋಕ್ಸೋ ನ್ಯಾಯಾಲಯ ಆರೋಪ ಸಾಭಿತಾಗಿರುವುದಕ್ಕೆ 20 ವರ್ಷ ಶಿಕ್ಷೆ ಹಾಗೂ ದಂಡ ವಿಧಿಸಿ ಜ.28 ರಂದು ಶಿಕ್ಷೆ ಪ್ರಕಟ ಮಾಡಿದೆ.

ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ 11-11-2023 ರಂದು ಪೋಕ್ಸೋ ಪ್ರಕರಣ ದಾಖಲಾಗಿತ್ತು. ಜ.28 ರಂದು ಆರೋಪಿ ಕೇಶವ ಪೂಜಾರಿ ಎಂಬಾತನಿಗೆ u/s 6 pocso 376(2)(n). 376(3) ನಲ್ಲಿ 20 ವರ್ಷ ಕಾರಗೃಹ ಶಿಕ್ಷೆ 50 ಸಾವಿರ ರೂಪಾಯಿ ದಂಡ ತಪ್ಪಿದ್ದಲ್ಲಿ 4 ತಿಂಗಳ ಸಾದ ಕಾರಾಗೃಹ ಶಿಕ್ಷೆ ಹಾಗೂ u/s 506 ನಲ್ಲಿ 3 ತಿಂಗಳ ಅವಧಿ ಕಾರಾಗೃಹ ಶಿಕ್ಷೆ 5 ಸಾವಿರ ರೂಪಾಯಿ ದಂಡ ತಪ್ಪಿದ್ದಲ್ಲಿ 15 ದಿನ ಕಾರಾವಾಸ ವಿಧಿಸಿ ಮಂಗಳೂರು FT&SC-2 ನ್ಯಾಯಾಲಯದ ನ್ಯಾಯಾಧೀಶರಾದ ಮನು.ಕೆ.ಎಸ್ ಅವರು ತೀರ್ಪು ನೀಡಿದ್ದಾರೆ.

ಈ ಪ್ರಕರಣವನ್ನು ಬೆಳ್ತಂಗಡಿ ಸರ್ಕಲ್ ಇನ್ಸ್ಪೆಕ್ಟರ್ ನಾಗೇಶ್ ಕದ್ರಿ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷರೋಪಪಟ್ಟಿ ಸಲ್ಲಿಸಿದ್ದು.ಇವರಿಗೆ ಬೆಳ್ತಂಗಡಿ ಪೊಲೀಸರಾದ ವಿಜಯ ರೈ , ಸುನಿತಾ ,ಬೆನ್ನಿಚ್ಚನ್ , ಚರಣ್ ರಾಜ್, ಎ.ಎಸ್.ಐ ಕುಲಜ್ಯೋತಿ ತಿಲಕ್ ರಾಜ್, ಸುನಿತಾ ತನಿಖಾ ಸಹಾಯಕರಾಗಿದ್ದು. ನ್ಯಾಯಾಲಯದ ಪೂರಕ ಸಾಕ್ಷಿಗಳನ್ನು ಧರ್ಮಸ್ಥಳ ಕೋರ್ಟ್ ಪಿಸಿ ಮೆಹಬೂಬ್ ಪಾಟೀಲ್‌ ನೋಡಿಕೊಂಡಿದ್ದರು. ಸರಕಾರಿ ಅಭಿಯೋಜರಾಗಿ ಬದ್ರಿನಾಥ್ ನಾಯರಿ ಸಹಕರಿಸಿದರು.

Related posts

ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವ್ರತಾರಂಭ

Suddi Udaya

ಬೆಳ್ತಂಗಡಿ: ಪಿಎಲ್‌ಡಿ ಬ್ಯಾಂಕ್ ಹಿರಿಯ ಲೆಕ್ಕಾಧಿಕಾರಿ ಆಶಾಲತಾ ಡಿ. ನಿವೃತ್ತಿ

Suddi Udaya

ಅಂಡಿಂಜೆ: ನವೋದಯ ವಿಶ್ವಬ್ರಾಹ್ಮಣ ಸಮಾಜ ಸೇವಾ ಸಂಘ ಇದರ 27 ನೇ ವರ್ಷದ ವಿಶ್ವಕರ್ಮ ಪೂಜೆ

Suddi Udaya

ಮೇಲಂತಬೆಟ್ಟು ಗ್ರಾಮದ ನಾಗ ಬ್ರಹ್ಮ ಬದಿನಡೆ ಬಳಿಯ ಮನೆ ಹಾನಿ ಹಾಗೂ ಭೂಕುಸಿತ ಪ್ರದೇಶ , ಸವಣಾಲು ಗ್ರಾಮದ ಪಿಲಿಕಲ ರಸ್ತೆ ಭೂಕುಸಿತವಾದ ಪ್ರದೇಶಕ್ಕೆ ಕೇಂದ್ರ ಸರಕಾರದ Ndrf ಮತ್ತು ಜಿಎಸ್ಐ ತಂಡ ಭೇಟಿ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪೋಷಕರಿಂದ ಗಿಡ ನೆಡುವ ಕಾರ್ಯಕ್ರಮ

Suddi Udaya

ಉಜಿರೆ ಕಾಲೇಜು ವಿದ್ಯಾರ್ಥಿ ವರ್ಷಿತ್ ಹೆಚ್.ಎಂ. ನಾಪತ್ತೆ

Suddi Udaya
error: Content is protected !!