July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ: ಆರೋಪಿ ಕೇಶವ ಪೂಜಾರಿಗೆ ಶಿಕ್ಷೆ ಪ್ರಕಟ

ಬೆಳ್ತಂಗಡಿ : ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಬೆದರಿಕೆ ಹಾಕಿ ಅತ್ಯಾಚಾರ ಮಾಡಿ ಗರ್ಭಿಣಿಯಾಗಲು ಕಾರಣವಾಗಿದ್ದ ಆರೋಪಿ ಧರ್ಮಸ್ಥಳ ಗ್ರಾಮದ ನಾರ್ಯ ನಿವಾಸಿ ಕೇಶವ ಪೂಜಾರಿ(43)ಗೆ ಮಂಗಳೂರು ಪೋಕ್ಸೋ ನ್ಯಾಯಾಲಯ ಆರೋಪ ಸಾಭಿತಾಗಿರುವುದಕ್ಕೆ 20 ವರ್ಷ ಶಿಕ್ಷೆ ಹಾಗೂ ದಂಡ ವಿಧಿಸಿ ಜ.28 ರಂದು ಶಿಕ್ಷೆ ಪ್ರಕಟ ಮಾಡಿದೆ.

ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ 11-11-2023 ರಂದು ಪೋಕ್ಸೋ ಪ್ರಕರಣ ದಾಖಲಾಗಿತ್ತು. ಜ.28 ರಂದು ಆರೋಪಿ ಕೇಶವ ಪೂಜಾರಿ ಎಂಬಾತನಿಗೆ u/s 6 pocso 376(2)(n). 376(3) ನಲ್ಲಿ 20 ವರ್ಷ ಕಾರಗೃಹ ಶಿಕ್ಷೆ 50 ಸಾವಿರ ರೂಪಾಯಿ ದಂಡ ತಪ್ಪಿದ್ದಲ್ಲಿ 4 ತಿಂಗಳ ಸಾದ ಕಾರಾಗೃಹ ಶಿಕ್ಷೆ ಹಾಗೂ u/s 506 ನಲ್ಲಿ 3 ತಿಂಗಳ ಅವಧಿ ಕಾರಾಗೃಹ ಶಿಕ್ಷೆ 5 ಸಾವಿರ ರೂಪಾಯಿ ದಂಡ ತಪ್ಪಿದ್ದಲ್ಲಿ 15 ದಿನ ಕಾರಾವಾಸ ವಿಧಿಸಿ ಮಂಗಳೂರು FT&SC-2 ನ್ಯಾಯಾಲಯದ ನ್ಯಾಯಾಧೀಶರಾದ ಮನು.ಕೆ.ಎಸ್ ಅವರು ತೀರ್ಪು ನೀಡಿದ್ದಾರೆ.

ಈ ಪ್ರಕರಣವನ್ನು ಬೆಳ್ತಂಗಡಿ ಸರ್ಕಲ್ ಇನ್ಸ್ಪೆಕ್ಟರ್ ನಾಗೇಶ್ ಕದ್ರಿ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷರೋಪಪಟ್ಟಿ ಸಲ್ಲಿಸಿದ್ದು.ಇವರಿಗೆ ಬೆಳ್ತಂಗಡಿ ಪೊಲೀಸರಾದ ವಿಜಯ ರೈ , ಸುನಿತಾ ,ಬೆನ್ನಿಚ್ಚನ್ , ಚರಣ್ ರಾಜ್, ಎ.ಎಸ್.ಐ ಕುಲಜ್ಯೋತಿ ತಿಲಕ್ ರಾಜ್, ಸುನಿತಾ ತನಿಖಾ ಸಹಾಯಕರಾಗಿದ್ದು. ನ್ಯಾಯಾಲಯದ ಪೂರಕ ಸಾಕ್ಷಿಗಳನ್ನು ಧರ್ಮಸ್ಥಳ ಕೋರ್ಟ್ ಪಿಸಿ ಮೆಹಬೂಬ್ ಪಾಟೀಲ್‌ ನೋಡಿಕೊಂಡಿದ್ದರು. ಸರಕಾರಿ ಅಭಿಯೋಜರಾಗಿ ಬದ್ರಿನಾಥ್ ನಾಯರಿ ಸಹಕರಿಸಿದರು.

Related posts

ಪುದುವೆಟ್ಟಿನಲ್ಲಿ ವಿಕಲಚೇತನರ ಸಮನ್ವಯ ಗ್ರಾಮಸಭೆ

Suddi Udaya

ಪದ್ಮುಂಜ: ರವಿಚಂದ್ರ ಶೆಟ್ಟಿರವರ ಗೃಹಪ್ರವೇಶದ ಕಾರ್ಯಕ್ರಮದಲ್ಲಿ ಮುಸ್ಲಿಂ ಬಾಂಧವರಿಗೆ ಇಫ್ತಾರ್ ಕೂಟ

Suddi Udaya

ಬೆಳ್ತಂಗಡಿ: ಜೀವ ವೈವಿಧ್ಯ ನಿರ್ವಹಣಾ ಸಮಿತಿಗಳ ತರಬೇತಿ

Suddi Udaya

ಮಚ್ಚಿನ ಹಾಲು ಉತ್ಪಾದಕರ ಸಹಕಾರಿ ಸಂಘದ ಮಹಾಸಭೆ: ರೂ.4.83 ಲಕ್ಷ ಲಾಭ, ಸದಸ್ಯರಿಗೆ ಶೇ. 14 ಡಿವಿಡೆಂಟ್

Suddi Udaya

ಗೇರುಕಟ್ಟೆ: ಕಬಕದ ಇನೋವ ಕಾರು ಡಿಕ್ಕಿ: ಜೀವ ಉಳಿಸಿದ ಮಣ್ಣಿನ ದಿಣ್ಣೆ

Suddi Udaya

ಕೊಯ್ಯೂರು : ಮಲೆಕುಡಿಯರ ಸಂಘ ದ.ಕ. ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ನೂತನ ಭಜನಾ ಮಂದಿರ ನಿರ್ಮಾಣದ ಸಮಿತಿ ರಚನೆ

Suddi Udaya
error: Content is protected !!