September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ: ಆರೋಪಿ ಕೇಶವ ಪೂಜಾರಿಗೆ ಶಿಕ್ಷೆ ಪ್ರಕಟ

ಬೆಳ್ತಂಗಡಿ : ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಬೆದರಿಕೆ ಹಾಕಿ ಅತ್ಯಾಚಾರ ಮಾಡಿ ಗರ್ಭಿಣಿಯಾಗಲು ಕಾರಣವಾಗಿದ್ದ ಆರೋಪಿ ಧರ್ಮಸ್ಥಳ ಗ್ರಾಮದ ನಾರ್ಯ ನಿವಾಸಿ ಕೇಶವ ಪೂಜಾರಿ(43)ಗೆ ಮಂಗಳೂರು ಪೋಕ್ಸೋ ನ್ಯಾಯಾಲಯ ಆರೋಪ ಸಾಭಿತಾಗಿರುವುದಕ್ಕೆ 20 ವರ್ಷ ಶಿಕ್ಷೆ ಹಾಗೂ ದಂಡ ವಿಧಿಸಿ ಜ.28 ರಂದು ಶಿಕ್ಷೆ ಪ್ರಕಟ ಮಾಡಿದೆ.

ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ 11-11-2023 ರಂದು ಪೋಕ್ಸೋ ಪ್ರಕರಣ ದಾಖಲಾಗಿತ್ತು. ಜ.28 ರಂದು ಆರೋಪಿ ಕೇಶವ ಪೂಜಾರಿ ಎಂಬಾತನಿಗೆ u/s 6 pocso 376(2)(n). 376(3) ನಲ್ಲಿ 20 ವರ್ಷ ಕಾರಗೃಹ ಶಿಕ್ಷೆ 50 ಸಾವಿರ ರೂಪಾಯಿ ದಂಡ ತಪ್ಪಿದ್ದಲ್ಲಿ 4 ತಿಂಗಳ ಸಾದ ಕಾರಾಗೃಹ ಶಿಕ್ಷೆ ಹಾಗೂ u/s 506 ನಲ್ಲಿ 3 ತಿಂಗಳ ಅವಧಿ ಕಾರಾಗೃಹ ಶಿಕ್ಷೆ 5 ಸಾವಿರ ರೂಪಾಯಿ ದಂಡ ತಪ್ಪಿದ್ದಲ್ಲಿ 15 ದಿನ ಕಾರಾವಾಸ ವಿಧಿಸಿ ಮಂಗಳೂರು FT&SC-2 ನ್ಯಾಯಾಲಯದ ನ್ಯಾಯಾಧೀಶರಾದ ಮನು.ಕೆ.ಎಸ್ ಅವರು ತೀರ್ಪು ನೀಡಿದ್ದಾರೆ.

ಈ ಪ್ರಕರಣವನ್ನು ಬೆಳ್ತಂಗಡಿ ಸರ್ಕಲ್ ಇನ್ಸ್ಪೆಕ್ಟರ್ ನಾಗೇಶ್ ಕದ್ರಿ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷರೋಪಪಟ್ಟಿ ಸಲ್ಲಿಸಿದ್ದು.ಇವರಿಗೆ ಬೆಳ್ತಂಗಡಿ ಪೊಲೀಸರಾದ ವಿಜಯ ರೈ , ಸುನಿತಾ ,ಬೆನ್ನಿಚ್ಚನ್ , ಚರಣ್ ರಾಜ್, ಎ.ಎಸ್.ಐ ಕುಲಜ್ಯೋತಿ ತಿಲಕ್ ರಾಜ್, ಸುನಿತಾ ತನಿಖಾ ಸಹಾಯಕರಾಗಿದ್ದು. ನ್ಯಾಯಾಲಯದ ಪೂರಕ ಸಾಕ್ಷಿಗಳನ್ನು ಧರ್ಮಸ್ಥಳ ಕೋರ್ಟ್ ಪಿಸಿ ಮೆಹಬೂಬ್ ಪಾಟೀಲ್‌ ನೋಡಿಕೊಂಡಿದ್ದರು. ಸರಕಾರಿ ಅಭಿಯೋಜರಾಗಿ ಬದ್ರಿನಾಥ್ ನಾಯರಿ ಸಹಕರಿಸಿದರು.

Related posts

ಉಜಿರೆ ಎಸ್ ಡಿ ಎಂ ಕಾಲೇಜಿನಲ್ಲಿ ನಡೆದ ರಾಜ್ಯಮಟ್ಟದ ಮ್ಯಾನೇಜ್ ಮೆಂಟ್ ಫೆಸ್ಟ್ ನಲ್ಲಿ ಗುರುದೇವ ಕಾಲೇಜಿಗೆ ಪ್ರಶಸ್ತಿ

Suddi Udaya

ಎಸ್.ಡಿ.ಎಂ ಸೆಕೆಂಡರಿ ಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಾಚರಣೆ: ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

Suddi Udaya

ಕೊಕ್ಕಡ: ಇತ್ತೀಚೆಗೆ ನಿಧನರಾದ ಅಜಯ್ ರವರ ಮನೆಗೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

Suddi Udaya

ಉಜಿರೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ‘ಸಿರಿಧಾನ್ಯದಿಂದ ಆರೋಗ್ಯ ಸಿರಿ ‘ ಸಿರಿಧಾನ್ಯ ಜಾಗೃತಿ

Suddi Udaya

ಸವಣಾಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪೋಷಕರ ಸಭೆ – ಶಾಲಾ ಅಭಿವೃದ್ಧಿ ಸಮಿತಿ ರಚನೆ

Suddi Udaya

ಕೊಕ್ಕಡ ಅಮೃತ ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya
error: Content is protected !!