April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಳದಂಗಡಿಯಲ್ಲಿ ಲೋಕೋಪಯೋಗಿ ಇಲಾಖೆಯವರು ಅಳವಡಿಸಿದ ನಾಮಫಲಕದಲ್ಲಿ ಗೊಂದಲ

ಬೆಳ್ತಂಗಡಿ: ಸ್ಥಳೀಯ ಸ್ಥಳಗಳ ಸರಿಯಾದ ಮಾಹಿತಿ ಇಲ್ಲದಿದ್ದರೆ ಏನೆಲ್ಲಾ ಯಡವಟ್ಟುಗಳು ಆಗುತ್ತವೆ ಎಂಬುದಕ್ಕೆ ಲೋಕೋಪಯೋಗಿ ಇಲಾಖೆಯವರು ಅಳದಂಗಡಿಯಲ್ಲಿ ಹಾಕಿರುವ ನಾಮಫಲಕವೇ ಸಾಕ್ಷಿ.


ಇಲಾಖೆಯು ಗುರುವಾಯನಕೆರೆ- ನಾರಾವಿ- ಕಾರ್ಕಳ ರಾಜ್ಯಹೆದ್ದಾರಿಯಲ್ಲಿ ಅಲ್ಲಲ್ಲಿ ಊರುಗಳ ಹೆಸರಿರುವ ನಾಮಫಲಕಗಳನ್ನು ಅಳವಡಿಸಿದೆ. ಇವುಗಳಲ್ಲಿ ಅಳದಂಗಡಿಯಲ್ಲಿ ದೈವಸ್ಥಾನದ ಪಕ್ಕದಲ್ಲಿ ಹಾಕಿರುವ ಫಲಕದಲ್ಲಿ ದೈವದ ಹೆಸರು ಅಪಭ್ರಂಶಗೊಂಡಿದೆ. ಶ್ರೀಸತ್ಯದೇವತೆ ದೈವಸ್ಥಾನ ಅಳದಂಗಡಿ ಎಂದು ಬರೆಯುವ ಬದಲು ” ಸತ್ಯದೇವಾತ ದೇವಸ್ಥಾನ ಅಳದಂಗದಿ ” ಎಂದು ಬರೆಯಲಾಗಿದೆ. ಸತ್ಯದೇವತೆ ಇರುವಲ್ಲಿ ಸತ್ಯದೇವಾತ; ದೈವಸ್ಥಾನ ಇರಬೇಕಾದಲ್ಲಿ ದೇವಸ್ಥಾನ; ಅಳದಂಗಡಿಯ ಬದಲಾಗಿ ಅಳದಂಗದಿ ಆಗಿದೆ.


ಫಲಕ ಹೀಗೇಯೇ ಕೆಲಕಾಲ ಇದ್ದರೆ ಅದರಲ್ಲಿ ಇರುವ ಹೆಸರೇ ಚಾಲ್ತಿಯಲ್ಲಿ ಬಂದರೆ ಅಚ್ಚರಿಯಿಲ್ಲ. ಇನ್ನಾದರೂ ಇಲಾಖೆಯವರು ಸರಿಯಾದ ಫಲಕ ಅಳವಡಿಸುವರೇ ಕಾದು ನೋಡಬೇಕಾಗಿದೆ.

Related posts

ರಾಜ್ಯಮಟ್ಟದ ಕರಾಟೆ ಸ್ಪರ್ಧೆ: ಬಳ್ಳಮಂಜ ಶ್ರೀ ವಿದ್ಯಾಸಾಗರ ಸಿಬಿಎಸ್ ಇ ಶಾಲೆಯ ವಿದ್ಯಾರ್ಥಿಗಳಿಗೆ ಚಾಂಪಿಯನ್ ಶಿಪ್

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಪ್ರಚಾರ ಸಮಿತಿಯ ಉಸ್ತುವಾರಿಯಾಗಿ ಶೇಖರ್ ಕುಕ್ಕೇಡಿ ಆಯ್ಕೆ

Suddi Udaya

ಹಳೆಪೇಟೆ ಪ್ರೌಢಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂಘ ಉದ್ಘಾಟನೆ

Suddi Udaya

ಜ.13: ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಕಡಿರುದ್ಯಾವರ ಶಾಖೆಯ ನೂತನ ಗೋದಾಮು, ಬ್ಯಾಂಕಿಂಗ್ ಕಛೇರಿ ಹಾಗೂ ಸಭಾಭವನ ಉದ್ಘಾಟನೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ವಿವಿಧ ಕಾಮಗಾರಿಗೆ ಶಿಲಾನ್ಯಾಸ ಹಾಗೂ ಕಲಿಕಾ ಆಟಿಕೆಗಳ ಹಸ್ತಾಂತರ ಕಾರ್ಯಕ್ರಮ

Suddi Udaya

ಎಸ್‌ಡಿಎಂ ಕಾಲೇಜಿನಲ್ಲಿ ರಾಷ್ಟ್ರೀಯ ವಿಚಾರ ಸಂಕಿರಣ ಉದ್ಭಾಟನೆ

Suddi Udaya
error: Content is protected !!