22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಳದಂಗಡಿಯಲ್ಲಿ ಲೋಕೋಪಯೋಗಿ ಇಲಾಖೆಯವರು ಅಳವಡಿಸಿದ ನಾಮಫಲಕದಲ್ಲಿ ಗೊಂದಲ

ಬೆಳ್ತಂಗಡಿ: ಸ್ಥಳೀಯ ಸ್ಥಳಗಳ ಸರಿಯಾದ ಮಾಹಿತಿ ಇಲ್ಲದಿದ್ದರೆ ಏನೆಲ್ಲಾ ಯಡವಟ್ಟುಗಳು ಆಗುತ್ತವೆ ಎಂಬುದಕ್ಕೆ ಲೋಕೋಪಯೋಗಿ ಇಲಾಖೆಯವರು ಅಳದಂಗಡಿಯಲ್ಲಿ ಹಾಕಿರುವ ನಾಮಫಲಕವೇ ಸಾಕ್ಷಿ.


ಇಲಾಖೆಯು ಗುರುವಾಯನಕೆರೆ- ನಾರಾವಿ- ಕಾರ್ಕಳ ರಾಜ್ಯಹೆದ್ದಾರಿಯಲ್ಲಿ ಅಲ್ಲಲ್ಲಿ ಊರುಗಳ ಹೆಸರಿರುವ ನಾಮಫಲಕಗಳನ್ನು ಅಳವಡಿಸಿದೆ. ಇವುಗಳಲ್ಲಿ ಅಳದಂಗಡಿಯಲ್ಲಿ ದೈವಸ್ಥಾನದ ಪಕ್ಕದಲ್ಲಿ ಹಾಕಿರುವ ಫಲಕದಲ್ಲಿ ದೈವದ ಹೆಸರು ಅಪಭ್ರಂಶಗೊಂಡಿದೆ. ಶ್ರೀಸತ್ಯದೇವತೆ ದೈವಸ್ಥಾನ ಅಳದಂಗಡಿ ಎಂದು ಬರೆಯುವ ಬದಲು ” ಸತ್ಯದೇವಾತ ದೇವಸ್ಥಾನ ಅಳದಂಗದಿ ” ಎಂದು ಬರೆಯಲಾಗಿದೆ. ಸತ್ಯದೇವತೆ ಇರುವಲ್ಲಿ ಸತ್ಯದೇವಾತ; ದೈವಸ್ಥಾನ ಇರಬೇಕಾದಲ್ಲಿ ದೇವಸ್ಥಾನ; ಅಳದಂಗಡಿಯ ಬದಲಾಗಿ ಅಳದಂಗದಿ ಆಗಿದೆ.


ಫಲಕ ಹೀಗೇಯೇ ಕೆಲಕಾಲ ಇದ್ದರೆ ಅದರಲ್ಲಿ ಇರುವ ಹೆಸರೇ ಚಾಲ್ತಿಯಲ್ಲಿ ಬಂದರೆ ಅಚ್ಚರಿಯಿಲ್ಲ. ಇನ್ನಾದರೂ ಇಲಾಖೆಯವರು ಸರಿಯಾದ ಫಲಕ ಅಳವಡಿಸುವರೇ ಕಾದು ನೋಡಬೇಕಾಗಿದೆ.

Related posts

ಕೊಯ್ಯೂರು ಸ.ಪ.ಪೂ. ಕಾಲೇಜಿನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಉಡುಪಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿಜೀಯವರನ್ನು ಸ್ವಾಗತಿಸಿದ ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಉಮೇಶ್ ಕುಲಾಲ್

Suddi Udaya

ಕಳೆಂಜ: ಕಾಯರ್ತಡ್ಕ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಮಳೆಗಾಗಿ ಸಾಮೂಹಿಕ ಪ್ರಾರ್ಥನೆ

Suddi Udaya

ಮಚ್ಚಿನ ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಉಜಿರೆ: ಕೋಲ್ಪಾಡಿ ಸ.ಕಿ.ಪ್ರಾ. ಶಾಲೆಯಲ್ಲಿ ಪೌಷ್ಟಿಕ ಆಹಾರದ ಕುರಿತು ಪ್ರಾತ್ಯಕ್ಷಿಕೆ

Suddi Udaya

ಜೂನ್ 30 ರಂದು ತ್ರೈಮಾಸಿಕ ಜಿಲ್ಲಾ ಕೆ. ಡಿ.ಪಿ. ಸಭೆ

Suddi Udaya
error: Content is protected !!