July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಇಂದಬೆಟ್ಟಿನಲ್ಲಿ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಶಿಬಿರ

ಇಂದಬೆಟ್ಟು: ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಶಿಬಿರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಶಿಬಿರವನ್ನು ಇಂದಬೆಟ್ಟಿನ ಸಂತ ಫ್ರಾನ್ಸಿಸ್ ಕ್ಲೇವಿಯರ್ ಚರ್ಚ್ ಸಭಾಂಗಣದಲ್ಲಿ ತಾಲೂಕು ಸಮಿತಿಯ ಅಧ್ಯಕ್ಷ ಬಿ ಪದ್ಮನಾಭ ಸಾಲ್ಯಾನ್ ಉದ್ಘಾಟಿಸಿದರು.

ಇಂದಬೆಟ್ಟು ಗ್ರಾಮ ಪಂಚಾಯತಿಯ ಅಧ್ಯಕ್ಷರಾದ ಶ್ರೀಮತಿ ಆಶಾಲತರವರು ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದರು. ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಗ್ಯಾರಂಟಿ ಯೋಜನೆಗಳ ತಾಲೂಕು ಮಟ್ಟದ ಸದಸ್ಯ ಕಾರ್ಯದರ್ಶಿಯಾದ ಭವಾನಿಶಂಕರ್ ರವರು ಪ್ರಾಸ್ತವಿಕವಾಗಿ ಮಾತನಾಡಿ ಯೋಜನೆಯ ಉದ್ದೇಶ ಹಾಗೂ ಯೋಜನೆಯ ಮಾಹಿತಿಯನ್ನು ವಿವರಿಸಿದರು.

ಇಂದಬೆಟ್ಟು ಸಂತ ಫ್ರಾನ್ಸಿಸ್ ಕ್ಸೇವಿಯರ್ ಚರ್ಚ್ ನ ಧರ್ಮಗುರುಗಳಾದ ಫಾ| ಸ್ಟ್ಯಾನಿ ಮೊಂತೇರೋ ಶುಭಾಸಂಶನೆ ನೀಡಿದರು.

ಜಿಲ್ಲಾ ಅನುಷ್ಠಾನ ಸಮಿತಿಯ ಉಪಾಧ್ಯಕ್ಷರಾದ ಶೇಖರ್ ಕುಕ್ಕೇಡಿ, ತಾಲೂಕು ಗ್ರಾರಂಟಿ ಯೋಜನೆಗಳ ಅನುಷ್ಟಾನ ಸಮಿತಿಯ ಸದಸ್ಯರಾದ ಶ್ರೀಮತಿ ವಂದನಾ ಕುಮಾರಿ, ಕೆ ನೇಮಿರಾಜ್ ಕಿಲ್ಲೂರು, ಹಕೀಂ ಕೊಕ್ಕಡ, ಶ್ರೀಮತಿ ಸೌಮ್ಯ, ವೀರಪ್ಪ ಮೊಯ್ಲಿ, ವಾಸುದೇವ್ ರಾವ್, ಸತೀಶ್ ಹೆಗ್ಡೆ, ಅಬ್ದುಲ್ ಸಲಾಂ, ಶ್ರೀಮತಿ ಮೆರಿಟಾ ಪಿಂಟೋ, ಶ್ರೀಪತಿ ಉಪಾಧ್ಯಾಯ, ಕೇಶವ ನಾಯ್ಕ, ಶರೀಫ್, ಮಲವಂತಿಗೆ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಪ್ರಕಾಶ್ ಜೈನ್, ನಡ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಮಂಜುಳ, ನಾವೂರು ಗ್ರಾಮ ಪಂಚಾಯತಿ ಅಧ್ಯಕ್ಷರಾದ ಶ್ರೀಮತಿ ಸುನಂದ ಸಿಡಿಪಿಒ ಶ್ರೀಮತಿ ಪ್ರಿಯಾ ಆಗ್ನೇಸ್, ಮೆಸ್ಕಾಂ ಎಇಇ, ಕ್ಲೆಮೆಂಟ್ ಬೆಂಜಮಿನ್ ಬ್ರಾಗ್ಸ್, ಜಿಲ್ಲಾ ಉದ್ಯೋಗ ವಿನಿಮಯ ಕಛೇರಿಯ ಅರುಣ್ ಕುಮಾರ್, ಆಹಾರ ಇಲಾಖೆಯ ಶಿರಸ್ತೆದಾರ್ ವಿಶ್ವ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಇಂದಬೆಟ್ಟು ಗ್ರಾಮ ಪಂಚಾಯತಿಯ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ರಶ್ಮಿ ಸ್ವಾಗತಿಸಿ, ನಾವೂರು ಗ್ರಾಮ ಪಂಚಾಯತಿಯ ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಿರ್ಮಲ್ ಕುಮಾರ್ ಧನ್ಯವಾದ ಸಲ್ಲಿಸಿದರು. ಮಿತ್ತಬಾಗಿಲು ಗ್ರಾಮ ಪಂಚಾಯತಿಯ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮೋಹನ್ ಬಂಗೇರ ಕಾರ್ಯಕ್ರಮ ನಿರೂಪಿಸಿದರು.

Related posts

ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ರಾಜ್ಯ ಉಪಾಧ್ಯಕ್ಷರಾಗಿ ಜೋಯಲ್ ಮೆಂಡೋನ್ಸ ಆಯ್ಕೆ

Suddi Udaya

ಉಜಿರೆ: ಡೈನಮಿಕ್ ಡ್ಯಾನ್ಸ್ ಫ್ಯಾಕ್ಟರಿ & ಕಾಸ್ಟ್ಯೂಮ್ ಕಾರ್ನರ್ ಶುಭಾರಂಭ

Suddi Udaya

ಇತಿಹಾಸ ಪ್ರಸಿದ್ದ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯಿ ದೈವಸ್ಥಾನದಲ್ಲಿ ಫೆಬ್ರವರಿ ತಿಂಗಳಲ್ಲಿ ಬ್ರಹ್ಮಕುಂಭಾಭಿಷೇಕ: ಅಧ್ಯಕ್ಷರಾಗಿ ಬರೋಡ ಉದ್ಯಮಿ ಶಶಿಧರ್ ಶೆಟ್ಟಿ ನವಶಕ್ತಿ ಗುರುವಾಯನಕೆರೆ, ಕಾರ್ಯಾಧ್ಯಕ್ಷರಾಗಿ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಆಯ್ಕೆ

Suddi Udaya

ಕರಂಬಾರು: ಕಾಜಿಮುಗೇರು ಗೇರು ತೋಟಕ್ಕೆ ಬೆಂಕಿ

Suddi Udaya

ಮಚ್ಚಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಪ್ರತಿಭಾ ಸಂಭ್ರಮ

Suddi Udaya

ರಾಜ್ಯ ಮಟ್ಟದ ಸ್ಕೌಟ್ಸ್‌ & ಗೈಡ್ಸ್‌ ಜಾಂಬೋರೇಟ್‌ ಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಅಕ್ಕಿ ಕೊಡುಗೆ

Suddi Udaya
error: Content is protected !!