April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿತುಳು ನಾಡು-ನುಡಿ-ಸಂಸ್ಕೃತಿ ಒರಿಪಾವುನ ಬುಳೆಪಾವುನ ಮಾರ್ಗೋಪಾಯೊಲು” ರಾಷ್ಟ್ರೀಯ ವಿಚಾರ ಸಂಕಿರಣ

ಉಜಿರೆ :ಮಂಗಳೂರು ವಿಶ್ವವಿದ್ಯಾನಿಲಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತುಳು ಪೀಠ ತುಳು ಸ್ನಾತಕೋತ್ತರ ಅಧ್ಯಯನ ವಿಭಾಗ ವಿ. ವಿ. ಕಾಲೇಜು, ಮಂಗಳೂರು ಶ್ರೀ ಸಂಸ್ಥಾನ ಒಡಿಯೂರು ತುಳು ಅಧ್ಯಯನ ಕೇಂದ್ರ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು (ಸ್ವಾಯತ್ತ), ಉಜಿರೆ ಡಾ. ಹಾಮಾನಾ ಸಂಶೋಧನ ಕೇಂದ್ರ, ಕನ್ನಡ ವಿಭಾಗ, ತುಳು ಸಂಘ ಸಹಯೋಗದೊಂದಿಗೆ “ತುಳು ನಾಡು-ನುಡಿ-ಸಂಸ್ಕೃತಿ ಒರಿಪಾವುನ ಬುಳೆಪಾವುನ ಮಾರ್ಗೋಪಾಯೊಲು” ರಾಷ್ಟ್ರೀಯ ವಿಚಾರ ಸಂಕಿರಣವು ಜ.28 ರಂದು ಉಜಿರೆ ಶ್ರೀ ಧ. ಮಂ. ಸ್ವಾಯತ್ತ ಮಹಾವಿದ್ಯಾಲಯ ಸಮ್ಯಗ್ದರ್ಶನ ಸೆಮಿನಾರ್ ಹಾಲ್ ನಲ್ಲಿ ಜರುಗಿತು.

ಕಾರ್ಯಕ್ರಮವನ್ನು ಉಜಿರೆ ಶ್ರೀ ಧ. ಮಂ. ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್. ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿ ತುಳುನಾಡಿನ ಮುಖ್ಯ ಕಸುಬು ಕೃಷಿ.ತುಳುನಾಡಿನ ಸಂಸ್ಕೃತಿ ,ಆಚಾರ- ವಿಚಾರ, ಜೀವನ‌ಕ್ರಮ,ಭಾಷೆ, ವೇಷ ಭೂಷಣ, ಕ್ರೀಡೆಯನ್ನು ಮುಂದಿನ ಯುವ ಸಮಾಜಕ್ಕೆ ತಿಳಿಸುವ ಕೆಲಸವಾಗಬೇಕು ಎಂದರು.

ಅಧ್ಯಕ್ಷತೆಯನ್ನು ಉಜಿರೆ ಶ್ರೀ ಧ. ಮಂ. ಸ್ವಾಯತ್ತ ಮಹಾವಿದ್ಯಾಲಯ, ಪ್ರಾಂಶುಪಾಲರು ಡಾ. ಬಿ. ಎ. ಕುಮಾರ ಹೆಗ್ಡೆ ವಹಿಸಿದ್ದರು. ಮಂಗಳೂರು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ನಿಕಟಪೂರ್ವ ಅಧ್ಯಕ್ಷ ದಯಾನಂದ ಕತ್ತಲ್ ‍ಸಾರ್ ದಿಕ್ಸೂಚಿ ಭಾಷಣಗೈದರು.

ಮುಖ್ಯಅತಿಥಿಗಳಾಗಿ ಮಂಗಳೂರು ವಿ. ವಿ. ಶ್ರೀ ಧ. ಮಂ. ತುಳು ಪೀಠ ಸಲಹಾ ಸಮಿತಿ ಸದಸ್ಯರಾದ ಪ್ರವೀಣ್‌ ಕುಮಾರ್ ಇಂದ್ರ , ಶ್ರೀಮತಿ ರಾಜಶ್ರೀ ಎಸ್. ಹೆಗ್ಡೆ, ಮಂಗಳೂರು ವಿ. ವಿ. ಶ್ರೀ ಧ.ಮಂ. ತುಳು ಪೀಠ ಸಂಯೋಜಕ ಡಾ. ಮಾಧವ ಎಂ. ಕೆ. ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಕನ್ನಡ ವಿಭಾಗದ ಮುಖ್ಯಸ್ಥೆ ಡಾ. ಬೋಜಮ್ಮ ಕೆ. ಎನ್, ತುಳು ಸಂಘ ಮುಖ್ಯಸ್ಥ ಡಾ. ಸನ್ಮತಿ ಕುಮಾರ್, ಮಂಗಳೂರು ವಿಶ್ವವಿದ್ಯಾನಿಲಯ ಕುಲಸಚಿವ ಕೆ. ರಾಜು ಮೊಗವೀರ ಕೆ.ಎ.ಎಸ್ , ಹಂಪನಕಟ್ಟೆ ವಿ. ವಿ. ಕಾಲೇಜು ಪ್ರಾಂಶುಪಾಲರು ಡಾ. ಗಣಪತಿ ಗೌಡ, ಮಂಗಳೂರು ವಿಶ್ವವಿದ್ಯಾನಿಲಯ ಕಾರ್ಯಕ್ರಮದ ಸಂಯೋಜಕರಾದ ಶ್ರೀಮತಿ ಜಯಲಕ್ಷ್ಮಿ ಆರ್. ಶೆಟ್ಟಿ, ಪ್ರಸಾದ್ ಅಂಚನ್ ಉಪಸ್ಥಿತರಿದ್ದರು.

ಉಜಿರೆ ಶ್ರೀ ಧ.ಮಂ. ಸ್ವಾಯತ್ತ ಕಾಲೇಜಿನ ವಿದ್ಯಾರ್ಥಿಗಳು ಪ್ರಾರ್ಥಿಸಿ, ಶ್ರೀ ಧ.ಮಂ. ಸ್ವಾಯತ್ತ ಮಹಾವಿದ್ಯಾಲಯ ತುಳು ಸಂಘದ ಅಧ್ಯಕ್ಷೆ ಡಾ. ಸನ್ಮತಿ ಕುಮಾ‌ರ್ ಸ್ವಾಗತಿಸಿದರು. ತುಳು ಉಪನ್ಯಾಸಕಿ ಶ್ರೀಮತಿ ಮಣಿ ಎಂ. ರೈ ಸಹಕರಿಸಿದರು. ಶ್ರೀಮತಿ ಭವ್ಯಶ್ರೀ ಬಲ್ಲಾಳ್ ಮತ್ತು ಉಜಿರೆ ಧ.ಮಂ. ಕಾಲೇಜಿನ ಪ್ರಾಧ್ಯಾಪಕ ದಿವ ಕೊಕ್ಕಡ ಕಾರ್ಯಕ್ರಮ ನಿರೂಪಿಸಿದರು.

Related posts

ರಾಷ್ಟ್ರೀಯ ಮಟ್ಟದ ಭಾರ ಎತ್ತುವಿಕೆ ಸ್ಪರ್ಧೆಯಲ್ಲಿ ಭಾಗವಹಿಸಲು ಹಿಮಾಚಲ ಪ್ರದೇಶಕ್ಕೆ ತೆರಳಲಿರುವ ಬಂದಾರು ಕೆ ತೇಜಸ್ವಿನಿ ಪೂಜಾರಿ ರವರಿಗೆ ಬೆಳ್ತಂಗಡಿ ಶ್ರೀ ನಾರಾಯಣಗುರು ಸ್ವಾಮಿ ಸೇವಾ ಸಂಘದ ವತಿಯಿಂದ ಆರ್ಥಿಕ ನೆರವು

Suddi Udaya

ಆ 31: ಬೆಳ್ತಂಗಡಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 169ನೇ ಗುರುಜಯಂತಿ: ಸಮಾಜದ ಸಾಧಕರಿಗೆ ಸನ್ಮಾನ, ವಿದ್ಯಾರ್ಥಿಗಳ ದತ್ತು ಸ್ವೀಕಾರ ಮತ್ತು ವಿದ್ಯಾರ್ಥಿ ವೇತನ ವಿತರಣೆ

Suddi Udaya

ಕನ್ಯಾಡಿ ಶ್ರೀ ರಾಮ ಕ್ಷೇತ್ರದಲ್ಲಿ 64ನೇ ವರ್ಷದ ಶ್ರೀರಾಮ ನಾಮ ಸಪ್ತಾಹದ ಉದ್ಘಾಟನೆ:

Suddi Udaya

ಕ.ಸಾ.ಪ ಸಮ್ಮೇಳನ: ಸರ್ವಾಧ್ಯಕ್ಷ ಪ್ರೊ.ಎ ಕೃಷ್ಣಪ್ಪ ಪೂಜಾರಿ ಅವರಿಗೆ ಅಧಿಕೃತ ಆಮಂತ್ರಣ

Suddi Udaya

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯಲ್ಲಿ ಮಲೆಕುಡಿಯರಿಗೆ ಅವಕಾಶ ನೀಡದೆ ಇದ್ದಲ್ಲಿ ಕ್ಷೇತ್ರದಲ್ಲಿ ಚಾಕರಿ ಕೆಲಸ ಮತ್ತು ರಥ ಕಟ್ಟುವ ಕೆಲಸವನ್ನು ನಿಲ್ಲಿಸ ಬೇಕಾದೀತು: ಜಿಲ್ಲಾ ಮಲೆಕುಡಿಯ ಸಂಘ

Suddi Udaya

ಎನ್.ಎಮ್.ಎಮ್.ಎಸ್ ಪರೀಕ್ಷೆ: ಪದ್ಮುಂಜ ಸರಕಾರಿ ಪ್ರೌಢಶಾಲೆ ವಿದ್ಯಾರ್ಥಿನಿ ಜಶ್ಮಿತಾ ರಾಜ್ಯ ಮಟ್ಟದ ವಿದ್ಯಾರ್ಥಿ ವೇತನಕ್ಕೆ ಆಯ್ಕೆ

Suddi Udaya
error: Content is protected !!