September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಚಾರ್ಮಾಡಿ ಘಾಟಿಯಲ್ಲಿ ಪದೇ ಪದೇ ಸಂಭವಿಸುತ್ತಿರುವ ಕಾಳ್ಗಿಚ್ಚು ತಡೆಯಲು ಕೊನೆಗೂ ಅರಣ್ಯ ಇಲಾಖೆಯಿಂದ ಸಿಬ್ಬಂದಿ ನಿಯೋಜನೆ

ಚಾರ್ಮಾಡಿ ಘಾಟಿಯಲ್ಲಿ ಪದೇ ಪದೇ ಸಂಭವಿಸುತ್ತಿರುವ ಕಾಳ್ಗಿಚ್ಚು ತಡೆಯಲು ಅರಣ್ಯ ಇಲಾಖೆಯು ಕೊನೆಗೂ ಸಿಬ್ಬಂದಿಯನ್ನು ನಿಯೋಜನೆ ಮಾಡಿದೆ.

ಕೊಟ್ಟಿಗೆಹಾರ ಅರಣ್ಯ ಇಲಾಖೆಯಲ್ಲಿ ಬೆಂಕಿ ವೀಕ್ಷಕರು ಇದ್ದಾರೆ. ಚಾರ್ಮಾಡಿ ಘಾಟಿಯಲ್ಲಿ ರಸ್ತೆ ಬದಿ ಕಿಡಿಗೇಡುಗಳು ಹಚ್ಚುವ ಬೆಂಕಿಯಿಂದ ಉಂಟಾಗುತ್ತಿರುವ ಕಾಳ್ಗಿಚ್ಚು ತಡೆಯಲು ಸಾಧ್ಯವಾಗುತ್ತಿಲ್ಲ.

ಬಿದರತಳ ಬಳಿ ಅರಣ್ಯದಲ್ಲಿ ಬೆಂಕಿ ಹರಡಿತ್ತು. ಅದಾದ ಒಂದೇ ವಾರದ ನಂತರ ಘಾಟಿಯಲ್ಲಿ ಅಣ್ಣಪ್ಪಸ್ವಾಮಿ ದೇಗುಲದ ಸಮೀಪ ಮತ್ತೆ ಕಾಳ್ಗಿಚ್ಚು ಕಾಣಿಸಿಕೊಂಡು ನೂರಾರು ಎಕರೆ ಹುಲ್ಲುಗಾವಲು ಅಗ್ನಿಗೆ ಆಹುತಿಯಾಯಿತು.

ಇದನ್ನು ತಪ್ಪಿಸಲು ಈಗ ಅರಣ್ಯ ಇಲಾಖೆಯಿಂದ ಆನೆ ಕಾರ್ಯಪಡೆ ಸಿಬ್ಬಂದಿಯನ್ನು ತಾತ್ಕಾಲಿಕವಾಗಿ ನಿಯೋಜನೆ ಮಾಡಿದೆ. ರಸ್ತೆ ಬದಿಯಲ್ಲಿ ಕಿಡಿಗೇಡಿಗಳು ಬೆಂಕಿ ಹಚ್ಚುವುದನ್ನು ತಡೆಯಲು, ರಸ್ತೆಯಲ್ಲಿ ವಾಹನ ನಿಲ್ಲಿಸಿದವರ ಮೇಲೆ ನಿಗಾ ಇಡುವ ಕೆಲಸವನ್ನು ಈ ಸಿಬ್ಬಂದಿ ಮಾಡಲಿದ್ದಾರೆ.

Related posts

ಅಗ್ರಿಲೀಫ್ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್ ಇದರ ವಿಸ್ತ್ರತ ಘಟಕ “ಅಗ್ರಿಲೀಫ್ 2.0” ಉದ್ಘಾಟನೆ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ “ಆಟಿಡೊಂಜಿ ದಿನ” ಸ್ನೇಹಭೋಜನ ಕೂಟ

Suddi Udaya

ಎ.12: ಬೆಳ್ತಂಗಡಿಯಲ್ಲಿ ಬೃಹತ್ ಸ್ವಚ್ಛತಾ ಆಂದೋಲನ

Suddi Udaya

ಪಟ್ರಮೆಯ ಕೂಟೇಲು – ಸಂಕೇಶ – ಮಣಿಯೇರು ಪಂಚಾಯತ್ ರಸ್ತೆಯ ಕಿರು ಸೇತುವೆ ಕುಸಿತ

Suddi Udaya

ಪುಂಜಾಲಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜು ವತಿಯಿಂದ ವಾರ್ಷಿಕ ವಿಶೇಷ ಶಿಬಿರ

Suddi Udaya

ವೇಣೂರು ದೇವಾಡಿಗರ ಸೇವಾ ವೇದಿಕೆಯ ವತಿಯಿಂದ ಸಾಧಕರಿಗೆ ಸನ್ಮಾನ , ಅಭಿನಂದನೆ, ಪ್ರತಿಭಾ ಪುರಸ್ಕಾರ ಹಾಗೂ ಖಾಯಂ ವಿದ್ಯಾರ್ಥಿ ವೇತನ ವಿತರಣೆ

Suddi Udaya
error: Content is protected !!