September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ: ಆರೋಪಿ ಕೇಶವ ಪೂಜಾರಿಗೆ ಶಿಕ್ಷೆ ಪ್ರಕಟ

ಬೆಳ್ತಂಗಡಿ : ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಬೆದರಿಕೆ ಹಾಕಿ ಅತ್ಯಾಚಾರ ಮಾಡಿ ಗರ್ಭಿಣಿಯಾಗಲು ಕಾರಣವಾಗಿದ್ದ ಆರೋಪಿ ಧರ್ಮಸ್ಥಳ ಗ್ರಾಮದ ನಾರ್ಯ ನಿವಾಸಿ ಕೇಶವ ಪೂಜಾರಿ(43)ಗೆ ಮಂಗಳೂರು ಪೋಕ್ಸೋ ನ್ಯಾಯಾಲಯ ಆರೋಪ ಸಾಭಿತಾಗಿರುವುದಕ್ಕೆ 20 ವರ್ಷ ಶಿಕ್ಷೆ ಹಾಗೂ ದಂಡ ವಿಧಿಸಿ ಜ.28 ರಂದು ಶಿಕ್ಷೆ ಪ್ರಕಟ ಮಾಡಿದೆ.

ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ 11-11-2023 ರಂದು ಪೋಕ್ಸೋ ಪ್ರಕರಣ ದಾಖಲಾಗಿತ್ತು. ಜ.28 ರಂದು ಆರೋಪಿ ಕೇಶವ ಪೂಜಾರಿ ಎಂಬಾತನಿಗೆ u/s 6 pocso 376(2)(n). 376(3) ನಲ್ಲಿ 20 ವರ್ಷ ಕಾರಗೃಹ ಶಿಕ್ಷೆ 50 ಸಾವಿರ ರೂಪಾಯಿ ದಂಡ ತಪ್ಪಿದ್ದಲ್ಲಿ 4 ತಿಂಗಳ ಸಾದ ಕಾರಾಗೃಹ ಶಿಕ್ಷೆ ಹಾಗೂ u/s 506 ನಲ್ಲಿ 3 ತಿಂಗಳ ಅವಧಿ ಕಾರಾಗೃಹ ಶಿಕ್ಷೆ 5 ಸಾವಿರ ರೂಪಾಯಿ ದಂಡ ತಪ್ಪಿದ್ದಲ್ಲಿ 15 ದಿನ ಕಾರಾವಾಸ ವಿಧಿಸಿ ಮಂಗಳೂರು FT&SC-2 ನ್ಯಾಯಾಲಯದ ನ್ಯಾಯಾಧೀಶರಾದ ಮನು.ಕೆ.ಎಸ್ ಅವರು ತೀರ್ಪು ನೀಡಿದ್ದಾರೆ.

ಈ ಪ್ರಕರಣವನ್ನು ಬೆಳ್ತಂಗಡಿ ಸರ್ಕಲ್ ಇನ್ಸ್ಪೆಕ್ಟರ್ ನಾಗೇಶ್ ಕದ್ರಿ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷರೋಪಪಟ್ಟಿ ಸಲ್ಲಿಸಿದ್ದು.ಇವರಿಗೆ ಬೆಳ್ತಂಗಡಿ ಪೊಲೀಸರಾದ ವಿಜಯ ರೈ , ಸುನಿತಾ ,ಬೆನ್ನಿಚ್ಚನ್ , ಚರಣ್ ರಾಜ್, ಎ.ಎಸ್.ಐ ಕುಲಜ್ಯೋತಿ ತಿಲಕ್ ರಾಜ್, ಸುನಿತಾ ತನಿಖಾ ಸಹಾಯಕರಾಗಿದ್ದು. ನ್ಯಾಯಾಲಯದ ಪೂರಕ ಸಾಕ್ಷಿಗಳನ್ನು ಧರ್ಮಸ್ಥಳ ಕೋರ್ಟ್ ಪಿಸಿ ಮೆಹಬೂಬ್ ಪಾಟೀಲ್‌ ನೋಡಿಕೊಂಡಿದ್ದರು. ಸರಕಾರಿ ಅಭಿಯೋಜರಾಗಿ ಬದ್ರಿನಾಥ್ ನಾಯರಿ ಸಹಕರಿಸಿದರು.

Related posts

ಶ್ರೀ ನಾಳ ದುರ್ಗಾಪರಮೇಶ್ವರಿ ದೇವಸ್ಥಾನದ ಹಾಲಿ ವ್ಯವಸ್ಥಪನಾ ಸಮಿತಿ ರದ್ದು ಹಿನ್ನಲೆ; ಹೊಸ ಹಣಕಾಸಿನ ವ್ಯವಹಾರ ನಡೆಸದಂತೆ ನ್ಯಾಯಾಲಯ ಆದೇಶ

Suddi Udaya

ಸವಣಾಲು : ಫಲ್ಗುಣಿ ಮಹಿಳಾ ಮಂಡಲದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದಿಂದ ಡಾ| ಡಿ ವೀರೇಂದ್ರ ಹೆಗ್ಗಡೆ ಅವರ ಪಟ್ಟಾಭಿಷೇಕದ ವರ್ಧಂತ್ಯುತ್ಸವ ಪ್ರಯುಕ್ತ ಗೌರವಾರ್ಪಣೆ

Suddi Udaya

ಕನ್ಯಾಡಿ ಸೇವಾನಿಕೇತನಕ್ಕೆ ಭೋರುಕಾ ಪವರ್ ಕಾರ್ಪೊರೇಷನ್ ಲಿಮಿಟೆಡ್‌ನ ಭೇಟಿ

Suddi Udaya

ನೆಲ್ಯಾಡಿ ಸೆಂಟ್ ಅಲ್ಫೋನ್ಸ ಎಸ್‌ಎಂವೈಎಂ ವತಿಯಿಂದ ಪಂಚಾಯತ್‌ಗೆ ಡಸ್ಟ್‌ಬಿನ್ ವಿತರಣೆ

Suddi Udaya

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಹೊರಾಂಗಣಕ್ಕೆ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿಯಿಂದ ರೂ.9 ಲಕ್ಷ ವೆಚ್ಚದಲ್ಲಿ ಹಾಸುಕಲ್ಲು ಸಮರ್ಪಣೆ

Suddi Udaya
error: Content is protected !!