22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ: ಆರೋಪಿ ಕೇಶವ ಪೂಜಾರಿಗೆ ಶಿಕ್ಷೆ ಪ್ರಕಟ

ಬೆಳ್ತಂಗಡಿ : ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಬೆದರಿಕೆ ಹಾಕಿ ಅತ್ಯಾಚಾರ ಮಾಡಿ ಗರ್ಭಿಣಿಯಾಗಲು ಕಾರಣವಾಗಿದ್ದ ಆರೋಪಿ ಧರ್ಮಸ್ಥಳ ಗ್ರಾಮದ ನಾರ್ಯ ನಿವಾಸಿ ಕೇಶವ ಪೂಜಾರಿ(43)ಗೆ ಮಂಗಳೂರು ಪೋಕ್ಸೋ ನ್ಯಾಯಾಲಯ ಆರೋಪ ಸಾಭಿತಾಗಿರುವುದಕ್ಕೆ 20 ವರ್ಷ ಶಿಕ್ಷೆ ಹಾಗೂ ದಂಡ ವಿಧಿಸಿ ಜ.28 ರಂದು ಶಿಕ್ಷೆ ಪ್ರಕಟ ಮಾಡಿದೆ.

ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ 11-11-2023 ರಂದು ಪೋಕ್ಸೋ ಪ್ರಕರಣ ದಾಖಲಾಗಿತ್ತು. ಜ.28 ರಂದು ಆರೋಪಿ ಕೇಶವ ಪೂಜಾರಿ ಎಂಬಾತನಿಗೆ u/s 6 pocso 376(2)(n). 376(3) ನಲ್ಲಿ 20 ವರ್ಷ ಕಾರಗೃಹ ಶಿಕ್ಷೆ 50 ಸಾವಿರ ರೂಪಾಯಿ ದಂಡ ತಪ್ಪಿದ್ದಲ್ಲಿ 4 ತಿಂಗಳ ಸಾದ ಕಾರಾಗೃಹ ಶಿಕ್ಷೆ ಹಾಗೂ u/s 506 ನಲ್ಲಿ 3 ತಿಂಗಳ ಅವಧಿ ಕಾರಾಗೃಹ ಶಿಕ್ಷೆ 5 ಸಾವಿರ ರೂಪಾಯಿ ದಂಡ ತಪ್ಪಿದ್ದಲ್ಲಿ 15 ದಿನ ಕಾರಾವಾಸ ವಿಧಿಸಿ ಮಂಗಳೂರು FT&SC-2 ನ್ಯಾಯಾಲಯದ ನ್ಯಾಯಾಧೀಶರಾದ ಮನು.ಕೆ.ಎಸ್ ಅವರು ತೀರ್ಪು ನೀಡಿದ್ದಾರೆ.

ಈ ಪ್ರಕರಣವನ್ನು ಬೆಳ್ತಂಗಡಿ ಸರ್ಕಲ್ ಇನ್ಸ್ಪೆಕ್ಟರ್ ನಾಗೇಶ್ ಕದ್ರಿ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷರೋಪಪಟ್ಟಿ ಸಲ್ಲಿಸಿದ್ದು.ಇವರಿಗೆ ಬೆಳ್ತಂಗಡಿ ಪೊಲೀಸರಾದ ವಿಜಯ ರೈ , ಸುನಿತಾ ,ಬೆನ್ನಿಚ್ಚನ್ , ಚರಣ್ ರಾಜ್, ಎ.ಎಸ್.ಐ ಕುಲಜ್ಯೋತಿ ತಿಲಕ್ ರಾಜ್, ಸುನಿತಾ ತನಿಖಾ ಸಹಾಯಕರಾಗಿದ್ದು. ನ್ಯಾಯಾಲಯದ ಪೂರಕ ಸಾಕ್ಷಿಗಳನ್ನು ಧರ್ಮಸ್ಥಳ ಕೋರ್ಟ್ ಪಿಸಿ ಮೆಹಬೂಬ್ ಪಾಟೀಲ್‌ ನೋಡಿಕೊಂಡಿದ್ದರು. ಸರಕಾರಿ ಅಭಿಯೋಜರಾಗಿ ಬದ್ರಿನಾಥ್ ನಾಯರಿ ಸಹಕರಿಸಿದರು.

Related posts

ರೆಖ್ಯ ಶಾಲಾ ಪ್ರಾರಂಭೋತ್ಸವ

Suddi Udaya

ಗುರಿಪಳ್ಳ ಅಂಬಡಬೆಟ್ಟು ತಾತ್ಕಾಲಿಕ ಸೇತುವೆ ಪುನರ್ ನಿರ್ಮಿಸಿ ಜನರ ಕಷ್ಟಕ್ಕೆ ಸ್ಪಂದಿಸಿದ ಪ್ರವೀಣ್ ಫೆರ್ನಾಂಡೀಸ್ ಹಳ್ಳಿಮನೆ

Suddi Udaya

ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವದ ಪಡೆದ ಸಂಸದ ಕೋಟ ಶ್ರೀನಿವಾಸ್ ಪೂಜಾರಿ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ವತಿಯಿಂದ ಜನಮಂಗಳ ಕಾರ್ಯಕ್ರಮದಡಿಯಲ್ಲಿ ವೀಲ್ ಚೇರ್ ವಿತರಣೆ

Suddi Udaya

ಉಜಿರೆ: ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಹಾಗೂ ಉಚಿತ ವೈದ್ಯಕೀಯ ತಪಾಸಣಾ ಶಿಬಿರ

Suddi Udaya

ಚುನಾವಣಾ ಕಾರ್ಯಕ್ಕೆ 18 ವರ್ಷದೊಳಗಿನ ಮಕ್ಕಳ ಬಳಕೆ ನಿಷೇಧ

Suddi Udaya
error: Content is protected !!