23.5 C
ಪುತ್ತೂರು, ಬೆಳ್ತಂಗಡಿ
June 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಳದಂಗಡಿಯಲ್ಲಿ ಲೋಕೋಪಯೋಗಿ ಇಲಾಖೆಯವರು ಅಳವಡಿಸಿದ ನಾಮಫಲಕದಲ್ಲಿ ಗೊಂದಲ

ಬೆಳ್ತಂಗಡಿ: ಸ್ಥಳೀಯ ಸ್ಥಳಗಳ ಸರಿಯಾದ ಮಾಹಿತಿ ಇಲ್ಲದಿದ್ದರೆ ಏನೆಲ್ಲಾ ಯಡವಟ್ಟುಗಳು ಆಗುತ್ತವೆ ಎಂಬುದಕ್ಕೆ ಲೋಕೋಪಯೋಗಿ ಇಲಾಖೆಯವರು ಅಳದಂಗಡಿಯಲ್ಲಿ ಹಾಕಿರುವ ನಾಮಫಲಕವೇ ಸಾಕ್ಷಿ.


ಇಲಾಖೆಯು ಗುರುವಾಯನಕೆರೆ- ನಾರಾವಿ- ಕಾರ್ಕಳ ರಾಜ್ಯಹೆದ್ದಾರಿಯಲ್ಲಿ ಅಲ್ಲಲ್ಲಿ ಊರುಗಳ ಹೆಸರಿರುವ ನಾಮಫಲಕಗಳನ್ನು ಅಳವಡಿಸಿದೆ. ಇವುಗಳಲ್ಲಿ ಅಳದಂಗಡಿಯಲ್ಲಿ ದೈವಸ್ಥಾನದ ಪಕ್ಕದಲ್ಲಿ ಹಾಕಿರುವ ಫಲಕದಲ್ಲಿ ದೈವದ ಹೆಸರು ಅಪಭ್ರಂಶಗೊಂಡಿದೆ. ಶ್ರೀಸತ್ಯದೇವತೆ ದೈವಸ್ಥಾನ ಅಳದಂಗಡಿ ಎಂದು ಬರೆಯುವ ಬದಲು ” ಸತ್ಯದೇವಾತ ದೇವಸ್ಥಾನ ಅಳದಂಗದಿ ” ಎಂದು ಬರೆಯಲಾಗಿದೆ. ಸತ್ಯದೇವತೆ ಇರುವಲ್ಲಿ ಸತ್ಯದೇವಾತ; ದೈವಸ್ಥಾನ ಇರಬೇಕಾದಲ್ಲಿ ದೇವಸ್ಥಾನ; ಅಳದಂಗಡಿಯ ಬದಲಾಗಿ ಅಳದಂಗದಿ ಆಗಿದೆ.


ಫಲಕ ಹೀಗೇಯೇ ಕೆಲಕಾಲ ಇದ್ದರೆ ಅದರಲ್ಲಿ ಇರುವ ಹೆಸರೇ ಚಾಲ್ತಿಯಲ್ಲಿ ಬಂದರೆ ಅಚ್ಚರಿಯಿಲ್ಲ. ಇನ್ನಾದರೂ ಇಲಾಖೆಯವರು ಸರಿಯಾದ ಫಲಕ ಅಳವಡಿಸುವರೇ ಕಾದು ನೋಡಬೇಕಾಗಿದೆ.

Related posts

ಮರೋಡಿ-ಪೆರಾಡಿ ಗ್ರಾಮಗಳಲ್ಲಿ ಮಹಾಮಳೆಗೆ ಅನಾಹುತ, ಅಗತ್ಯ ಕ್ರಮ ಕೈಗೊಂಡ ಪಂಚಾಯತ್ ಆಡಳಿತ

Suddi Udaya

ಕಲಬುರಗಿ ಬಿಜೆಪಿ ಬೃಹತ್‌ ಸಮಾವೇಶದಲ್ಲಿ ಶಾಸಕ ಹರೀಶ್ ಪೂಂಜರಿಂದ ಮತಯಾಚನೆ

Suddi Udaya

ಪೆರ್ಲ ಬೈಪಾಡಿ ಸರಕಾರಿ ಪ್ರೌಢಶಾಲಾ ಪ್ರಾರಂಭೋತ್ಸವ

Suddi Udaya

ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: 12 ಕ್ಷೇತ್ರಗಳಲ್ಲೂ ಬಿಜೆಪಿ ಬೆಂಬಲಿತರ ಜಯಭೇರಿ

Suddi Udaya

ಬೆಳ್ತಂಗಡಿಯಲ್ಲಿ ಸಂವಿಧಾನ ಜಾಗೃತಿ ಜಾಥದ ಅಂಗವಾಗಿ ಬೈಕ್ ರ್ಯಾಲಿ

Suddi Udaya

ಆ.18: ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ಕೆಸರು ಕಂಡೊಡು ಗೌಡೆರೆ ಗೌಜಿ-ಗಮ್ಮತ್ ಹಾಗೂ ಮಾಜಿ ಸೈನಿಕರಿಗೆ ಸನ್ಮಾನ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!