30 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಳದಂಗಡಿಯಲ್ಲಿ ಲೋಕೋಪಯೋಗಿ ಇಲಾಖೆಯವರು ಅಳವಡಿಸಿದ ನಾಮಫಲಕದಲ್ಲಿ ಗೊಂದಲ

ಬೆಳ್ತಂಗಡಿ: ಸ್ಥಳೀಯ ಸ್ಥಳಗಳ ಸರಿಯಾದ ಮಾಹಿತಿ ಇಲ್ಲದಿದ್ದರೆ ಏನೆಲ್ಲಾ ಯಡವಟ್ಟುಗಳು ಆಗುತ್ತವೆ ಎಂಬುದಕ್ಕೆ ಲೋಕೋಪಯೋಗಿ ಇಲಾಖೆಯವರು ಅಳದಂಗಡಿಯಲ್ಲಿ ಹಾಕಿರುವ ನಾಮಫಲಕವೇ ಸಾಕ್ಷಿ.


ಇಲಾಖೆಯು ಗುರುವಾಯನಕೆರೆ- ನಾರಾವಿ- ಕಾರ್ಕಳ ರಾಜ್ಯಹೆದ್ದಾರಿಯಲ್ಲಿ ಅಲ್ಲಲ್ಲಿ ಊರುಗಳ ಹೆಸರಿರುವ ನಾಮಫಲಕಗಳನ್ನು ಅಳವಡಿಸಿದೆ. ಇವುಗಳಲ್ಲಿ ಅಳದಂಗಡಿಯಲ್ಲಿ ದೈವಸ್ಥಾನದ ಪಕ್ಕದಲ್ಲಿ ಹಾಕಿರುವ ಫಲಕದಲ್ಲಿ ದೈವದ ಹೆಸರು ಅಪಭ್ರಂಶಗೊಂಡಿದೆ. ಶ್ರೀಸತ್ಯದೇವತೆ ದೈವಸ್ಥಾನ ಅಳದಂಗಡಿ ಎಂದು ಬರೆಯುವ ಬದಲು ” ಸತ್ಯದೇವಾತ ದೇವಸ್ಥಾನ ಅಳದಂಗದಿ ” ಎಂದು ಬರೆಯಲಾಗಿದೆ. ಸತ್ಯದೇವತೆ ಇರುವಲ್ಲಿ ಸತ್ಯದೇವಾತ; ದೈವಸ್ಥಾನ ಇರಬೇಕಾದಲ್ಲಿ ದೇವಸ್ಥಾನ; ಅಳದಂಗಡಿಯ ಬದಲಾಗಿ ಅಳದಂಗದಿ ಆಗಿದೆ.


ಫಲಕ ಹೀಗೇಯೇ ಕೆಲಕಾಲ ಇದ್ದರೆ ಅದರಲ್ಲಿ ಇರುವ ಹೆಸರೇ ಚಾಲ್ತಿಯಲ್ಲಿ ಬಂದರೆ ಅಚ್ಚರಿಯಿಲ್ಲ. ಇನ್ನಾದರೂ ಇಲಾಖೆಯವರು ಸರಿಯಾದ ಫಲಕ ಅಳವಡಿಸುವರೇ ಕಾದು ನೋಡಬೇಕಾಗಿದೆ.

Related posts

ತಾಲೂಕು ಗ್ಯಾರಂಟಿ ಯೋಜನಾ ಸಮಿತಿಯ ಸದಸ್ಯರಾಗಿ ಯತೀಶ್ ಧರ್ಮಸ್ಥಳ ಆಯ್ಕೆ

Suddi Udaya

ಲಾಯಿಲ: ಪುತ್ರಬೈಲಿ‌ನಲ್ಲಿ ಸರಕಾರದ ಕುಡಿಯುವ ನೀರಿನ ಬಾವಿ ಕಲುಷಿತಗೊಳಿಸಿ ಜಾಗ ಒತ್ತುವರಿ

Suddi Udaya

ರಕ್ತೇಶ್ವರಿಪದವು ಸ.ಕಿ.ಪ್ರಾ. ಶಾಲೆಯಲ್ಲಿ ಶಾರದಾ ಪೂಜೆ

Suddi Udaya

ಸಿಪಿಐಎಂ ಪಕ್ಷದ ಸಕ್ರಿಯ ಸದಸ್ಯ ಪದ್ಮುಂಜ ನಿವಾಸಿ ಅಣ್ಣು ಸಿ. ನಿಧನ

Suddi Udaya

ಕುತ್ಲೂರು ಶಾಲೆಗೆ ರಾಜ್ಯ ಮಟ್ಟದ ಕೃಷಿ ರೈತ ರತ್ನ ಪ್ರಶಸ್ತಿ

Suddi Udaya

ರೆಖ್ಯ: ಉರ್ನಡ್ಕ ನಿವಾಸಿ ಲೋಕೇಶ್ ನಾಪತ್ತೆ

Suddi Udaya
error: Content is protected !!