23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಳದಂಗಡಿಯಲ್ಲಿ ಲೋಕೋಪಯೋಗಿ ಇಲಾಖೆಯವರು ಅಳವಡಿಸಿದ ನಾಮಫಲಕದಲ್ಲಿ ಗೊಂದಲ

ಬೆಳ್ತಂಗಡಿ: ಸ್ಥಳೀಯ ಸ್ಥಳಗಳ ಸರಿಯಾದ ಮಾಹಿತಿ ಇಲ್ಲದಿದ್ದರೆ ಏನೆಲ್ಲಾ ಯಡವಟ್ಟುಗಳು ಆಗುತ್ತವೆ ಎಂಬುದಕ್ಕೆ ಲೋಕೋಪಯೋಗಿ ಇಲಾಖೆಯವರು ಅಳದಂಗಡಿಯಲ್ಲಿ ಹಾಕಿರುವ ನಾಮಫಲಕವೇ ಸಾಕ್ಷಿ.


ಇಲಾಖೆಯು ಗುರುವಾಯನಕೆರೆ- ನಾರಾವಿ- ಕಾರ್ಕಳ ರಾಜ್ಯಹೆದ್ದಾರಿಯಲ್ಲಿ ಅಲ್ಲಲ್ಲಿ ಊರುಗಳ ಹೆಸರಿರುವ ನಾಮಫಲಕಗಳನ್ನು ಅಳವಡಿಸಿದೆ. ಇವುಗಳಲ್ಲಿ ಅಳದಂಗಡಿಯಲ್ಲಿ ದೈವಸ್ಥಾನದ ಪಕ್ಕದಲ್ಲಿ ಹಾಕಿರುವ ಫಲಕದಲ್ಲಿ ದೈವದ ಹೆಸರು ಅಪಭ್ರಂಶಗೊಂಡಿದೆ. ಶ್ರೀಸತ್ಯದೇವತೆ ದೈವಸ್ಥಾನ ಅಳದಂಗಡಿ ಎಂದು ಬರೆಯುವ ಬದಲು ” ಸತ್ಯದೇವಾತ ದೇವಸ್ಥಾನ ಅಳದಂಗದಿ ” ಎಂದು ಬರೆಯಲಾಗಿದೆ. ಸತ್ಯದೇವತೆ ಇರುವಲ್ಲಿ ಸತ್ಯದೇವಾತ; ದೈವಸ್ಥಾನ ಇರಬೇಕಾದಲ್ಲಿ ದೇವಸ್ಥಾನ; ಅಳದಂಗಡಿಯ ಬದಲಾಗಿ ಅಳದಂಗದಿ ಆಗಿದೆ.


ಫಲಕ ಹೀಗೇಯೇ ಕೆಲಕಾಲ ಇದ್ದರೆ ಅದರಲ್ಲಿ ಇರುವ ಹೆಸರೇ ಚಾಲ್ತಿಯಲ್ಲಿ ಬಂದರೆ ಅಚ್ಚರಿಯಿಲ್ಲ. ಇನ್ನಾದರೂ ಇಲಾಖೆಯವರು ಸರಿಯಾದ ಫಲಕ ಅಳವಡಿಸುವರೇ ಕಾದು ನೋಡಬೇಕಾಗಿದೆ.

Related posts

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಬೆಂಗಳೂರಿನ ಖ್ಯಾತ ಎಸ್.ವ್ಯಾಸ ಸಂಸ್ಥಾನದ ಉಪಕುಲಪತಿ ಭೇಟಿ

Suddi Udaya

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ನಿಡ್ಲೆ ಸಹಕಾರಿ ಸಂಘದ ಅಧ್ಯಕ್ಷ ಕೆ. ರಮೇಶ್ ರಾವ್ ಬೆಂಬಲ

Suddi Udaya

ಉಜಿರೆ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಬಾಲಕೃಷ್ಣ ಗೌಡ , ಉಪಾಧ್ಯಕ್ಷರಾಗಿ ಶ್ರೀಧರ ಪೂಜಾರಿ

Suddi Udaya

ಹುಣ್ಸೆಕಟ್ಟೆ ಶ್ರೀ ರಾಮ ಭಜನಾ ಮಂಡಳಿ ವತಿಯಿಂದ ವಿಜಯರತ್ನ ಪ್ರಶಸ್ತಿ ಪುರಸ್ಕೃತ ಸುಮಂತ್ ಕುಮಾರ್ ಜೈನ್ ರವರಿಗೆ ಅಭಿನಂದನೆ

Suddi Udaya

ಬೆಳ್ತಂಗಡಿ: ಜಿಲ್ಲಾ ಸಹಕಾರಿ ಯೂನಿಯನ್ ನಿರ್ದೇಶಕರಾಗಿ ಸತೀಶ್ ಕಾಶಿಪಟ್ಣ, ಪ್ರವೀಣ್ ಗಿಲ್ಬರ್ಟ್ ಪಿಂಟೋ ಆಯ್ಕೆ

Suddi Udaya

ಡಾ.ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್

Suddi Udaya
error: Content is protected !!