23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಳದಂಗಡಿಯಲ್ಲಿ ಲೋಕೋಪಯೋಗಿ ಇಲಾಖೆಯವರು ಅಳವಡಿಸಿದ ನಾಮಫಲಕದಲ್ಲಿ ಗೊಂದಲ

ಬೆಳ್ತಂಗಡಿ: ಸ್ಥಳೀಯ ಸ್ಥಳಗಳ ಸರಿಯಾದ ಮಾಹಿತಿ ಇಲ್ಲದಿದ್ದರೆ ಏನೆಲ್ಲಾ ಯಡವಟ್ಟುಗಳು ಆಗುತ್ತವೆ ಎಂಬುದಕ್ಕೆ ಲೋಕೋಪಯೋಗಿ ಇಲಾಖೆಯವರು ಅಳದಂಗಡಿಯಲ್ಲಿ ಹಾಕಿರುವ ನಾಮಫಲಕವೇ ಸಾಕ್ಷಿ.


ಇಲಾಖೆಯು ಗುರುವಾಯನಕೆರೆ- ನಾರಾವಿ- ಕಾರ್ಕಳ ರಾಜ್ಯಹೆದ್ದಾರಿಯಲ್ಲಿ ಅಲ್ಲಲ್ಲಿ ಊರುಗಳ ಹೆಸರಿರುವ ನಾಮಫಲಕಗಳನ್ನು ಅಳವಡಿಸಿದೆ. ಇವುಗಳಲ್ಲಿ ಅಳದಂಗಡಿಯಲ್ಲಿ ದೈವಸ್ಥಾನದ ಪಕ್ಕದಲ್ಲಿ ಹಾಕಿರುವ ಫಲಕದಲ್ಲಿ ದೈವದ ಹೆಸರು ಅಪಭ್ರಂಶಗೊಂಡಿದೆ. ಶ್ರೀಸತ್ಯದೇವತೆ ದೈವಸ್ಥಾನ ಅಳದಂಗಡಿ ಎಂದು ಬರೆಯುವ ಬದಲು ” ಸತ್ಯದೇವಾತ ದೇವಸ್ಥಾನ ಅಳದಂಗದಿ ” ಎಂದು ಬರೆಯಲಾಗಿದೆ. ಸತ್ಯದೇವತೆ ಇರುವಲ್ಲಿ ಸತ್ಯದೇವಾತ; ದೈವಸ್ಥಾನ ಇರಬೇಕಾದಲ್ಲಿ ದೇವಸ್ಥಾನ; ಅಳದಂಗಡಿಯ ಬದಲಾಗಿ ಅಳದಂಗದಿ ಆಗಿದೆ.


ಫಲಕ ಹೀಗೇಯೇ ಕೆಲಕಾಲ ಇದ್ದರೆ ಅದರಲ್ಲಿ ಇರುವ ಹೆಸರೇ ಚಾಲ್ತಿಯಲ್ಲಿ ಬಂದರೆ ಅಚ್ಚರಿಯಿಲ್ಲ. ಇನ್ನಾದರೂ ಇಲಾಖೆಯವರು ಸರಿಯಾದ ಫಲಕ ಅಳವಡಿಸುವರೇ ಕಾದು ನೋಡಬೇಕಾಗಿದೆ.

Related posts

ಜಮೀಯತುಲ್ ಫಲಾಹ್ ಬೆಳ್ತಂಗಡಿ ಘಟಕದ ಪದಗ್ರಹಣ ಸಮಾರಂಭ

Suddi Udaya

ಇಂದಿನಿಂದ ದ.ಕ ಜಿಲ್ಲೆಯಲ್ಲಿ ವಿಧಾನಸಭೆ ಚುನಾವಣೆಗೆ ನಾಮಪತ್ರಗಳ ಸ್ವೀಕಾರ ಆರಂಭ: ಜಿಲ್ಲಾಧಿಕಾರಿ

Suddi Udaya

ಧರ್ಮಸ್ಥಳ ಗ್ರಾ.ಪಂ. ನಲ್ಲಿ ಜಿಲ್ಲಾಮಟ್ಟದ ಸಮಾಲೋಚನೆ ಸಭೆ

Suddi Udaya

ನಿರಂತರ ನೆಟ್‌ವರ್ಕ್ ಸಮಸ್ಯೆಯಿಂದ ಪರದಾಡುತ್ತಿರುವ ಗ್ರಾಮಸ್ಥರು, ಏರ್‌ಟೆಲ್ ವಿರುದ್ಧ ತೆಂಕಕಾರಂದೂರು ಗ್ರಾಮಸ್ಥರ ಪ್ರತಿಭಟನೆ

Suddi Udaya

ಹಿಂದೂ ಕಮಿಟಿ ಹಾರ್ಝಿಲಿಯ ಇಸ್ರೇಲ್ ಸಂಘಟನೆಯಿಂದ ವೈದ್ಯಕೀಯ ನೆರವು ಹಸ್ತಾಂತರ-ಅಶಕ್ತ ಕುಟುಂಬಕ್ಕೆ ಆರ್ಥಿಕ ಸಹಕಾರ

Suddi Udaya

ಗುರುವಾಯನಕೆರೆ ಕೆರೆ ಬಳಿ ಸೃಷ್ಟಿಯಾದ ಇನ್ನೊಂದು ಕೆರೆ, ರಾಜ್ಯ ಹೆದ್ದಾರಿಯಲ್ಲಿ ಮರಣ ಗುಂಡಿಗಳು, ವಾಹನ ಚಾಲಕರಿಗೆ ಹಾಗೂ ಪಾದಚಾರಿಗಳಿಗೆ ತೀವ್ರ ಸಂಕಷ್ಟ,

Suddi Udaya
error: Content is protected !!