22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಳದಂಗಡಿಯಲ್ಲಿ ಲೋಕೋಪಯೋಗಿ ಇಲಾಖೆಯವರು ಅಳವಡಿಸಿದ ನಾಮಫಲಕದಲ್ಲಿ ಗೊಂದಲ

ಬೆಳ್ತಂಗಡಿ: ಸ್ಥಳೀಯ ಸ್ಥಳಗಳ ಸರಿಯಾದ ಮಾಹಿತಿ ಇಲ್ಲದಿದ್ದರೆ ಏನೆಲ್ಲಾ ಯಡವಟ್ಟುಗಳು ಆಗುತ್ತವೆ ಎಂಬುದಕ್ಕೆ ಲೋಕೋಪಯೋಗಿ ಇಲಾಖೆಯವರು ಅಳದಂಗಡಿಯಲ್ಲಿ ಹಾಕಿರುವ ನಾಮಫಲಕವೇ ಸಾಕ್ಷಿ.


ಇಲಾಖೆಯು ಗುರುವಾಯನಕೆರೆ- ನಾರಾವಿ- ಕಾರ್ಕಳ ರಾಜ್ಯಹೆದ್ದಾರಿಯಲ್ಲಿ ಅಲ್ಲಲ್ಲಿ ಊರುಗಳ ಹೆಸರಿರುವ ನಾಮಫಲಕಗಳನ್ನು ಅಳವಡಿಸಿದೆ. ಇವುಗಳಲ್ಲಿ ಅಳದಂಗಡಿಯಲ್ಲಿ ದೈವಸ್ಥಾನದ ಪಕ್ಕದಲ್ಲಿ ಹಾಕಿರುವ ಫಲಕದಲ್ಲಿ ದೈವದ ಹೆಸರು ಅಪಭ್ರಂಶಗೊಂಡಿದೆ. ಶ್ರೀಸತ್ಯದೇವತೆ ದೈವಸ್ಥಾನ ಅಳದಂಗಡಿ ಎಂದು ಬರೆಯುವ ಬದಲು ” ಸತ್ಯದೇವಾತ ದೇವಸ್ಥಾನ ಅಳದಂಗದಿ ” ಎಂದು ಬರೆಯಲಾಗಿದೆ. ಸತ್ಯದೇವತೆ ಇರುವಲ್ಲಿ ಸತ್ಯದೇವಾತ; ದೈವಸ್ಥಾನ ಇರಬೇಕಾದಲ್ಲಿ ದೇವಸ್ಥಾನ; ಅಳದಂಗಡಿಯ ಬದಲಾಗಿ ಅಳದಂಗದಿ ಆಗಿದೆ.


ಫಲಕ ಹೀಗೇಯೇ ಕೆಲಕಾಲ ಇದ್ದರೆ ಅದರಲ್ಲಿ ಇರುವ ಹೆಸರೇ ಚಾಲ್ತಿಯಲ್ಲಿ ಬಂದರೆ ಅಚ್ಚರಿಯಿಲ್ಲ. ಇನ್ನಾದರೂ ಇಲಾಖೆಯವರು ಸರಿಯಾದ ಫಲಕ ಅಳವಡಿಸುವರೇ ಕಾದು ನೋಡಬೇಕಾಗಿದೆ.

Related posts

ದಿ. ಡಾ. ಬಿ. ಯಶೋವರ್ಮ ಜನ್ಮದಿನ ಸ್ಮರಣಾರ್ಥ ಹಲವು ಕಾರ್ಯಕ್ರಮ

Suddi Udaya

ಜನಜಾಗೃತಿ ವೇದಿಕೆಯ ಪದಾಧಿಕಾರಿಗಳಿಂದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ ಬೇಟಿ

Suddi Udaya

ಬೆಳ್ತಂಗಡಿ ಸ.ಪ.ಪೂ. ಕಾಲೇಜಿನಲ್ಲಿ ಗಮಕ ವಾಚನ ಮತ್ತು ವ್ಯಾಖ್ಯಾನ ಕಾರ್ಯಕ್ರಮ

Suddi Udaya

ತಾಲೂಕು ಆಸ್ಪತ್ರೆಗೆ ಜಿಲ್ಲಾ ಆರೋಗ್ಯಾಧಿಕಾರಿ ಭೇಟಿ; ಪರಿಶೀಲನೆ

Suddi Udaya

ಮಾಜಿ ಶಾಸಕ ಬಂಗೇರರ ನಿಧನಕ್ಕೆ ಬೆಳ್ತಂಗಡಿ ಮೊಬೈಲ್ ರಿಟೇಲರ್ ಅಸೋಸಿಯೇಷನ್ ನಿಂದ ನಾಳೆ ಅಂಗಡಿ ಮುಂಗಟ್ಟು ಬಂದ್ ಮಾಡಿ ಶ್ರದ್ಧಾಂಜಲಿ ಅರ್ಪಣೆ

Suddi Udaya

ಲಾಯಿಲ ಬಿಜೆಪಿ ಬೆಂಬಲಿತ ಮಾಜಿ ಗ್ರಾಮ ಪಂಚಾಯತಿ ಸದಸ್ಯೆ ಕಾಂಗ್ರೆಸ್ ಪಕ್ಷ ಸೇರ್ಪಡೆ

Suddi Udaya
error: Content is protected !!