23.5 C
ಪುತ್ತೂರು, ಬೆಳ್ತಂಗಡಿ
June 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್. ಡಿ. ಎಂ. ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವತಿಯಿಂದ “ಅನುಭವವನ್ನು ಅನುಭವಿಸಿ” ವಿನೂತನ ಕಾರ್ಯಕ್ರಮ

ಉಜಿರೆ : ಇಲ್ಲಿನ ಎಸ್. ಡಿ. ಎಂ. ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವತಿಯಿಂದ ಉಜಿರೆಯ ಹಾಗೂ ಧರ್ಮಸ್ಥಳದ ಎಸ್. ಡಿ. ಎಂ. ಶಾಲೆಗಳ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಅನುಭವವನ್ನು ನೀಡುವ “ಅನುಭವವನ್ನು ಅನುಭವಿಸಿ” ಎಂಬ ವಿನೂತನ ಕಾರ್ಯಕ್ರಮವನ್ನು ಜ.27 ಮತ್ತು 28 ರಂದು ಹಮ್ಮಿಕೊಳ್ಳಲಾಗಿತ್ತು.

ಎರಡು ದಿನದ ಈ ವಿನೂತನ ಕಾರ್ಯಕ್ರಮದಲ್ಲಿ ಒಟ್ಟು 6 ಶಾಲೆಯ 480 ಕ್ಕೂ ಅಧಿಕ ವಿದ್ಯಾರ್ಥಿಗಳು ಭೌತ ಶಾಸ್ತ್ರ, ರಸಾಯನ ಶಾಸ್ತ್ರ ಮತ್ತು ಜೀವಶಾಸ್ತ್ರದ ಪ್ರಯೋಗಾಲಯಗಳಿಗೆ ಭೇಟಿ ನೀಡಿ ತಾವು ಕಲಿಯುತ್ತಿರುವ ವಿಜ್ಞಾನದ ಸಿದ್ಧಾಂತ ಮತ್ತು ನಿಯಮಗಳನ್ನು ಪ್ರಾಯೋಗಿಕವಾಗಿ ನೋಡಿ ಅನುಭವಿಸಿ ವಿಷಯಗಳನ್ನು ಇನ್ನೂ ಹೆಚ್ಚಾಗಿ ಮನದಟ್ಟು ಮಾಡಿಕೊಂಡರು.

ಈ ಸಂದರ್ಭದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಕಾಲೇಜಿನ ಪ್ರಾಚಾರ್ಯ ಪ್ರಮೋದ್ ಕುಮಾರ್ ಬಿ ಮಾತನಾಡಿ, ವಿಜ್ಞಾನ ವಿದ್ಯಾರ್ಥಿಗಳು ಕೇವಲ ಅಂಕಗಳನ್ನೇ ಮಾನದಂಡವಾಗಿಸಿ ಅರ್ಥವಿಲ್ಲದೇ ಓದುತ್ತಿರುವುದು ಆಘಾತಕಾರಿ ಬೆಳವಣಿಗೆ, ಓದುವ ವಿಷಯವನ್ನು ಪ್ರಾಯೋಗಿಕವಾಗಿ ನೋಡಿದಾಗ ಮತ್ತು ಅನುಭವಿಸಿದಾಗ ಮಾತ್ರ ಆ ವಿಷಯ ಬಹಳ ಸುಲಭವಾಗುತ್ತದೆ. ಈ ನಿಟ್ಟಿನಲ್ಲಿ ಕಾಲೇಜಿನಲ್ಲಿ ಈ ಒಂದು ವಿನೂತನ ಪ್ರಯೋಗವನ್ನು ಕಳೆದ ಕೆಲವು ವರ್ಷಗಳಿಂದ ಮಾಡುತ್ತಿದ್ದೇವೆ ಇದರ ಸದುಪಯೋಗವನ್ನು ಮಾಡಿಕೊಳ್ಳುವಂತೆ ಕರೆ ನೀಡಿ ವಿದ್ಯಾರ್ಥಿಗಳ ಹತ್ತನೇ ತರಗತಿಯ ನಂತರದ ಭವಿಷ್ಯಕ್ಕೆ ಶುಭ ಹಾರೈಸಿದರು.


ವಿಜ್ಞಾನ ವಿಭಾಗದ ಮುಖ್ಯಸ್ಥರು, ಉಪನ್ಯಾಸಕರು ಮತ್ತು ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಪ್ರಯೋಗಗಳನ್ನು ವಿವರಿಸಿದರು. ಜೀವಶಾಸ್ತ್ರ ಉಪನ್ಯಾಸಕಿ ಡಾ. ರಾಜೇಶ್ವರಿ ಕೆ ಆರ್ ಮತ್ತು ಭೌತಶಾಸ್ತ್ರ ಉಪನ್ಯಾಸಕ ಲಕ್ಷ್ಮೀಶ್ ಭಟ್ ಕಾರ್ಯಕ್ರಮವನ್ನು ಸಂಯೋಜಿಸಿದರು.

Related posts

ತಿರುಮಲೇಶ್ವರ ಭಟ್ಟರಿಗೆ ರಾಷ್ಟ್ರಮಟ್ಟದ ಕ್ರೀಡಾಕೂಟ ಪ್ರಶಸ್ತಿ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಸಂವಿಧಾನ ದಿನಾಚರಣೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಡಾ|| ವೀರೇoದ್ರ ಹೆಗ್ಗಡೆಯವರ ಪಟ್ಟಾಭಿಷೇಕದ ವರ್ಧoತಿ ಪ್ರಯುಕ್ತ ಗೌರವಾರ್ಪಣೆ

Suddi Udaya

ಕುಕ್ಕೇಡಿ ಸ್ಫೋಟ ಪ್ರಕರಣ: ಮೃತ ಕುಟುಂಬಕ್ಕೆ ಬೆಳ್ತಂಗಡಿ ಕೆಎಸ್ಎಂಸಿಎ ಯಿಂದ ಸಹಾಯ ಹಸ್ತ

Suddi Udaya

ಆರಂಬೋಡಿ ಬಂಟ್ಸ್ ಸಂಘದ ಗ್ರಾಮ ಸಮಿತಿ ಸಭೆ

Suddi Udaya

ತೋಟತ್ತಾಡಿ: ಬೈಲಂಗಡಿ ಅರಮನೆಯಲ್ಲಿ ದೈವಗಳ ವಾರ್ಷಿಕ ನೇಮೋತ್ಸವ

Suddi Udaya
error: Content is protected !!