25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್. ಡಿ. ಎಂ. ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವತಿಯಿಂದ “ಅನುಭವವನ್ನು ಅನುಭವಿಸಿ” ವಿನೂತನ ಕಾರ್ಯಕ್ರಮ

ಉಜಿರೆ : ಇಲ್ಲಿನ ಎಸ್. ಡಿ. ಎಂ. ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವತಿಯಿಂದ ಉಜಿರೆಯ ಹಾಗೂ ಧರ್ಮಸ್ಥಳದ ಎಸ್. ಡಿ. ಎಂ. ಶಾಲೆಗಳ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಅನುಭವವನ್ನು ನೀಡುವ “ಅನುಭವವನ್ನು ಅನುಭವಿಸಿ” ಎಂಬ ವಿನೂತನ ಕಾರ್ಯಕ್ರಮವನ್ನು ಜ.27 ಮತ್ತು 28 ರಂದು ಹಮ್ಮಿಕೊಳ್ಳಲಾಗಿತ್ತು.

ಎರಡು ದಿನದ ಈ ವಿನೂತನ ಕಾರ್ಯಕ್ರಮದಲ್ಲಿ ಒಟ್ಟು 6 ಶಾಲೆಯ 480 ಕ್ಕೂ ಅಧಿಕ ವಿದ್ಯಾರ್ಥಿಗಳು ಭೌತ ಶಾಸ್ತ್ರ, ರಸಾಯನ ಶಾಸ್ತ್ರ ಮತ್ತು ಜೀವಶಾಸ್ತ್ರದ ಪ್ರಯೋಗಾಲಯಗಳಿಗೆ ಭೇಟಿ ನೀಡಿ ತಾವು ಕಲಿಯುತ್ತಿರುವ ವಿಜ್ಞಾನದ ಸಿದ್ಧಾಂತ ಮತ್ತು ನಿಯಮಗಳನ್ನು ಪ್ರಾಯೋಗಿಕವಾಗಿ ನೋಡಿ ಅನುಭವಿಸಿ ವಿಷಯಗಳನ್ನು ಇನ್ನೂ ಹೆಚ್ಚಾಗಿ ಮನದಟ್ಟು ಮಾಡಿಕೊಂಡರು.

ಈ ಸಂದರ್ಭದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಕಾಲೇಜಿನ ಪ್ರಾಚಾರ್ಯ ಪ್ರಮೋದ್ ಕುಮಾರ್ ಬಿ ಮಾತನಾಡಿ, ವಿಜ್ಞಾನ ವಿದ್ಯಾರ್ಥಿಗಳು ಕೇವಲ ಅಂಕಗಳನ್ನೇ ಮಾನದಂಡವಾಗಿಸಿ ಅರ್ಥವಿಲ್ಲದೇ ಓದುತ್ತಿರುವುದು ಆಘಾತಕಾರಿ ಬೆಳವಣಿಗೆ, ಓದುವ ವಿಷಯವನ್ನು ಪ್ರಾಯೋಗಿಕವಾಗಿ ನೋಡಿದಾಗ ಮತ್ತು ಅನುಭವಿಸಿದಾಗ ಮಾತ್ರ ಆ ವಿಷಯ ಬಹಳ ಸುಲಭವಾಗುತ್ತದೆ. ಈ ನಿಟ್ಟಿನಲ್ಲಿ ಕಾಲೇಜಿನಲ್ಲಿ ಈ ಒಂದು ವಿನೂತನ ಪ್ರಯೋಗವನ್ನು ಕಳೆದ ಕೆಲವು ವರ್ಷಗಳಿಂದ ಮಾಡುತ್ತಿದ್ದೇವೆ ಇದರ ಸದುಪಯೋಗವನ್ನು ಮಾಡಿಕೊಳ್ಳುವಂತೆ ಕರೆ ನೀಡಿ ವಿದ್ಯಾರ್ಥಿಗಳ ಹತ್ತನೇ ತರಗತಿಯ ನಂತರದ ಭವಿಷ್ಯಕ್ಕೆ ಶುಭ ಹಾರೈಸಿದರು.


ವಿಜ್ಞಾನ ವಿಭಾಗದ ಮುಖ್ಯಸ್ಥರು, ಉಪನ್ಯಾಸಕರು ಮತ್ತು ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಪ್ರಯೋಗಗಳನ್ನು ವಿವರಿಸಿದರು. ಜೀವಶಾಸ್ತ್ರ ಉಪನ್ಯಾಸಕಿ ಡಾ. ರಾಜೇಶ್ವರಿ ಕೆ ಆರ್ ಮತ್ತು ಭೌತಶಾಸ್ತ್ರ ಉಪನ್ಯಾಸಕ ಲಕ್ಷ್ಮೀಶ್ ಭಟ್ ಕಾರ್ಯಕ್ರಮವನ್ನು ಸಂಯೋಜಿಸಿದರು.

Related posts

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ.366 ಕೋಟಿ ವಾರ್ಷಿಕ ವ್ಯವಹಾರ, ರೂ.1ಕೋಟಿ 64 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ 16 ಡಿವಿಡೆಂಟ್

Suddi Udaya

ಕಲ್ಮಂಜ: ಅಲೆಕ್ಕಿ ನಿವಾಸಿ ಗೀತಾ ನಿಧನ

Suddi Udaya

ಮನೆಯ ಪರಿಸರದಲ್ಲಿ ಅಡ್ಡಾಡುತ್ತಿದ್ದ ಬೃಹದಾಕಾರದ ಹೆಬ್ಬಾವನ್ನು ಹಿಡಿದು ಕಾಡಿಗೆ ಬಿಟ್ಟ ನಾಗರಿಕರು

Suddi Udaya

ಎಸ್. ಕೆ. ಫ್ರೆಂಡ್ಸ್ ನೀರಪಲ್ಕೆ ಹೊಕ್ಕಾಡಿಗೋಳಿ ಇದರ ಆಶ್ರಯದಲ್ಲಿ ಅನಾರೋಗ್ಯ ಪೀಡಿತ ಬಡಕುಟುಂಬಗಳಿಗೆ ಸಹಾಯಧನ

Suddi Udaya

ಕಣಿಯೂರು ವಲಯದ ಒಕ್ಕೂಟ ಪದಾಧಿಕಾರಿಗಳ ತರಬೇತಿ ಕಾರ್ಯಾಗಾರ

Suddi Udaya

ಕೊಕ್ಕಡ: ವೈದ್ಯನಾಥೇಶ್ವರ ರೆಸಿಡೆನ್ಸಿ ಬೋರ್ಡಿಂಗ್ & ಲಾಡ್ಜಿಂಗ್ ಗೋಲ್ಡನ್ ಹಬ್ ಮಲ್ಟಿ ಕ್ಯುಸಿನ್ ಫ್ಯಾಮಿಲಿ ಬಾ‌ರ್ ಮತ್ತು ರೆಸ್ಟೋರೆಂಟ್ ಉದ್ಘಾಟನೆ

Suddi Udaya
error: Content is protected !!