ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್. ಡಿ. ಎಂ. ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವತಿಯಿಂದ “ಅನುಭವವನ್ನು ಅನುಭವಿಸಿ” ವಿನೂತನ ಕಾರ್ಯಕ್ರಮ

ಉಜಿರೆ : ಇಲ್ಲಿನ ಎಸ್. ಡಿ. ಎಂ. ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವತಿಯಿಂದ ಉಜಿರೆಯ ಹಾಗೂ ಧರ್ಮಸ್ಥಳದ ಎಸ್. ಡಿ. ಎಂ. ಶಾಲೆಗಳ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಅನುಭವವನ್ನು ನೀಡುವ “ಅನುಭವವನ್ನು ಅನುಭವಿಸಿ” ಎಂಬ ವಿನೂತನ ಕಾರ್ಯಕ್ರಮವನ್ನು ಜ.27 ಮತ್ತು 28 ರಂದು ಹಮ್ಮಿಕೊಳ್ಳಲಾಗಿತ್ತು.

ಎರಡು ದಿನದ ಈ ವಿನೂತನ ಕಾರ್ಯಕ್ರಮದಲ್ಲಿ ಒಟ್ಟು 6 ಶಾಲೆಯ 480 ಕ್ಕೂ ಅಧಿಕ ವಿದ್ಯಾರ್ಥಿಗಳು ಭೌತ ಶಾಸ್ತ್ರ, ರಸಾಯನ ಶಾಸ್ತ್ರ ಮತ್ತು ಜೀವಶಾಸ್ತ್ರದ ಪ್ರಯೋಗಾಲಯಗಳಿಗೆ ಭೇಟಿ ನೀಡಿ ತಾವು ಕಲಿಯುತ್ತಿರುವ ವಿಜ್ಞಾನದ ಸಿದ್ಧಾಂತ ಮತ್ತು ನಿಯಮಗಳನ್ನು ಪ್ರಾಯೋಗಿಕವಾಗಿ ನೋಡಿ ಅನುಭವಿಸಿ ವಿಷಯಗಳನ್ನು ಇನ್ನೂ ಹೆಚ್ಚಾಗಿ ಮನದಟ್ಟು ಮಾಡಿಕೊಂಡರು.

ಈ ಸಂದರ್ಭದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಕಾಲೇಜಿನ ಪ್ರಾಚಾರ್ಯ ಪ್ರಮೋದ್ ಕುಮಾರ್ ಬಿ ಮಾತನಾಡಿ, ವಿಜ್ಞಾನ ವಿದ್ಯಾರ್ಥಿಗಳು ಕೇವಲ ಅಂಕಗಳನ್ನೇ ಮಾನದಂಡವಾಗಿಸಿ ಅರ್ಥವಿಲ್ಲದೇ ಓದುತ್ತಿರುವುದು ಆಘಾತಕಾರಿ ಬೆಳವಣಿಗೆ, ಓದುವ ವಿಷಯವನ್ನು ಪ್ರಾಯೋಗಿಕವಾಗಿ ನೋಡಿದಾಗ ಮತ್ತು ಅನುಭವಿಸಿದಾಗ ಮಾತ್ರ ಆ ವಿಷಯ ಬಹಳ ಸುಲಭವಾಗುತ್ತದೆ. ಈ ನಿಟ್ಟಿನಲ್ಲಿ ಕಾಲೇಜಿನಲ್ಲಿ ಈ ಒಂದು ವಿನೂತನ ಪ್ರಯೋಗವನ್ನು ಕಳೆದ ಕೆಲವು ವರ್ಷಗಳಿಂದ ಮಾಡುತ್ತಿದ್ದೇವೆ ಇದರ ಸದುಪಯೋಗವನ್ನು ಮಾಡಿಕೊಳ್ಳುವಂತೆ ಕರೆ ನೀಡಿ ವಿದ್ಯಾರ್ಥಿಗಳ ಹತ್ತನೇ ತರಗತಿಯ ನಂತರದ ಭವಿಷ್ಯಕ್ಕೆ ಶುಭ ಹಾರೈಸಿದರು.


ವಿಜ್ಞಾನ ವಿಭಾಗದ ಮುಖ್ಯಸ್ಥರು, ಉಪನ್ಯಾಸಕರು ಮತ್ತು ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಪ್ರಯೋಗಗಳನ್ನು ವಿವರಿಸಿದರು. ಜೀವಶಾಸ್ತ್ರ ಉಪನ್ಯಾಸಕಿ ಡಾ. ರಾಜೇಶ್ವರಿ ಕೆ ಆರ್ ಮತ್ತು ಭೌತಶಾಸ್ತ್ರ ಉಪನ್ಯಾಸಕ ಲಕ್ಷ್ಮೀಶ್ ಭಟ್ ಕಾರ್ಯಕ್ರಮವನ್ನು ಸಂಯೋಜಿಸಿದರು.

Related posts

ಬೆಳ್ತಂಗಡಿ ಸೈಂಟ್ ಲಾರೆನ್ಸ್ ಕ್ಯಾಥೆಡ್ರಲ್ ಚರ್ಚ್ ನಲ್ಲಿ ಶುಭ ಶುಕ್ರವಾರ ಆಚರಣೆ

Suddi Udaya

ಬಿಜೆಪಿ ಯುವ ಮೋರ್ಚಾ ಬೆಳ್ತಂಗಡಿ ಮಂಡಲದ ನೂತನ ಸದಸ್ಯರಾಗಿ ಸಂತೋಷ್ ಕುಮಾರ್ ಉಂಬೆಜೆ ಆಯ್ಕೆ

Suddi Udaya

ರಾಷ್ಟ್ರೀಯ ಭಾವೈಕ್ಯತಾ ಶಿಬಿರಕ್ಕೆ ಮುಂಡಾಜೆ ಪ.ಪೂ. ಕಾಲೇಜು ವಿದ್ಯಾರ್ಥಿ ಕೆ.ಎನ್. ಧನುಷ್ ಆಯ್ಕೆ

Suddi Udaya

ಕಡಿರುದ್ಯಾವರ ಗ್ರಾಮ ಪಂಚಾಯತಿನಲ್ಲಿ ನೂತನ ಗ್ರಂಥಾಲಯ ಉದ್ಘಾಟನೆ

Suddi Udaya

ಮಾ.22: ಬೆಳ್ತಂಗಡಿಯಲ್ಲಿ ಐ ಕೇರ್ ಒಪ್ಟಿಕಲ್ಸ್ ಶುಭಾರಂಭ

Suddi Udaya

ಬೆಳ್ತಂಗಡಿ ಪಿ.ಎಲ್.ಡಿ ಬ್ಯಾಂಕಿನ ನಿವೃತ್ತ ಸಿಬ್ಬಂದಿ ನವೀನ್ ಕುಮಾರ್ ಕೆ.ಎನ್. ನಿಧನ

Suddi Udaya
error: Content is protected !!