July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್. ಡಿ. ಎಂ. ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವತಿಯಿಂದ “ಅನುಭವವನ್ನು ಅನುಭವಿಸಿ” ವಿನೂತನ ಕಾರ್ಯಕ್ರಮ

ಉಜಿರೆ : ಇಲ್ಲಿನ ಎಸ್. ಡಿ. ಎಂ. ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವತಿಯಿಂದ ಉಜಿರೆಯ ಹಾಗೂ ಧರ್ಮಸ್ಥಳದ ಎಸ್. ಡಿ. ಎಂ. ಶಾಲೆಗಳ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಅನುಭವವನ್ನು ನೀಡುವ “ಅನುಭವವನ್ನು ಅನುಭವಿಸಿ” ಎಂಬ ವಿನೂತನ ಕಾರ್ಯಕ್ರಮವನ್ನು ಜ.27 ಮತ್ತು 28 ರಂದು ಹಮ್ಮಿಕೊಳ್ಳಲಾಗಿತ್ತು.

ಎರಡು ದಿನದ ಈ ವಿನೂತನ ಕಾರ್ಯಕ್ರಮದಲ್ಲಿ ಒಟ್ಟು 6 ಶಾಲೆಯ 480 ಕ್ಕೂ ಅಧಿಕ ವಿದ್ಯಾರ್ಥಿಗಳು ಭೌತ ಶಾಸ್ತ್ರ, ರಸಾಯನ ಶಾಸ್ತ್ರ ಮತ್ತು ಜೀವಶಾಸ್ತ್ರದ ಪ್ರಯೋಗಾಲಯಗಳಿಗೆ ಭೇಟಿ ನೀಡಿ ತಾವು ಕಲಿಯುತ್ತಿರುವ ವಿಜ್ಞಾನದ ಸಿದ್ಧಾಂತ ಮತ್ತು ನಿಯಮಗಳನ್ನು ಪ್ರಾಯೋಗಿಕವಾಗಿ ನೋಡಿ ಅನುಭವಿಸಿ ವಿಷಯಗಳನ್ನು ಇನ್ನೂ ಹೆಚ್ಚಾಗಿ ಮನದಟ್ಟು ಮಾಡಿಕೊಂಡರು.

ಈ ಸಂದರ್ಭದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಕಾಲೇಜಿನ ಪ್ರಾಚಾರ್ಯ ಪ್ರಮೋದ್ ಕುಮಾರ್ ಬಿ ಮಾತನಾಡಿ, ವಿಜ್ಞಾನ ವಿದ್ಯಾರ್ಥಿಗಳು ಕೇವಲ ಅಂಕಗಳನ್ನೇ ಮಾನದಂಡವಾಗಿಸಿ ಅರ್ಥವಿಲ್ಲದೇ ಓದುತ್ತಿರುವುದು ಆಘಾತಕಾರಿ ಬೆಳವಣಿಗೆ, ಓದುವ ವಿಷಯವನ್ನು ಪ್ರಾಯೋಗಿಕವಾಗಿ ನೋಡಿದಾಗ ಮತ್ತು ಅನುಭವಿಸಿದಾಗ ಮಾತ್ರ ಆ ವಿಷಯ ಬಹಳ ಸುಲಭವಾಗುತ್ತದೆ. ಈ ನಿಟ್ಟಿನಲ್ಲಿ ಕಾಲೇಜಿನಲ್ಲಿ ಈ ಒಂದು ವಿನೂತನ ಪ್ರಯೋಗವನ್ನು ಕಳೆದ ಕೆಲವು ವರ್ಷಗಳಿಂದ ಮಾಡುತ್ತಿದ್ದೇವೆ ಇದರ ಸದುಪಯೋಗವನ್ನು ಮಾಡಿಕೊಳ್ಳುವಂತೆ ಕರೆ ನೀಡಿ ವಿದ್ಯಾರ್ಥಿಗಳ ಹತ್ತನೇ ತರಗತಿಯ ನಂತರದ ಭವಿಷ್ಯಕ್ಕೆ ಶುಭ ಹಾರೈಸಿದರು.


ವಿಜ್ಞಾನ ವಿಭಾಗದ ಮುಖ್ಯಸ್ಥರು, ಉಪನ್ಯಾಸಕರು ಮತ್ತು ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಪ್ರಯೋಗಗಳನ್ನು ವಿವರಿಸಿದರು. ಜೀವಶಾಸ್ತ್ರ ಉಪನ್ಯಾಸಕಿ ಡಾ. ರಾಜೇಶ್ವರಿ ಕೆ ಆರ್ ಮತ್ತು ಭೌತಶಾಸ್ತ್ರ ಉಪನ್ಯಾಸಕ ಲಕ್ಷ್ಮೀಶ್ ಭಟ್ ಕಾರ್ಯಕ್ರಮವನ್ನು ಸಂಯೋಜಿಸಿದರು.

Related posts

ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಶ್ರೀ ಭಾರತೀ ಆಂ.ಮಾ.ಪ್ರೌ. ಶಾಲೆಯ ವಿದ್ಯಾರ್ಥಿಗಳಿಗೆ ಪ್ರಥಮ ಸ್ಥಾನ

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ ಮತ್ತು ವಿಜಯ ಗೋಪುರ ಲೋಕಾರ್ಪಣೆಯ ಪೂರ್ವಾಭಾವಿ ಸಭೆ: ಬ್ರಹ್ಮಕಲಶೋತ್ಸವದ ಅಧ್ಯಕ್ಷರಾಗಿ ಕೆ.ಪ್ರತಾಪಸಿಂಹ ನಾಯಕ್, ಕಾರ್ಯಾಧ್ಯಕ್ಷರಾಗಿ ಶಶಿಧರ ಶೆಟ್ಟಿ ನವಶಕ್ತಿ ಆಯ್ಕೆ : ದೇಶಕ್ಕೆ ಮಾದರಿಯಾಗಿ ಉಜಿರೆ ದೇವಸ್ಥಾನದ ಬ್ರಹ್ಮಕಲಶೋತ್ಸವ: ಹರೀಶ್ ಪೂಂಜ

Suddi Udaya

ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನಕ್ಕೆ ನೀಲೇಶ್ವರದ ತಂತ್ರಿವರ್ಯರಾದ ಉಚ್ಚಿಲ ಪದ್ಮನಾಭ ತಂತ್ರಿಗಳ ಭೇಟಿ

Suddi Udaya

ಕುದುರೆಮುಖ: ಟ್ರೆಕ್ಕಿಂಗ್ ಗೈಡ್ ತರಬೇತಿ

Suddi Udaya

ಸುದ್ದಿ ಉದಯ ‘ಬೆಳಕಿನ ಉದಯ’ ದೀಪಾವಳಿ ವಿಶೇಷಾಂಕ ಬಿಡುಗಡೆ: ಶ್ರೀರಾಮ‌ ಕ್ಷೇತ್ರದ ಪೀಠಾಧಿಪತಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮಿಜೀಯವರು ಬಿಡುಗಡೆಗೊಳಿಸಿ ಶುಭ ಹಾರೈಕೆ

Suddi Udaya

ನಯನಾಡು ಸರಕಾರಿ ಪ್ರೌಢಶಾಲೆಗೆ ಯಸ್ಕಾವ ಕಂಪೆನಿಯ ವತಿಯಿಂದ ಉಪಕರಣಗಳ ಹಸ್ತಾಂತರ

Suddi Udaya
error: Content is protected !!