September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಗುರುವಾಯನಕೆರೆ ಶಾಲೆಯಲ್ಲಿ ಶತಮಾನೋತ್ಸವ ಸಂಭ್ರಮ

ಗುರುವಾಯನಕೆರೆ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ವತಿಯಿಂದ ನಡೆದ ಶತಮಾನೋತ್ತರ ವಿoಶತಿ (120ವರ್ಷ ) ಎಲ್.ಕೆ‌.ಜಿ ಕಟ್ಟಡದ ಸಹಾಯಾರ್ಥ ಪ್ರಯುಕ್ತ ಬಾಲವನ ಮತ್ತು ಪೀಠೋಪಕರಣಗಳ ಉದ್ಘಾಟನೆ ಹಾಗೂ ಸನ್ಮಾನ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು.

ಸಭಾ ಕಾರ್ಯಕ್ರಮವನ್ನು ಕುವೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಭಾರತಿ ಶೆಟ್ಟಿ ಉದ್ಘಾಟಿಸಿ ಶುಭ ಕೋರಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಸರ್ಕಾರಿ ಶಾಲೆಗಳನ್ನು ಉಳಿಸಿ ಬೆಳೆಸುವ ಕೆಲಸ ಸರ್ಕಾರದ್ದು ಮಾತ್ರವಲ್ಲ, ನಮ್ಮೆಲ್ಲರ ಜವಾಬ್ದಾರಿ ಕೂಡ ಹೌದು. ಇಂದು ಸರಕಾರಿ ಶಾಲೆಗಳು ಅಭಿವೃದ್ಧಿ ಪಥದಲ್ಲಿ ಸಾಗುತ್ತಿದ್ದು ಎಸ್.ಡಿ.ಎಮ್.ಸಿ ಸದಸ್ಯರು, ಊರ ದಾನಿಗಳು, ಹಳೆಯ ವಿದ್ಯಾರ್ಥಿಗಳ ಸಹಕಾರ ಮುಖ್ಯವಾಗಿದೆ ಎಂದು ಪ್ರಶಂಸನೀಯ ಮಾತುಗಳನ್ನಾಡಿ, ಶಾಲೆಗೆ ಸರಕಾರದ ವತಿಯಿಂದ ಸುಸಜ್ಜಿತ ಶೌಚಾಲಯದ ವ್ಯವಸ್ಥೆ ಮಾಡುವುದಾಗಿ ಭರವಸೆ ನೀಡಿದರು.

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಮಾತನಾಡಿ ಕನ್ನಡ ಶಾಲೆಗಳ ಸರ್ವತೋಮುಖ ಬೆಳವಣಿಗೆಗೆ ಸಹಕಾರ ನೀಡುವುದಾಗಿ ಹೇಳಿದರು.

ಈ ಸಂದರ್ಭದಲ್ಲಿ ಹಾಜಿ ಅಬ್ದುಲ್ ಲತೀಫ್, ಸಲೀಂ ಗುರುವಾಯನಕೆರೆ, ಮಾಜಿ ತಾಲೂಕು ಪಂಚಾಯತ್ ಸದಸ್ಯ ಗೋಪಿನಾಥ್ ನಾಯಕ್, ಪಂಚಾಯತ್ ಉಪಾಧ್ಯಕ್ಷ ಗಣೇಶ್ ಕುಲಾಲ್ ,ಹೇಮಂತ್ ಯರ್ಡೂರು, ರಾಮಕೃಷ್ಣ ನಾಯಕ್, ಪ್ರವೀಣ್ ಗುರುವಾಯನಕೆರೆ, ಸಿ‌.ಆರ್.ಪಿ ರಾಜೇಶ್ ಆಚಾರ್ಯ, ಮುಸ್ತಾಫ, ಮುಖ್ಯ ಶಿಕ್ಷಕಿ ಉಮಸ ಯನ್, ವೇರೋನಿಕಾ, ಹಾಗೂ ಅಧ್ಯಾಪಕ ವೃಂದದವರು, ಮೊದಲಾದವರು ಉಪಸ್ಥಿತರಿದ್ದರು.

ಗುರುವಾಯನಕೆರೆ, ಶಕ್ತಿನಗರ, ಕೊಜಪ್ಪಾಡಿ ಅಂಗನವಾಡಿ ಕೇಂದ್ರದ ಪುಟಾಣಿಗಳು ಮತ್ತು ಎಲ್ ಕೆ ಜಿ, ಯು ಕೆ ಜಿ ವಿದ್ಯಾರ್ಥಿಗಳಿಂದ ಮತ್ತು ಶಾಲಾ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು‌. ನಿರೂಪಣೆಯನ್ನು ಪುಣ್ಯಶ್ರೀ ಕೋಟ್ಯಾನ್ ಪುಂಜಾಲಕಟ್ಟೆ, ನೆರವೇರಿಸಿದರು.

Related posts

ಬೆಳ್ತಂಗಡಿ: ಮುಳಿಯ ಜ್ಯುವೆಲ್ಸ್ ನಿಂದ ದ.ಕ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ

Suddi Udaya

ಎಸ್.ಡಿ.ಎಂ ಪದವಿ ಪೂರ್ವ ಕಾಲೇಜಿನಲ್ಲಿ ರೋವರ್ಸ್‌ ಮತ್ತು ರೇಂಜರ್ಸ್‌ ದಳದಿಂದ ಚಾರಣ, ಸ್ವಚ್ಚತಾ ಆಂದೋಲನ ಮತ್ತು ಯುವ ದಿನಾಚರಣೆ

Suddi Udaya

ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ ಕನ್ನಡ ಪ್ರಬಂಧ ಸ್ಪರ್ಧೆ: ಅಂಡಿಂಜೆ ಸ.ಉ. ಪ್ರಾ. ಶಾಲೆಯ ವಿದ್ಯಾರ್ಥಿ ಪ್ರಜ್ಞಾ ಪ್ರಥಮ ಸ್ಥಾನ

Suddi Udaya

12 ವರ್ಷಗಳ ಮೋದಿ ನೇತೃತ್ವ – ಹೊಸ ಭಾರತದ ಆತ್ಮವಿಶ್ವಾಸದ ಪಯಣ: ಅನಿಲ್ ಕುಮಾರ್ ಯು

Suddi Udaya

ಸಾಂಸ್ಕೃತಿಕ ಸ್ಪರ್ಧೆ: ವಾಣಿ ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ಉಜಿರೆಯಲ್ಲಿ ನೀರಿನ ಉಳಿತಾಯ ಮತ್ತು ಸಂರಕ್ಷಣೆ ಬಗ್ಗೆ ಜಾಗೃತಿ ಅಭಿಯಾನ

Suddi Udaya
error: Content is protected !!