22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಗುರುವಾಯನಕೆರೆ ಶಾಲೆಯಲ್ಲಿ ಶತಮಾನೋತ್ಸವ ಸಂಭ್ರಮ

ಗುರುವಾಯನಕೆರೆ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ವತಿಯಿಂದ ನಡೆದ ಶತಮಾನೋತ್ತರ ವಿoಶತಿ (120ವರ್ಷ ) ಎಲ್.ಕೆ‌.ಜಿ ಕಟ್ಟಡದ ಸಹಾಯಾರ್ಥ ಪ್ರಯುಕ್ತ ಬಾಲವನ ಮತ್ತು ಪೀಠೋಪಕರಣಗಳ ಉದ್ಘಾಟನೆ ಹಾಗೂ ಸನ್ಮಾನ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು.

ಸಭಾ ಕಾರ್ಯಕ್ರಮವನ್ನು ಕುವೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಭಾರತಿ ಶೆಟ್ಟಿ ಉದ್ಘಾಟಿಸಿ ಶುಭ ಕೋರಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಸರ್ಕಾರಿ ಶಾಲೆಗಳನ್ನು ಉಳಿಸಿ ಬೆಳೆಸುವ ಕೆಲಸ ಸರ್ಕಾರದ್ದು ಮಾತ್ರವಲ್ಲ, ನಮ್ಮೆಲ್ಲರ ಜವಾಬ್ದಾರಿ ಕೂಡ ಹೌದು. ಇಂದು ಸರಕಾರಿ ಶಾಲೆಗಳು ಅಭಿವೃದ್ಧಿ ಪಥದಲ್ಲಿ ಸಾಗುತ್ತಿದ್ದು ಎಸ್.ಡಿ.ಎಮ್.ಸಿ ಸದಸ್ಯರು, ಊರ ದಾನಿಗಳು, ಹಳೆಯ ವಿದ್ಯಾರ್ಥಿಗಳ ಸಹಕಾರ ಮುಖ್ಯವಾಗಿದೆ ಎಂದು ಪ್ರಶಂಸನೀಯ ಮಾತುಗಳನ್ನಾಡಿ, ಶಾಲೆಗೆ ಸರಕಾರದ ವತಿಯಿಂದ ಸುಸಜ್ಜಿತ ಶೌಚಾಲಯದ ವ್ಯವಸ್ಥೆ ಮಾಡುವುದಾಗಿ ಭರವಸೆ ನೀಡಿದರು.

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಮಾತನಾಡಿ ಕನ್ನಡ ಶಾಲೆಗಳ ಸರ್ವತೋಮುಖ ಬೆಳವಣಿಗೆಗೆ ಸಹಕಾರ ನೀಡುವುದಾಗಿ ಹೇಳಿದರು.

ಈ ಸಂದರ್ಭದಲ್ಲಿ ಹಾಜಿ ಅಬ್ದುಲ್ ಲತೀಫ್, ಸಲೀಂ ಗುರುವಾಯನಕೆರೆ, ಮಾಜಿ ತಾಲೂಕು ಪಂಚಾಯತ್ ಸದಸ್ಯ ಗೋಪಿನಾಥ್ ನಾಯಕ್, ಪಂಚಾಯತ್ ಉಪಾಧ್ಯಕ್ಷ ಗಣೇಶ್ ಕುಲಾಲ್ ,ಹೇಮಂತ್ ಯರ್ಡೂರು, ರಾಮಕೃಷ್ಣ ನಾಯಕ್, ಪ್ರವೀಣ್ ಗುರುವಾಯನಕೆರೆ, ಸಿ‌.ಆರ್.ಪಿ ರಾಜೇಶ್ ಆಚಾರ್ಯ, ಮುಸ್ತಾಫ, ಮುಖ್ಯ ಶಿಕ್ಷಕಿ ಉಮಸ ಯನ್, ವೇರೋನಿಕಾ, ಹಾಗೂ ಅಧ್ಯಾಪಕ ವೃಂದದವರು, ಮೊದಲಾದವರು ಉಪಸ್ಥಿತರಿದ್ದರು.

ಗುರುವಾಯನಕೆರೆ, ಶಕ್ತಿನಗರ, ಕೊಜಪ್ಪಾಡಿ ಅಂಗನವಾಡಿ ಕೇಂದ್ರದ ಪುಟಾಣಿಗಳು ಮತ್ತು ಎಲ್ ಕೆ ಜಿ, ಯು ಕೆ ಜಿ ವಿದ್ಯಾರ್ಥಿಗಳಿಂದ ಮತ್ತು ಶಾಲಾ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು‌. ನಿರೂಪಣೆಯನ್ನು ಪುಣ್ಯಶ್ರೀ ಕೋಟ್ಯಾನ್ ಪುಂಜಾಲಕಟ್ಟೆ, ನೆರವೇರಿಸಿದರು.

Related posts

ಐಪಿಎಲ್ ಪಂದ್ಯಾಟದಲ್ಲಿ ಹರೀಶ್ ಪೂಂಜರ ಭಾವಚಿತ್ರ ಪ್ರದಶಿ೯ಸಿದ ಅಭಿಮಾನಿಗಳು: ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್

Suddi Udaya

ಕುಕ್ಕೇಡಿ: ಸುಡುಮದ್ದು ತಯಾರಿಕ ಘಟಕದಲ್ಲಿ ಸ್ಪೋಟ ಪ್ರಕರಣ: ಸ್ಥಳಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

Suddi Udaya

ಬೆಳ್ತಂಗಡಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಕ್ತದಾನ ಶಿಬಿರ

Suddi Udaya

ಬಂಗ್ವಾಡಿ ಬಸದಿ ಶ್ರೀ ಶಾಂತಿನಾಥ ಸ್ವಾಮಿ ಸನ್ನಿಧಿಯಲ್ಲಿ ವಾರ್ಷಿಕ ಮಹಾರಥೋತ್ಸವ: ಧ್ವಜಾರೋಹಣ

Suddi Udaya

ತಾಲೂಕು ಮಟ್ಟದ ಟೇಬಲ್ ಟೆನಿಸ್ ಪಂದ್ಯಾವಳಿ: ಶ್ರೀ ಧ.ಮಂ. ಆಂ.ಮಾ. ಶಾಲೆಗೆ ಹಲವು ಪ್ರಶಸ್ತಿಗಳು

Suddi Udaya

ದ್ವಿತೀಯ ಪಿಯುಸಿ ಮರು ಮೌಲ್ಯಮಾಪನ: ವಿದ್ವತ್ ಪಿಯು ಕಾಲೇಜಿಗೆ ಮತ್ತೊಂದು ಗರಿ

Suddi Udaya
error: Content is protected !!