September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಚಾರ್ಮಾಡಿ ಘಾಟಿಯಲ್ಲಿ ಪದೇ ಪದೇ ಸಂಭವಿಸುತ್ತಿರುವ ಕಾಳ್ಗಿಚ್ಚು ತಡೆಯಲು ಕೊನೆಗೂ ಅರಣ್ಯ ಇಲಾಖೆಯಿಂದ ಸಿಬ್ಬಂದಿ ನಿಯೋಜನೆ

ಚಾರ್ಮಾಡಿ ಘಾಟಿಯಲ್ಲಿ ಪದೇ ಪದೇ ಸಂಭವಿಸುತ್ತಿರುವ ಕಾಳ್ಗಿಚ್ಚು ತಡೆಯಲು ಅರಣ್ಯ ಇಲಾಖೆಯು ಕೊನೆಗೂ ಸಿಬ್ಬಂದಿಯನ್ನು ನಿಯೋಜನೆ ಮಾಡಿದೆ.

ಕೊಟ್ಟಿಗೆಹಾರ ಅರಣ್ಯ ಇಲಾಖೆಯಲ್ಲಿ ಬೆಂಕಿ ವೀಕ್ಷಕರು ಇದ್ದಾರೆ. ಚಾರ್ಮಾಡಿ ಘಾಟಿಯಲ್ಲಿ ರಸ್ತೆ ಬದಿ ಕಿಡಿಗೇಡುಗಳು ಹಚ್ಚುವ ಬೆಂಕಿಯಿಂದ ಉಂಟಾಗುತ್ತಿರುವ ಕಾಳ್ಗಿಚ್ಚು ತಡೆಯಲು ಸಾಧ್ಯವಾಗುತ್ತಿಲ್ಲ.

ಬಿದರತಳ ಬಳಿ ಅರಣ್ಯದಲ್ಲಿ ಬೆಂಕಿ ಹರಡಿತ್ತು. ಅದಾದ ಒಂದೇ ವಾರದ ನಂತರ ಘಾಟಿಯಲ್ಲಿ ಅಣ್ಣಪ್ಪಸ್ವಾಮಿ ದೇಗುಲದ ಸಮೀಪ ಮತ್ತೆ ಕಾಳ್ಗಿಚ್ಚು ಕಾಣಿಸಿಕೊಂಡು ನೂರಾರು ಎಕರೆ ಹುಲ್ಲುಗಾವಲು ಅಗ್ನಿಗೆ ಆಹುತಿಯಾಯಿತು.

ಇದನ್ನು ತಪ್ಪಿಸಲು ಈಗ ಅರಣ್ಯ ಇಲಾಖೆಯಿಂದ ಆನೆ ಕಾರ್ಯಪಡೆ ಸಿಬ್ಬಂದಿಯನ್ನು ತಾತ್ಕಾಲಿಕವಾಗಿ ನಿಯೋಜನೆ ಮಾಡಿದೆ. ರಸ್ತೆ ಬದಿಯಲ್ಲಿ ಕಿಡಿಗೇಡಿಗಳು ಬೆಂಕಿ ಹಚ್ಚುವುದನ್ನು ತಡೆಯಲು, ರಸ್ತೆಯಲ್ಲಿ ವಾಹನ ನಿಲ್ಲಿಸಿದವರ ಮೇಲೆ ನಿಗಾ ಇಡುವ ಕೆಲಸವನ್ನು ಈ ಸಿಬ್ಬಂದಿ ಮಾಡಲಿದ್ದಾರೆ.

Related posts

ಬೆಳಾಲಿನಲ್ಲಿ ಎಸ್ ಡಿ ಎಂ ಎನ್ ಎಸ್ ಎಸ್ ಶಿಬಿರದ ಸಮಾರೋಪ

Suddi Udaya

ಬೆಳ್ತಂಗಡಿ ಕಳ್ಳತನ ಪ್ರಕರಣ: ಬೆಳ್ತಂಗಡಿ ಪೊಲೀಸರಿಂದ ಅಂತರ್ ರಾಜ್ಯ ಕುಖ್ಯಾತ ಕಳ್ಳನ ಬಂಧನ

Suddi Udaya

ಬೆಳ್ತಂಗಡಿ ಸ್ಟೇಟ್ ಬ್ಯಾಂಕ್ ಆಪ್ ಇಂಡಿಯಾದಲ್ಲಿ 50 ನೇ ವರ್ಷದ ಸಂಭ್ರಮಾಚರಣೆ

Suddi Udaya

90ನೇ ವರ್ಷದ ಹುಟ್ಟುಹಬ್ಬ ಆಚರಿಸುತ್ತಿರುವ ಡಾ| ಮೋಹನ ದಾಸ್ ರವರಿಗೆ ಸೌತಡ್ಕ ಕ್ಷೇತ್ರದಿಂದ ಗೌರವಾರ್ಪಣೆ

Suddi Udaya

ವಾಣಿ ಆಂ.ಮಾ. ಶಾಲೆಯ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾಗಿ ರಾಜೇಶ್ ಶೆಟ್ಟಿ, ಉಪಾಧ್ಯಕ್ಷರಾಗಿ ರಾಧಿಕ ಕೆ. ಕಾಮತ್ ಆಯ್ಕೆ

Suddi Udaya

ಕಲ್ಮಂಜ: ಅಲೆಕ್ಕಿ ನಿವಾಸಿ ಗೀತಾ ನಿಧನ

Suddi Udaya
error: Content is protected !!